AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್​ ಸಿನಿಮಾ ಟೈಟಲ್​ ಮರುಬಳಕೆಗೆ ಶೀಘ್ರವೇ ಬೀಳಲಿದೆ ಬ್ರೇಕ್​?

ರಾಜ್​ಕುಮಾರ್​ ನಟನೆಯ ಬಹುತೇಕ ಚಿತ್ರಗಳು ಹಿಟ್​ ಲಿಸ್ಟ್​ನಲ್ಲಿವೆ. ಈ ಸಿನಿಮಾದ ಟೈಟಲ್​ ಮರುಬಳಕೆಯಾದರೆ ಹೊಸ ಚಿತ್ರಕ್ಕೆ ಇದು ಪ್ಲಸ್​ ಪಾಯಿಂಟ್​ ಆಗುವುದರಲ್ಲಿ ಅನುಮಾನವಿಲ್ಲ.

ರಾಜ್​ಕುಮಾರ್​ ಸಿನಿಮಾ ಟೈಟಲ್​ ಮರುಬಳಕೆಗೆ ಶೀಘ್ರವೇ ಬೀಳಲಿದೆ ಬ್ರೇಕ್​?
ಡಾ. ರಾಜ್​ಕುಮಾರ್​
TV9 Web
| Edited By: |

Updated on: Aug 29, 2021 | 3:44 PM

Share

ಹಳೆಯ ಸಿನಿಮಾಗಳ ಟೈಟಲ್​ ಮರುಬಳಕೆ ಮಾಡಿಕೊಂಡು ಸಿನಿಮಾ ಮಾಡುವ ಟ್ರೆಂಡ್​ ಸ್ಯಾಂಡಲ್​ವುಡ್​ ಸೇರಿದಂತೆ ಬಹುತೇಕ ಚಿತ್ರರಂಗದಲ್ಲಿದೆ. ಹಳೆಯ ಹಿಟ್​ ಚಿತ್ರಗಳ ಹೆಸರನ್ನು ಮರುಬಳಕೆ ಮಾಡಿದರೆ ಸಿನಿಮಾಗೆ ಮೈಲೇಜ್​ ಸಿಗುತ್ತದೆ ಎಂಬುದು ನಿರ್ದೇಶಕರು ಹಾಗೂ ನಿರ್ಮಾಪಕರ ಲೆಕ್ಕಾಚಾರ. ಈಗ ಸ್ಯಾಂಡಲ್​ವುಡ್​ನಲ್ಲಿ ಈ ಬಗ್ಗೆ ಅಸಮಾಧಾನದ ಹೊಗೆ ಕಾಣಿಸಿಕೊಂಡಿದೆ. ಅದರಲ್ಲೂ ರಾಜ್​ಕುಮಾರ್​ ಸಿನಿಮಾದ ಟೈಟಲ್​ ಮರುಬಳಕೆ ಆಗಬಾರದು ಎನ್ನುವ ಆಗ್ರಹ ಜೋರಾಗಿದೆ. ಒಂದೊಮ್ಮೆ ಇದಕ್ಕೆ ಕಡಿವಾಣ ಬೀಳದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನೂ ನೀಡಲಾಗಿದೆ.

ರಾಜ್​ಕುಮಾರ್​ ನಟನೆಯ ಬಹುತೇಕ ಚಿತ್ರಗಳು ಹಿಟ್​ ಲಿಸ್ಟ್​ನಲ್ಲಿವೆ. ಈ ಸಿನಿಮಾದ ಟೈಟಲ್​ ಮರುಬಳಕೆಯಾದರೆ ಹೊಸ ಚಿತ್ರಕ್ಕೆ ಇದು ಪ್ಲಸ್​ ಪಾಯಿಂಟ್​ ಆಗುವುದರಲ್ಲಿ ಅನುಮಾನವಿಲ್ಲ. ಆದರೆ, ರಾಜ್​​ಕುಮಾರ್ ಅವರ ಚಿತ್ರದ ಟೈಟಲ್‌ಗಳಿಗೆ ತಕ್ಕಂತೆ ಸಿನಿಮಾಗಳು ಸಿದ್ಧವಾಗುತ್ತಿಲ್ಲ ಎಂಬುದು ರಾಜ್ ಕುಮಾರ್ ಅಭಿಮಾನಿ ಸಂಘಗಳ ಅಭಿಪ್ರಾಯ.

ಈ ಕಾರಣಕ್ಕೆ ರಾಜ್​ಕುಮಾರ್ ಅವರ ಹಳೆಯ ಸಿನಿಮಾದ ಟೈಟಲ್​​ಗಳ ಮರು ಬಳಕೆಗೆ ಬ್ರೇಕ್ ಬೀಳಬೇಕು ಎಂದು ಅಣ್ಣಾವ್ರ ಅಭಿಮಾನಿ ಸಂಘದವರು ಒತ್ತಾಯಿಸಿದ್ದಾರೆ. ಸೋಮವಾರ (ಆಗಸ್ಟ್ 30) ಚಲನ‌ಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಲಿದ್ದಾರೆ. ಈ ಮನವಿಯನ್ನು ಚಲನಚಿತ್ರ ವಾಣಿಜ್ಯ ಮಂಡಳಿ ಹೇಗೆ ಸ್ವೀಕರಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು, ಚಲನಚಿತ್ರ ವಾಣಿಜ್ಯ ಮಂಡಳಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೆ ಇದ್ದರೆ ಉಗ್ರ ಹೋರಾಟ ಮಾಡುವುದಾಗಿ ರಾಜ್​ಕುಮಾರ್​ ಅಭಿಮಾನಿ ಸಂಘದವರು ಎಚ್ಚರಿಕೆ ನೀಡಿದ್ದಾರೆ. ರಾಜ್​ಕುಮಾರ್​ ಸಿನಿಮಾ ಬಗ್ಗೆ ಯೂಟ್ಯೂಬ್​ ಮೊದಲಾದ ಕಡೆ ಹುಡುಕಾಟ ನಡೆಸಿದರೆ ಮರುಬಳಕೆಯಾದ ಸಿನಿಮಾಗಳ ಟೈಟಲ್​​ ರಾರಾಜಿಸುತ್ತದೆ. ಇದಕ್ಕೆ ಕಡಿವಾಣ ಹಾಕಬೇಕು ಅನ್ನೋ ಉದ್ದೇಶವೂ ಇದರಲ್ಲಿ ಸೇರಿದೆ.  ಸೋಮವಾರ  (ಆಗಸ್ಟ್ 29) ಬೆಳಿಗ್ಗೆ 11 ಘಂಟೆಗೆ ಮನವಿ ಮಾಡಲು ಅಣ್ಣಾವ್ರ ಅಭಿಮಾನಿ ಸಂಘಟನೆಯವರು ಚಲನಚಿತ್ರ ವಾಣಿಜ್ಯ ಮಂಡಳಿಗೆ ತೆರಳುತ್ತಿದ್ದಾರೆ.

ಇದನ್ನೂ ಓದಿ: ಶಾರುಖ್​ ಸ್ಟಾರ್​ ಆಗಲು ಕಾರಣವೇ ಡ್ರಗ್ಸ್​ ಕೇಸ್​ ಆರೋಪಿ ಅರ್ಮಾನ್​ ಕೊಹ್ಲಿ; ಇಲ್ಲಿದೆ ಪೂರ್ತಿ ಚರಿತ್ರೆ

ಯುವ ನಟನಿಗೆ ಮಚ್ಚು ಹಿಡಿಯುವ ಪಾಠ ಮಾಡಿದ ಶಿವರಾಜ್​ಕುಮಾರ್​

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?