AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ ತಿಂಗಳಲ್ಲಿ ಹೊಸ ರೂಪದಲ್ಲಿ ರಿಲೀಸ್​ ಆಗಲಿದೆ ರಾಜ್​ಕುಮಾರ್ ನಟನೆಯ​ ‘ಭಾಗ್ಯವಂತರು’

ರಾಜ್​ಕುಮಾರ್​ ನಟನೆಯ ‘ಭಾಗ್ಯವಂತರು’ ಸಿನಿಮಾ ನವೆಂಬರ್​ನಲ್ಲಿ ರೀ-ರಿಲೀಸ್​ ಆಗುತ್ತಿದೆ. ಡಿ.ಐ, 7.1 ಟ್ರ್ಯಾಕ್ ಸೇರಿದಂತೆ ಅನೇಕ ಹೊಸ ತಂತ್ರಜ್ಞಾನ ಅಳವಡಿಕೆಯೊಂದಿಗೆ ಸಿನಿಮಾ ಮರು ಬಿಡುಗಡೆಯಾಗುತ್ತಿದೆ.

ನವೆಂಬರ್ ತಿಂಗಳಲ್ಲಿ ಹೊಸ ರೂಪದಲ್ಲಿ ರಿಲೀಸ್​ ಆಗಲಿದೆ ರಾಜ್​ಕುಮಾರ್ ನಟನೆಯ​ ‘ಭಾಗ್ಯವಂತರು’
ಭಾಗ್ಯವಂತರು
TV9 Web
| Edited By: |

Updated on:Oct 23, 2021 | 9:20 AM

Share

ರಾಜ್​ಕುಮಾರ್​ ನಟನೆಯ ಸಾಕಷ್ಟು ಸಿನಿಮಾಗಳು ಸೂಪರ್​ ಹಿಟ್​ ಸಾಲಿನಲ್ಲಿವೆ. ಈ ಪೈಕಿ ಅನೇಕ ಸಿನಿಮಾಗಳನ್ನು ವಿನೂತನ ತಂತ್ರಜ್ಞಾನ ಬಳಸಿ ಹೊಸ ರೂಪದಲ್ಲಿ ರಿಲೀಸ್​ ಮಾಡುವ ಪ್ರಯತ್ನ ನಡೆದಿದೆ. ಈಗ ರಾಜ್​ಕುಮಾರ್​ ನಟನೆಯ ‘ಭಾಗ್ಯವಂತರು’ ಸಿನಿಮಾ ನವೆಂಬರ್​ನಲ್ಲಿ ರೀ-ರಿಲೀಸ್​ ಆಗುತ್ತಿದೆ. ಡಿ.ಐ, 7.1 ಟ್ರ್ಯಾಕ್ ಸೇರಿದಂತೆ ಅನೇಕ ಹೊಸ ತಂತ್ರಜ್ಞಾನ ಅಳವಡಿಕೆಯೊಂದಿಗೆ ಸಿನಿಮಾ ಮರು ಬಿಡುಗಡೆಯಾಗುತ್ತಿದೆ. ಮುನಿರಾಜು ಈ ಚಿತ್ರವನ್ನು ಮತ್ತೆ ತೆರೆಗೆ ತರುವ ಪ್ರಯತ್ನ ಮಾಡಿದ್ದಾರೆ.

ಎಚ್​​.ಆರ್​​. ಭಾರ್ಗವ್​ ಅವರ ನಿರ್ದೇಶನದಲ್ಲಿ ಮೂಡಿ ಬಂದಿದ್ದ ‘ಭಾಗ್ಯವಂತರು’ ಚಿತ್ರದಲ್ಲಿ ರಾಜ್​ಕುಮಾರ್ ಹಾಗೂ ಬಿ.ಸರೋಜಾದೇವಿ ಅವರು ನಟಿಸಿದ್ದರು. ದ್ವಾರಕೀಶ್ ಈ ಚಿತ್ರದ ನಿರ್ಮಾಪಕರು. ಸಿನಿಮಾ ರೀ-ರೀಲಿಸ್​ ಆಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಭಾರ್ಗವ್​, ‘ನಾನು ಆಗಲೇ ರಾಜ್​ಕುಮಾರ್ ಅವರು ನಟಿಸಿದ್ದ ಬಬ್ರುವಾಹನ, ನಾ ನಿನ್ನ ಮರೆಯಲಾರೆ, ಜಗ ಮೆಚ್ಚಿದ ಮಗ ಸೇರಿದಂತೆ ಅನೇಕ ಚಿತ್ರಗಳಿಗೆ ಸಹ ನಿರ್ದೇಶನ ಮಾಡಿದ್ದೆ. ಹಾಗಾಗಿ ರಾಜ್ ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿ . ನನಗೂ ಅವರೆಂದರೆ ಅಷ್ಟೇ ಪ್ರೀತಿ. ನಿರ್ಮಾಪಕ ದ್ವಾರಕೀಶ್ ಹಾಗೂ ರಾಜ್​ಕುಮಾರ್ ಇಬ್ಬರೂ ನೀವೆ ಈ ಚಿತ್ರ ನಿರ್ದೇಶನ ಮಾಡಬೇಕು ಎಂದರು. ಆಗ ನಾನು ‘ಭಾಗ್ಯವಂತರು’ ಚಿತ್ರವನ್ನು ನಿರ್ದೇಶಿಸಿದೆ. ನನ್ನ ಮೊದಲ ನಿರ್ದೇಶನದ ಚಿತ್ರವೇ ಸೂಪರ್ ಹಿಟ್ ಆಯಿತು. ಈಗ ಮುನಿರಾಜು ನೂತನ ತಂತ್ರಜ್ಞಾನ ಅಳವಡಿಕೆಯೊಂದಿಗೆ ಈ ಚಿತ್ರವನ್ನು ಮರು‌ ಬಿಡುಗಡೆ ಮಾಡುತ್ತಿದ್ದಾರೆ ಅವರಿಗೆ ಒಳ್ಳೆಯದಾಗಲಿ’ ಎಂದರು ಹಿರಿಯ ನಿರ್ದೇಶಕ ಭಾರ್ಗವ.

‘ನಾನು ಅಪ್ಪಟ ಅಣ್ಣಾವ್ರ ಅಭಿಮಾನಿ. ರಾಜ್​ಕುಮಾರ್ ಎಂದರೆ ನನ್ನ ಪ್ರಾಣ. 1978ನೇ ಇಸವಿಯಿಂದ ಕನ್ನಡ ಚಿತ್ರರಂಗದೊಂದಿಗೆ ನಂಟು. ಹದಿನೆಂಟು ವರ್ಷಗಳ ಕಾಲ ವಜ್ರೇಶ್ವರಿ ಸಂಸ್ಥೆಯಲ್ಲಿ ಕೆಲಸ ಮಾಡಿದ್ದೇನೆ. ಪಾರ್ವತಮ್ಮ ರಾಜ್​ಕುಮಾರ್ ಅವರೇ ನನ್ನನ್ನು ಮೊದಲು‌ ಚಿತ್ರಮಂದಿರದ ಆರ್​​.ಪಿ. ಯಾಗಿ ನೇಮಕ‌ ಮಾಡಿ ಯಳಂದೂರಿಗೆ ಕಳುಹಿಸಿದ್ದರು. ನಾನು ಮೊದಲು ಮರು ಬಿಡುಗಡೆ ಮಾಡಿದ ಚಿತ್ರ ‘ಆಪರೇಷನ್ ಡೈಮಂಡ್ ರಾಕೆಟ್’. ನಂತರ ‘ನಾನೊಬ್ಬ ಕಳ್ಳ’ ಸೇರಿ ರಾಜ್​ಕುಮಾರ್ ಅವರ ನಾಲ್ಕೈದು ಚಿತ್ರಗಳನ್ನು ಮರು ಬಿಡುಗಡೆ ಮಾಡಿದ್ದೇನೆ. ಈಗ ‘ಭಾಗ್ಯವಂತರು’ ಚಿತ್ರವನ್ನು ಸುಮಾರು ನೂರೈವತ್ತಕ್ಕೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುತ್ತಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ’ ಎಂದರು ಮುನಿರಾಜು.

ಇದನ್ನೂ ಓದಿ: ದುನಿಯಾ ವಿಜಯ್ ನಿರ್ದೇಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಿವರಾಜ್​ಕುಮಾರ್

ಅಮಿತ್​ ಶಾಗೆ ಬರ್ತ್​ಡೇ ವಿಶ್​ ಮಾಡಿ ಟ್ರೋಲ್​ ಆದ ಸಾರಾ ಅಲಿ ಖಾನ್​; ಇದರ ಹಿಂದಿದೆ ಡ್ರಗ್​ ವಿಚಾರ

Published On - 9:52 pm, Fri, 22 October 21

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ