AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಭಾಷೆಯ ಸೆಲೆಬ್ರಿಟಿಗಳಿಗೆ ರಾಜ್​ಕುಮಾರ್ ಬಗ್ಗೆ ಇತ್ತು ವಿಶೇಷ ಪ್ರೀತಿ

ಕಮಲ್ ಹಾಸನ್​ಗೂ ರಾಜ್​ಕುಮಾರ್ ಬಗ್ಗೆ ವಿಶೇಷ ಗೌರವ ಇತ್ತು. ‘ಜೆಂಟಲ್​ಮೆನ್ ಎಂದರೆ ರಾಜ್​ಕುಮಾರ್’ ಎಂದು ಕಮಲ್ ಹಾಸನ್ ಹೇಳಿದ್ದರು. ‘ನಾನು ದೇವರ ರೀತಿ ಪೂಜಿಸಿದ್ದು ಕನ್ನಡದ ಕಂಠೀರವ ರಾಜ್​ಕುಮಾರ್’ ಎಂದು ಚಿರಂಜೀವಿ ಹೇಳಿದ್ದರು.

ಪರಭಾಷೆಯ ಸೆಲೆಬ್ರಿಟಿಗಳಿಗೆ ರಾಜ್​ಕುಮಾರ್ ಬಗ್ಗೆ ಇತ್ತು ವಿಶೇಷ ಪ್ರೀತಿ
Rajkumar
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Nov 01, 2024 | 10:55 AM

ಪರಭಾಷೆಯ ಅನೇಕ ಸೆಲೆಬ್ರಿಟಿಗಳಿಗೆ ಕನ್ನಡದ ಮೇಲೆ, ಕನ್ನಡದ ನಟರ ಮೇಲೆ ವಿಶೇಷ ಪ್ರೀತಿ ಇದೆ. ಅದರಲ್ಲೂ ರಾಜ್​ಕುಮಾರ್ ಅವರ ಮೇಲೆ ವಿಶೇಷ ಪ್ರೀತಿ ಇತ್ತು. ರಾಜ್​ಕುಮಾರ್ ಎಂದರೆ ಕನ್ನಡ, ಕನ್ನಡ ಎಂದರೆ ರಾಜ್​ಕುಮಾರ್ ಎನ್ನುವ ಭಾವನೆ ಅನೇಕರಿಗೆ ಇದೆ. ಅವರು ಕನ್ನಡ ಚಿತ್ರರಂಗಕ್ಕೆ, ಕನ್ನಡಕ್ಕೆ ನೀಡಿದ ಕೊಡುಕೆ ತುಂಬಾನೇ ದೊಡ್ಡದು.

ಅಮಿತಾಭ್ ಬಚ್ಚನ್ ಹಾಗೂ ರಜನಿಕಾಂತ್ ಅವರಿಗೆ ರಾಜ್​ಕುಮಾರ್ ಜೊತೆ ಒಳ್ಳೆಯ ಬಾಂಧವ್ಯ ಇತ್ತು. ರಜನಿಕಾಂತ್ ಅವರು ಕರ್ನಾಟಕಕ್ಕೆ ಬಂದಾಗ ರಾಜ್​ಕುಮಾರ್ ಅವರನ್ನು ಭೇಟಿ ಮಾಡುತ್ತಿದ್ದರು. ಅನೇಕ ಬಾರಿ ಈ ಭೇಟಿ ನಡೆದಿತ್ತು. ರಾಜ್​ಕುಮಾರ್ ಮನೆಯಲ್ಲಿ ಅನೇಕ ಬಾರಿ ರಜನಿಕಾಂತ್ ಊಟ ಮಾಡಿದ್ದರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಇಬ್ಬರೂ ರಾಜ್​ಕುಮಾರ್ ಬಗ್ಗೆ ಮಾತನಾಡಿದ್ದರು. ‘ಶಿವಾಜಿ ಗಣೇಶನ್​, ಎಂಜಿಆರ್​ ಸೇರಿದರೆ ರಾಜ್​ಕುಮಾರ್’ ಎಂದಿದ್ದರು ರಜನಿಕಾಂತ್.

ಕಮಲ್ ಹಾಸನ್​ಗೂ ರಾಜ್​ಕುಮಾರ್ ಬಗ್ಗೆ ವಿಶೇಷ ಗೌರವ ಇತ್ತು. ‘ಜೆಂಟಲ್​ಮೆನ್ ಎಂದರೆ ರಾಜ್​ಕುಮಾರ್’ ಎಂದು ಕಮಲ್ ಹಾಸನ್ ಹೇಳಿದ್ದರು. ‘ನಾನು ದೇವರ ರೀತಿ ಪೂಜಿಸಿದ್ದು ಕನ್ನಡದ ಕಂಠೀರವ ರಾಜ್​ಕುಮಾರ್’ ಎಂದು ಚಿರಂಜೀವಿ ಹೇಳಿದ್ದರು.

ರಾಜ್​ಕುಮಾರ್ ಅವರು ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಈಗಲೂ ಅನೇಕರಿಗೆ ಸ್ಫೂರ್ತಿ. ರಾಜ್​ಕುಮಾರ್ ಅವರು ‘ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು..’ ಹಾಡು ಈಗಲೂ ಅನೇಕರ ಫೇವರಿಟ್ ಎನಿಸಿಕೊಂಡಿದೆ. ಈ ಹಾಡನ್ನು ಕನ್ನಡ ರಾಜ್ಯೋತ್ಸವದ ದಿನ ಹಾಕಲಾಗುತ್ತದೆ.

ಇಂದು (ನವೆಂಬರ್ 1) ಕನ್ನಡ ರಾಜ್ಯೋತ್ಸವ. ಈ ವಿಶೇಷ ದಿನದ ಪ್ರಯುಕ್ತ ಅನೇಕರು ಈ ಹಾಡನ್ನು ಪ್ಲೇ ಮಾಡುತ್ತಾರೆ. ರಾಜ್​ಕುಮಾರ್​ಗೆ ಕನ್ನಡದ ಮೇಲೆ ವಿಶೇಷ ಪ್ರೀತಿ ಇತ್ತು. ಕನ್ನಡ ಬೆಳೆಯಲು ಅವರ ಸಿನಿಮಾಗಳು ಸಹಾಯ ಮಾಡಿವೆ. ಅವರಿಗೆ ಕನ್ನಡದ ಮೇಲೆ ಎಷ್ಟು ಪ್ರೀತಿ ಇತ್ತು ಎಂಬುದು ಆಗಾಗ ಸಾಬೀತು ಆಗುತ್ತಲೇ ಇದೆ.

ಕಮಲ್ ಹಾಸನ್​ಗೂ ರಾಜ್​ಕುಮಾರ್ ಬಗ್ಗೆ ವಿಶೇಷ ಗೌರವ ಇತ್ತು. ‘ಜೆಂಟಲ್​ಮೆನ್ ಎಂದರೆ ರಾಜ್​ಕುಮಾರ್’ ಎಂದು ಕಮಲ್ ಹಾಸನ್ ಹೇಳಿದ್ದರು. ‘ನಾನು ದೇವರ ರೀತಿ ಪೂಜಿಸಿದ್ದು ಕನ್ನಡದ ಕಂಠೀರವ ರಾಜ್​ಕುಮಾರ್’ ಎಂದು ಚಿರಂಜೀವಿ ಹೇಳಿದ್ದರು.

ಇದನ್ನೂ ಓದಿ: ‘ಬಘೀರ’ ಯಶಸ್ಸು: ಪುನೀತ್ ರಾಜ್​ಕುಮಾರ್ ಚಿತ್ರ ಹಿಡಿದು ಡ್ಯಾನ್ಸ್ ಮಾಡಿದ ಶ್ರೀಮುರಳಿ

ಕನ್ನಡದ ರಾಜ್ಯೋತ್ಸವಕ್ಕೆ ಅನೇಕ ಸೆಲೆಬ್ರಿಟಿಗಳು ವಿಶ್ ಮಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಇಂದು ಎಲ್ಲೆಡೆ ಕನ್ನಡದ ಕಲರವ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ