AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲರ್ನಿಂಗ್ ಆ್ಯಪ್ ಪರಿಚಯಿಸಿದ ರಾಜ್​ಕುಮಾರ್​ ಕುಟುಂಬ; ಆನ್​ಲೈನ್​ ಶಿಕ್ಷಣದತ್ತ ಹೊಸ ಹೆಜ್ಜೆ

ರಾಜ್​ ಕುಟುಂಬ​ ‘ರಾಜ್​ಕುಮಾರ್​ ಲರ್ನಿಂಗ್ ಆ್ಯಪ್’ ಪರಿಚಯಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಗೆ ಮುಂದಾಗಿರುವ ಡಾ.ರಾಜ್ ಕುಟುಂಬ, ಆ್ಯಪ್ ರಿಲೀಸ್​ ಮಾಡಿದೆ.

ಲರ್ನಿಂಗ್ ಆ್ಯಪ್ ಪರಿಚಯಿಸಿದ ರಾಜ್​ಕುಮಾರ್​ ಕುಟುಂಬ; ಆನ್​ಲೈನ್​ ಶಿಕ್ಷಣದತ್ತ ಹೊಸ ಹೆಜ್ಜೆ
ಲರ್ನಿಂಗ್ ಆ್ಯಪ್ ಪರಿಚಯಿಸಿದ ರಾಜ್​ಕುಮಾರ್​ ಕುಟುಂಬ; ಆನ್​ಲೈನ್​ ಶಿಕ್ಷಣದತ್ತ ಹೊಸ ಹೆಜ್ಜೆ
TV9 Web
| Edited By: |

Updated on: Aug 16, 2021 | 10:04 PM

Share

ಭಾರತೀಯ ಲೋಕ ಸೇವಾ ಆಯೋಗ (ಯುಪಿಎಸ್​ಇ) ಪರೀಕ್ಷೆ ಬರೆಯುವವರಿಗೆ ತರಬೇತಿ ನೀಡಲು ರಾಜ್​ಕುಮಾರ್​ ಕುಟುಂಬದ ಅಕಾಡೆಮಿ ಆರಂಭಿಸಿದ್ದು, ಇದರಡಿಯಲ್ಲಿ ಸಾಕಷ್ಟು ಜನರು ಶಿಕ್ಷಣ ಪಡೆದಿದ್ದಾರೆ. ಈಗ ಕೊವಿಡ್​ ಇರುವ ಕಾರಣ ಆನ್​ಲೈನ್​ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ. ಹೀಗಿರುವಾಗಲೇ ರಾಜ್​ ಕುಟುಂಬ​ ‘ರಾಜ್​ಕುಮಾರ್​ ಲರ್ನಿಂಗ್ ಆ್ಯಪ್’ ಪರಿಚಯಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಗೆ ಮುಂದಾಗಿರುವ ಡಾ.ರಾಜ್ ಕುಟುಂಬ, ಆ್ಯಪ್ ರಿಲೀಸ್​ ಮಾಡಿದೆ. ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರು ಆ್ಯಪ್​ ಲೋಕಾರ್ಪಣೆ ಮಾಡಿದ್ದಾರೆ.

ಆ್ಯಪ್​ ಬಿಡುಗಡೆ ಮಾಡಿ ನಂತರ ಮಾತನಾಡಿದ ಬಸವರಾಜ್ ಬೊಮ್ಮಾಯಿ, ‘ರಾಘಣ್ಣ ಅವರು ನನಗೆ ಅತ್ಯಂತ ಆತ್ಮೀಯ ವ್ಯಕ್ತಿ. ಚಿಕ್ಕ ವಯಸ್ಸಿನಿಂದಲೂ ಪರಿಚಯ. ಡಾ.ರಾಜ್ ಕುಟುಂಬದಿಂದ ಹುಬ್ಬಳ್ಳಿಗೆ ನಿಕಟ ಸಂಬಂಧ ಇರೋದು ರಾಘಣ್ಣನಿಗೆ ಮಾತ್ರ. ನನ್ನ ಅಮ್ಮನಿಗೆ ರಾಘಣ್ಣ ಅಂದ್ರೆ ಇಷ್ಟ. ಅಪ್ಪು, ಶಿವಣ್ಣ ಜತೆ ಬಹಳಷ್ಟು ಆತ್ಮೀಯತೆ ಇದೆ’ ಎಂದರು.

‘ಡಾ.ರಾಜ್ ಕುಮಾರ್ ಓರ್ವ ಸಾಧಕ. ಸಾಧಕನಿಗೆ ಸಾವು ಅಂತ್ಯ ಅಲ್ಲ ಎಂದು ಸ್ವಾಮಿ ವಿವೇಕಾನಂದ ಅವರು ಹೇಳಿದ್ದರು. ಸಾವಿನ ನಂತರವು ನಮ್ಮ ಬದುಕು ಇರಬೇಕು. ಇದು ಎಲ್ಲಾರಿಗೂ‌ ಹೇಳುವ ಮಾತು. ಆಕಾಶದಲ್ಲಿರೋ ನಕ್ಷತ್ರ ಡಾ.ರಾಜ್ ಕುಮಾರ್. ಆಕಾಶದಲ್ಲಿ ಸಾಕಷ್ಟು ನಕ್ಷತ್ರಗಳಿರುತ್ತದೆ. ಅದಕ್ಕೆ ಹಲವಾರು ಹೆಸರುಗಳಿರುತ್ತದೆ. ನಾನು ಒಂದು ನಕ್ಷತ್ರದ ಹೆಸರು ಹೇಳುವುದು ಡಾ.ರಾಜ್ ಕುಮಾರ್. ಅತ್ಯಂತ ಸರಳವಾಗಿ ಇರಬೇಕೆಂದು ಅವರಿಂದ ಕಲಿಯಬೇಕು’ ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.

‘ಎಷ್ಟೋ ಜನ ಸ್ಟಾರ್ ಆಗಿದ್ರು ಅವರಷ್ಟು ವಿನಮ್ರತೆಗ ಬೇರೆಯವರಿಗಿಲ್ಲ. ಡಾ.ರಾಜ್‌ರಲ್ಲಿ ಮುಗ್ಧತೆ ಇತ್ತು.  ಅವರು‌ ಇವಾಗ ಹುಟ್ಟಿರೋ ಮಗು ತರ. ಡಾ.ರಾಜ್ ಕುಮಾರ್ ಸ್ಟೂಡೆಂಟ್ ಫಾರ್ ಎವರ್’ ಎಂದರು ಅವರು.

ಇದನ್ನೂ ಓದಿ: ದಾವಣಗೆರೆಯಲ್ಲಿ ಬೀಜದುಂಡೆ ಭೂಮಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಭೈರತಿ ಬಸವರಾಜ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ