AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್​ ಸಿನಿಮಾ ಟೈಟಲ್​ ಮರುಬಳಕೆಗೆ ಶೀಘ್ರವೇ ಬೀಳಲಿದೆ ಬ್ರೇಕ್​?

ರಾಜ್​ಕುಮಾರ್​ ನಟನೆಯ ಬಹುತೇಕ ಚಿತ್ರಗಳು ಹಿಟ್​ ಲಿಸ್ಟ್​ನಲ್ಲಿವೆ. ಈ ಸಿನಿಮಾದ ಟೈಟಲ್​ ಮರುಬಳಕೆಯಾದರೆ ಹೊಸ ಚಿತ್ರಕ್ಕೆ ಇದು ಪ್ಲಸ್​ ಪಾಯಿಂಟ್​ ಆಗುವುದರಲ್ಲಿ ಅನುಮಾನವಿಲ್ಲ.

ರಾಜ್​ಕುಮಾರ್​ ಸಿನಿಮಾ ಟೈಟಲ್​ ಮರುಬಳಕೆಗೆ ಶೀಘ್ರವೇ ಬೀಳಲಿದೆ ಬ್ರೇಕ್​?
ಡಾ. ರಾಜ್​ಕುಮಾರ್​
TV9 Web
| Edited By: |

Updated on: Aug 29, 2021 | 3:44 PM

Share

ಹಳೆಯ ಸಿನಿಮಾಗಳ ಟೈಟಲ್​ ಮರುಬಳಕೆ ಮಾಡಿಕೊಂಡು ಸಿನಿಮಾ ಮಾಡುವ ಟ್ರೆಂಡ್​ ಸ್ಯಾಂಡಲ್​ವುಡ್​ ಸೇರಿದಂತೆ ಬಹುತೇಕ ಚಿತ್ರರಂಗದಲ್ಲಿದೆ. ಹಳೆಯ ಹಿಟ್​ ಚಿತ್ರಗಳ ಹೆಸರನ್ನು ಮರುಬಳಕೆ ಮಾಡಿದರೆ ಸಿನಿಮಾಗೆ ಮೈಲೇಜ್​ ಸಿಗುತ್ತದೆ ಎಂಬುದು ನಿರ್ದೇಶಕರು ಹಾಗೂ ನಿರ್ಮಾಪಕರ ಲೆಕ್ಕಾಚಾರ. ಈಗ ಸ್ಯಾಂಡಲ್​ವುಡ್​ನಲ್ಲಿ ಈ ಬಗ್ಗೆ ಅಸಮಾಧಾನದ ಹೊಗೆ ಕಾಣಿಸಿಕೊಂಡಿದೆ. ಅದರಲ್ಲೂ ರಾಜ್​ಕುಮಾರ್​ ಸಿನಿಮಾದ ಟೈಟಲ್​ ಮರುಬಳಕೆ ಆಗಬಾರದು ಎನ್ನುವ ಆಗ್ರಹ ಜೋರಾಗಿದೆ. ಒಂದೊಮ್ಮೆ ಇದಕ್ಕೆ ಕಡಿವಾಣ ಬೀಳದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನೂ ನೀಡಲಾಗಿದೆ.

ರಾಜ್​ಕುಮಾರ್​ ನಟನೆಯ ಬಹುತೇಕ ಚಿತ್ರಗಳು ಹಿಟ್​ ಲಿಸ್ಟ್​ನಲ್ಲಿವೆ. ಈ ಸಿನಿಮಾದ ಟೈಟಲ್​ ಮರುಬಳಕೆಯಾದರೆ ಹೊಸ ಚಿತ್ರಕ್ಕೆ ಇದು ಪ್ಲಸ್​ ಪಾಯಿಂಟ್​ ಆಗುವುದರಲ್ಲಿ ಅನುಮಾನವಿಲ್ಲ. ಆದರೆ, ರಾಜ್​​ಕುಮಾರ್ ಅವರ ಚಿತ್ರದ ಟೈಟಲ್‌ಗಳಿಗೆ ತಕ್ಕಂತೆ ಸಿನಿಮಾಗಳು ಸಿದ್ಧವಾಗುತ್ತಿಲ್ಲ ಎಂಬುದು ರಾಜ್ ಕುಮಾರ್ ಅಭಿಮಾನಿ ಸಂಘಗಳ ಅಭಿಪ್ರಾಯ.

ಈ ಕಾರಣಕ್ಕೆ ರಾಜ್​ಕುಮಾರ್ ಅವರ ಹಳೆಯ ಸಿನಿಮಾದ ಟೈಟಲ್​​ಗಳ ಮರು ಬಳಕೆಗೆ ಬ್ರೇಕ್ ಬೀಳಬೇಕು ಎಂದು ಅಣ್ಣಾವ್ರ ಅಭಿಮಾನಿ ಸಂಘದವರು ಒತ್ತಾಯಿಸಿದ್ದಾರೆ. ಸೋಮವಾರ (ಆಗಸ್ಟ್ 30) ಚಲನ‌ಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಲಿದ್ದಾರೆ. ಈ ಮನವಿಯನ್ನು ಚಲನಚಿತ್ರ ವಾಣಿಜ್ಯ ಮಂಡಳಿ ಹೇಗೆ ಸ್ವೀಕರಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು, ಚಲನಚಿತ್ರ ವಾಣಿಜ್ಯ ಮಂಡಳಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೆ ಇದ್ದರೆ ಉಗ್ರ ಹೋರಾಟ ಮಾಡುವುದಾಗಿ ರಾಜ್​ಕುಮಾರ್​ ಅಭಿಮಾನಿ ಸಂಘದವರು ಎಚ್ಚರಿಕೆ ನೀಡಿದ್ದಾರೆ. ರಾಜ್​ಕುಮಾರ್​ ಸಿನಿಮಾ ಬಗ್ಗೆ ಯೂಟ್ಯೂಬ್​ ಮೊದಲಾದ ಕಡೆ ಹುಡುಕಾಟ ನಡೆಸಿದರೆ ಮರುಬಳಕೆಯಾದ ಸಿನಿಮಾಗಳ ಟೈಟಲ್​​ ರಾರಾಜಿಸುತ್ತದೆ. ಇದಕ್ಕೆ ಕಡಿವಾಣ ಹಾಕಬೇಕು ಅನ್ನೋ ಉದ್ದೇಶವೂ ಇದರಲ್ಲಿ ಸೇರಿದೆ.  ಸೋಮವಾರ  (ಆಗಸ್ಟ್ 29) ಬೆಳಿಗ್ಗೆ 11 ಘಂಟೆಗೆ ಮನವಿ ಮಾಡಲು ಅಣ್ಣಾವ್ರ ಅಭಿಮಾನಿ ಸಂಘಟನೆಯವರು ಚಲನಚಿತ್ರ ವಾಣಿಜ್ಯ ಮಂಡಳಿಗೆ ತೆರಳುತ್ತಿದ್ದಾರೆ.

ಇದನ್ನೂ ಓದಿ: ಶಾರುಖ್​ ಸ್ಟಾರ್​ ಆಗಲು ಕಾರಣವೇ ಡ್ರಗ್ಸ್​ ಕೇಸ್​ ಆರೋಪಿ ಅರ್ಮಾನ್​ ಕೊಹ್ಲಿ; ಇಲ್ಲಿದೆ ಪೂರ್ತಿ ಚರಿತ್ರೆ

ಯುವ ನಟನಿಗೆ ಮಚ್ಚು ಹಿಡಿಯುವ ಪಾಠ ಮಾಡಿದ ಶಿವರಾಜ್​ಕುಮಾರ್​

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ