AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜ್​-ವಿಷ್ಣು ಅಭಿಮಾನಿಗಳು ಒಂದಾಗಿದ್ದಾರೆ ಎಂದರೆ ನಡುಕ ಶುರುವಾಗಿದೆ ಎಂದರ್ಥ’; ಬಿಬಿಎಂಪಿಗೆ ಎಚ್ಚರಿಸಿದ ಫ್ಯಾನ್ಸ್​

ಡಾ. ರಾಜ್​ಕುಮಾರ್​ ಮತ್ತು ಡಾ. ವಿಷ್ಣುವರ್ಧನ್​ ಅಭಿಮಾನಿಗಳ ನಡುವೆ ಕೆಲವೊಮ್ಮೆ ಘರ್ಷಣೆ ನಡೆದ ಉದಾಹರಣೆ ಕೂಡ ಇದೆ. ಆದರೆ ಅದನ್ನೆಲ್ಲ ಬದಿಗಿಟ್ಟು ಈಗ ಈ ಸ್ಟಾರ್​ ನಟರ ಅಭಿಮಾನಿಗಳು ಒಂದಾಗಿದ್ದಾರೆ.

‘ರಾಜ್​-ವಿಷ್ಣು ಅಭಿಮಾನಿಗಳು ಒಂದಾಗಿದ್ದಾರೆ ಎಂದರೆ ನಡುಕ ಶುರುವಾಗಿದೆ ಎಂದರ್ಥ’; ಬಿಬಿಎಂಪಿಗೆ ಎಚ್ಚರಿಸಿದ ಫ್ಯಾನ್ಸ್​
‘ರಾಜ್​-ವಿಷ್ಣು ಅಭಿಮಾನಿಗಳು ಒಂದಾಗಿದ್ದಾರೆ ಎಂದರೆ ನಡುಕ ಶುರುವಾಗಿದೆ ಎಂದರ್ಥ’; ಬಿಬಿಎಂಪಿಗೆ ಎಚ್ಚರಿಸಿದ ಫ್ಯಾನ್ಸ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 05, 2021 | 4:22 PM

Share

ಅನುಮತಿ ಪಡೆಯದೇ ಬೆಂಗಳೂರಿನಲ್ಲಿ ಅಭಿಮಾನಿಗಳು ನಿರ್ಮಿಸಿದ ರಾಜ್​ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್ ಸೇರಿದಂತೆ ಮಹಾನ್ ನಾಯಕರ ಪುತ್ಥಳಿಗಳನ್ನು ಶೀಘ್ರದಲ್ಲೇ ತೆರವು ಮಾಡಲು ಬಿಬಿಎಂಪಿ ನಿರ್ಧರಿಸಿದೆ. ಕೋರ್ಟ್​ ಆದೇಶದ ಹಿನ್ನೆಲೆಯಲ್ಲಿ ಬಿಬಿಎಂಪಿ ಈ ನಿರ್ಧಾರಕ್ಕೆ ಬಂದಿದೆ. ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಬಿಬಿಎಂಪಿಗೆ ರಾಜ್​ಕುಮಾರ್​ ಹಾಗೂ ವಿಷ್ಣು ಅಭಿಮಾನಿಗಳು ಒಟ್ಟಾಗಿ ಎಚ್ಚರಿಕೆ ನೀಡಿದ್ದಾರೆ.

ಡಾ. ರಾಜ್​ಕುಮಾರ್​ ಮತ್ತು ಡಾ. ವಿಷ್ಣುವರ್ಧನ್​ ಅಭಿಮಾನಿಗಳ ನಡುವೆ ಕೆಲವೊಮ್ಮೆ ಘರ್ಷಣೆ ನಡೆದ ಉದಾಹರಣೆ ಕೂಡ ಇದೆ. ಆದರೆ ಅದನ್ನೆಲ್ಲ ಬದಿಗಿಟ್ಟು ಈಗ ಈ ಸ್ಟಾರ್​ ನಟರ ಅಭಿಮಾನಿಗಳು ಒಂದಾಗಿದ್ದಾರೆ. ತಮ್ಮ ನೆಚ್ಚಿನ ಹೀರೋಗಳ ಪುತ್ಥಳಿಗಳನ್ನು ಉಳಿಸಿಕೊಳ್ಳಲು ಜೊತೆಯಾಗಿ ಕೈ ಜೋಡಿಸಿದ್ದಾರೆ. ಈ ಬಗ್ಗೆ ಭಾನುವಾರ (ಸೆಪ್ಟೆಂಬರ್ 5) ಸುದ್ದಿಗೋಷ್ಠಿ ನಡೆಸಿದ್ದಾರೆ.

‘40 ವರ್ಷಗಳಲ್ಲಿ ರಾಜ್​​ಕುಮಾರ್​ ಮತ್ತು ವಿಷ್ಣುವರ್ಧನ್ ಅವರನ್ನು ಸೇರಿಸೋಕೆ ಯಾರಿಂದಲೂ ಸಾಧ್ಯವಾಗಿರಲಿಲ್ಲ. ಅದನ್ನು ನಾನು ಹಾಗೂ ಕ್ರಾಂತಿರಾಜ್ ಮಾಡಿದ್ದೇವೆ. ಒಂದೇ ಒಂದು ಪ್ರತಿಮೆಗೆ ಕೈ ಇಟ್ರೆ ಬಿಬಿಎಂಪಿಗೆ ಮುತ್ತಿಗೆ ಹಾಕಿ, ಬೀಗ ಹಾಕುತ್ತೇವೆ. ಮಹಾತ್ಮ ಗಾಂಧಿ, ಇಂದಿರಾ ಗಾಂಧಿ ಸೇರಿ ಎಲ್ಲರ ಪ್ರತಿಮೆ ತೆಗೆಯಿರಿ. ಆಗ ನಾವು ಈ ಪ್ರತಿಮೆ ತೆಗೆಯಲು ಅವಕಾಶ ನೀಡುತ್ತೇವೆ. ಪ್ರತಿಮೆ ನಮ್ಮಹಕ್ಕು’ ಎಂದು ರಾಜ್ ಸಂಘಟನೆ‌ ಮುಖಂಡ ತ್ಯಾಗರಾಜ್ ಹೇಳಿದ್ದಾರೆ.

‘ಬಿಬಿಎಂಪಿ ಕಮಿಷನರ್​ ಗೌರವ್ ಗುಪ್ತಾಗೆ ನಮ್ಮ ಬಗ್ಗೆ ಗೊತ್ತಿಲ್ಲ ಅನಿಸುತ್ತದೆ. ಡಾ.ರಾಜ್, ಡಾ.ವಿಷ್ಣುವರ್ಧನ್ ವಿಚಾರಕ್ಕೆ ಬಂದ್ರೆ ನಿಮಗೆ ಕಂಟಕ ಎಂದು ಘಂಟಾಘೋಷವಾಗಿ ಹೇಳುತ್ತೇನೆ. ಡಾ. ರಾಜ್​ಕುಮಾರ್ ಮತ್ತು ವಿಷ್ಣು ಅಭಿಮಾನಿಗಳು ಜೊತೆಗೂಡಿದ್ದಾರೆ ಎಂದರೆ ಅಲ್ಲಿ ನಡುಕ ಶುರುವಾಗಿದೆ ಅಂತ ಅರ್ಥ’ ಎಂದು ಎಚ್ಚರಿಸಿದ್ದಾರೆ ವಿಷ್ಣುವರ್ಧನ್ ಸಂಘಟನೆ ಮುಖಂಡ ಕ್ರಾಂತಿರಾಜು.

‘ಮಹಾನಗರ ಪಾಲಿಕೆ ಅಧಿಕಾರಿಗಳು ಯಾವುದೇ ಕಾರಣಕ್ಕೂ ಪ್ರತಿಮೆ ತೆರವುಗೊಳಿಸಬಾರದು. ಪ್ರತಿಮೆ ತೆರವು ಗೊಳಿಸಿದ್ರೆ ಯಾವುದೇ ತ್ಯಾಗಕ್ಕೂ ಸಿದ್ಧರಿದ್ದೇವೆ’ ಎಂದರು ಅಭಿಮಾನಿಗಳ ಸಂಘದ ಮುಖಂಡ ಪಾಲನೇತ್ರ.

ಇದನ್ನೂ ಓದಿ: ಪುತ್ಥಳಿ ತೆರವು ವಿಚಾರ: ಸರ್ಕಾರದ ನಿರ್ಲಕ್ಷ್ಯತನ ಕೂಡ ಇದರಲ್ಲಿದೆ ಎಂದ ವಿಷ್ಣುವರ್ಧನ್​ ಅಳಿಯ ಅನಿರುದ್ಧ್​​

ಸಂಘರ್ಷ ಮರೆತು ಒಂದಾದ ರಾಜ್​-ವಿಷ್ಣು ಫ್ಯಾನ್ಸ್​; ಪುತ್ಥಳಿ ತೆರವು ಕಾರ್ಯಕ್ಕೆ ಮುಂದಾದ ಬಿಬಿಎಂಪಿ ವಿರುದ್ಧ ಆಕ್ರೋಶ

ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ