AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡ ರಜನಿಕಾಂತ್​; ರಿಷಬ್​ ಶೆಟ್ಟಿಯ ಬೆನ್ನು ತಟ್ಟಿದ ತಲೈವಾ

Rajinikanth | Kantara: ‘ಕಾಂತಾರ ಸಿನಿಮಾ ನೋಡುವಾಗ ರೋಮಾಂಚನ ಆಯಿತು. ರಿಷಬ್​ ಶೆಟ್ಟಿ ಅವರಿಗೆ ಹ್ಯಾಟ್ಸಾಫ್​. ಇಡೀ ತಂಡಕ್ಕೆ ಅಭಿನಂದನೆಗಳು’ ಎಂದು ರಜನಿಕಾಂತ್​ ಟ್ವೀಟ್​ ಮಾಡಿದ್ದಾರೆ.

Rishab Shetty: ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡ ರಜನಿಕಾಂತ್​; ರಿಷಬ್​ ಶೆಟ್ಟಿಯ ಬೆನ್ನು ತಟ್ಟಿದ ತಲೈವಾ
ರಜನಿಕಾಂತ್, ರಿಷಬ್ ಶೆಟ್ಟಿ
TV9 Web
| Edited By: |

Updated on: Oct 26, 2022 | 3:32 PM

Share

ಕನ್ನಡದ ‘ಕಾಂತಾರ’ (Kantara) ಸಿನಿಮಾ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಸಿನಿಮಾ ನೋಡಿ ಪರಭಾಷೆಯ ಸ್ಟಾರ್​ ಕಲಾವಿದರು ಮತ್ತು ತಂತ್ರಜ್ಞರು ಭೇಷ್​ ಎನ್ನುತ್ತಿದ್ದಾರೆ. ರಿಷಬ್​ ಶೆಟ್ಟಿ (Rishab Shetty) ಅವರ ನಟನೆ, ನಿರ್ದೇಶನಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿಬರುತ್ತಿದೆ. ಈಗಾಗಲೇ ಪ್ರಭಾಸ್​, ಕಂಗನಾ ರಣಾವತ್​, ಅನುಷ್ಕಾ ಶೆಟ್ಟಿ ಸೇರಿದಂತೆ ಅನೇಕ ಘಟಾನುಘಟಿಗಳು ಈ ಚಿತ್ರದ ಕುರಿತು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಈಗಿನದ್ದು ಸೂಪರ್​ ಸ್ಟಾರ್​ ರಜನಿಕಾಂತ್​ (Rajinikanth) ಸರದಿ. ಹೌದು, ರಜನಿಕಾಂತ್​ ಅವರು ‘ಕಾಂತಾರ’ ಚಿತ್ರ ವೀಕ್ಷಿಸಿದ್ದಾರೆ. ಬಳಿಕ ಟ್ವಿಟರ್​ ಮೂಲಕ ತಮ್ಮ ವಿಮರ್ಶೆ ತಿಳಿಸಿದ್ದಾರೆ. ಅವರಿಗೆ ಈ ಚಿತ್ರ ತುಂಬ ಇಷ್ಟ ಆಗಿದೆ. ಇಂಥ ಸಿನಿಮಾವನ್ನು ನಿರ್ಮಾಣ ಮಾಡಿದ ‘ಹೊಂಬಾಳೆ ಫಿಲ್ಮ್ಸ್​’ ಮತ್ತು ನಿರ್ದೇಶನ ಮಾಡಿದ ರಿಷಬ್​ ಶೆಟ್ಟಿ ಅವರನ್ನು ತಲೈವಾ ಮನಸಾರೆ ಹೊಗಳಿದ್ದಾರೆ.

ರಜನಿಕಾಂತ್​ ಅವರು ‘ಕಾಂತಾರ’ ಸಿನಿಮಾ ಬಗ್ಗೆ ಮಾಡಿದ ಟ್ವೀಟ್​ ವೈರಲ್​ ಆಗಿದೆ. ಇದನ್ನು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ರೀಟ್ವೀಟ್​ ಮಾಡಿಕೊಂಡಿದ್ದು, ತಲೈವಾಗೆ ಧನ್ಯವಾದ ತಿಳಿಸಿದೆ. ಇಂಥ ಲೆಜೆಂಡರಿ ನಟನಿಂದ ಕನ್ನಡದ ಸಿನಿಮಾಗೆ ಪ್ರಶಂಸೆ ಸಿಕ್ಕಿರುವುದು ಎಲ್ಲರಿಗೂ ಹೆಮ್ಮೆ ತಂದಿದೆ. ‘ಕಾಂತಾರ ಸಿನಿಮಾ ನೋಡುವಾಗ ರೋಮಾಂಚನ ಆಯಿತು. ರಿಷಬ್​ ಶೆಟ್ಟಿ ಅವರಿಗೆ ಹ್ಯಾಟ್ಸಾಫ್​. ಭಾರತೀಯ ಚಿತ್ರರಂಗದಲ್ಲಿ ಮಾಸ್ಟರ್​ ಪೀಸ್​ ಎನಿಸಿಕೊಂಡಿರುವ ಈ ಚಿತ್ರದ ಇಡೀ ತಂಡಕ್ಕೆ ಅಭಿನಂದನೆಗಳು’ ಎಂದು ರಜನಿಕಾಂತ್​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ
Image
Kantara: ‘ಇದು ರಿಷಬ್​ ಮಾಡಿದ ಚಿತ್ರ ಅಲ್ಲ, ದೇವರೇ ಮಾಡ್ಸಿದ್ದು’; ವಿದೇಶದಲ್ಲಿ ‘ಕಾಂತಾರ’ ನೋಡಿ ಜಗ್ಗೇಶ್​ ಪ್ರತಿಕ್ರಿಯೆ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Kantara Review: ಹಲವು ಸಂಘರ್ಷಗಳ ‘ಕಾಂತಾರ’; ರಿಷಬ್​ ಶೆಟ್ಟಿಯ ಹೊಸ ಅವತಾರ
Image
Kantara Review: ‘ಕಾಂತಾರ’ ವಿಮರ್ಶೆ ಮಾಡಿದ ರಮ್ಯಾ; ರಿಷಬ್​ ಶೆಟ್ಟಿ ಚಿತ್ರದ ಬಗ್ಗೆ ‘ಮೋಹಕ ತಾರೆ’ ಹೇಳಿದ್ದೇನು?

ತುಳುನಾಡಿನ ಭೂತ ಕೋಲ ಕುರಿತ ಕಥೆಯನ್ನು ‘ಕಾಂತಾರ’ ಚಿತ್ರ ಒಳಗೊಂಡಿದೆ. ರಿಷಬ್​ ಶೆಟ್ಟಿ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಅಚ್ಯುತ್​ ಕುಮಾರ್​, ಪ್ರಮೋದ್​ ಶೆಟ್ಟಿ, ಕಿಶೋರ್​ ಮುಂತಾದವರ ಪಾತ್ರಗಳು ಕೂಡ ಈ ಚಿತ್ರದಲ್ಲಿ ಗಮನ ಸೆಳೆದಿವೆ. ಸೆ.30ರಂದು ಈ ಚಿತ್ರ ಕನ್ನಡದಲ್ಲಿ ರಿಲೀಸ್​ ಆಯಿತು. ಬಳಿಕ ಬೇರೆ ಬೇರೆ ಭಾಷೆಗಳಿಗೂ ಡಬ್​ ಆಗಿ ತೆರೆಕಂಡಿತು. ಎಲ್ಲ ಭಾಷೆಗಳಲ್ಲೂ ಪ್ರೇಕ್ಷಕರು ‘ಕಾಂತಾರ’ ಚಿತ್ರಕ್ಕೆ ಮನಸೋತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ