AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೃಜನ್ ಅವರನ್ನು ಚಿಕ್ಕೆಜಮಾನರು ಎಂದು ಕರೆಯುತ್ತಿದ್ದ ರಾಜ್​ಕುಮಾರ್; ಕಾರಣ ಏನು?

Srujan Lokesh: ರವಿಶಂಕರ್ ಗೌಡ ಕೂಡ ‘ಜಿಎಸ್​ಟಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಟ್ರೇಲರ್ ಮೆಚ್ಚುಗೆ ಪಡೆದಿದೆ. ಸಿನಿಮಾ ಹೇಗಿದೆ ಎಂದು ನೋಡಲು ನವೆಂಬರ್ 28ರವರೆಗೆ ಕಾಯಬೇಕು. ಈ ಚಿತ್ರದ ಪ್ರಚಾರದ ವೇಳೆ ರವಿಶಂಕರ್ ಒಂದು ಅಚ್ಚರಿಯ ವಿಷಯ ರಿವೀಲ್ ಮಾಡಿದ್ದಾರೆ.

ಸೃಜನ್ ಅವರನ್ನು ಚಿಕ್ಕೆಜಮಾನರು ಎಂದು ಕರೆಯುತ್ತಿದ್ದ ರಾಜ್​ಕುಮಾರ್; ಕಾರಣ ಏನು?
Rajkumar
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 28, 2025 | 8:15 AM

Share

ಸೃಜನ್ ಲೋಕೇಶ್ ನಟಿಸಿ, ನಿರ್ದೇಶಿಸಿರುವ ‘ಜಿಎಸ್​ಟಿ’ ಸಿನಿಮಾ ನವೆಂಬರ್ 28ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಹಾರರ್ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ ಎಂಬುದು ವಿಶೇಷ. ಈ ಸಿನಿಮಾ ಪ್ರಚಾರಕ್ಕಾಗಿ ಸೃಜನ್ ಅವರು ಸಾಕಷ್ಟು ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ರಾಜ್​ಕುಮಾರ್ ಬಗ್ಗೆ ಮಾತನಾಡಿದ್ದಾರೆ.

ರವಿಶಂಕರ್ ಗೌಡ ಕೂಡ ‘ಜಿಎಸ್​ಟಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಟ್ರೇಲರ್ ಮೆಚ್ಚುಗೆ ಪಡೆದಿದೆ. ಸಿನಿಮಾ ಹೇಗಿದೆ ಎಂದು ನೋಡಲು ನವೆಂಬರ್ 28ರವರೆಗೆ ಕಾಯಬೇಕು. ಈ ಚಿತ್ರದ ಪ್ರಚಾರದ ವೇಳೆ ರವಿಶಂಕರ್ ಒಂದು ಅಚ್ಚರಿಯ ವಿಷಯ ರಿವೀಲ್ ಮಾಡಿದ್ದಾರೆ.

‘ರಾಜ್​ಕುಮಾರ್ ಅವರು ಸೃಜನ್​ನ ಚಿಕ್ಕ ಯಜಮಾನರೇ ಎಂದು ಕರೆಯುತ್ತಿದ್ದರು. ಅಣ್ಣಾವ್ರಿಗೆ ಆಶ್ರಯ ಕೊಟ್ಟ ಕುಟುಂಬ ಅದು. ಅದಕ್ಕೆ ಆ ಕುಟುಂಬದ ಮೇಲೆ ಅಷ್ಟು ಗೌರವ’ ಎಂದರು. ‘ನಮ್ಮ ತಾತ (ಸುಬ್ಬಯ್ಯ ನಾಯ್ಡು) ನಾಟಕ ಕಂಪನಿಯಲ್ಲಿ ರಾಜ್​ಕುಮಾರ್ ಕೆಲಸ ಮಾಡುತ್ತಿದ್ದರು’ ಎಂದು ಸೃಜನ್ ಹೇಳಿದ್ದಾರೆ.

ರಾಜ್​ಕುಮಾರ್ ಅವರು ಎಲ್ಲರಿಗೂ ಸಾಕಷ್ಟು ಗೌರವ ಕೊಡುತ್ತಿದ್ದರು. ಹಿರಿಯರು ಹಾಗೂ ಕಿರಿಯರು ಎಂದು ಅವರಿಗೂ ಬೇಧಭಾವ ತೋರಿಸಿಲ್ಲ. ಈ ಕಾರಣದಿಂದಲೇ ಅವರು ಸಾಕಷ್ಟು ಇಷ್ಟ ಆಗುತ್ತಿದ್ದರು. ರಾಜ್​ಕುಮಾರ್ ಅವರು ಮಾಡಿದ ಸಾಧನೆ ತುಂಬಾನೇ ದೊಡ್ಡದು. ಇತರ ಕಲಾವಿದರನ್ನು ಅವರು ಸಾಕಷ್ಟು ಗೌರವದಿಂದ ಕಾಣುತ್ತಿದ್ದರು.

ಇದನ್ನೂ ಓದಿ: ನನ್ನ ಸಿನಿಮಾ ಗ್ರೇಟ್ ಅಂತ ನಾನು ದೇವರಾಣೆಗೂ ಹೇಳಲ್ಲ: ಸೃಜನ್ ಲೋಕೇಶ್ ಪ್ರಾಮಾಣಿಕ ಮಾತು

ಚಿತ್ರರಂಗಕ್ಕೆ ಸಾಕಷ್ಟು ವಿಲನ್​ಗಳನ್ನು ನೀಡಿದ ಕೊಡುಗೆ ಕೂಡ ರಾಜ್​ಕುಮಾರ್​ಗೆ ಇದೆ. ನಾಟಕ ಕಂಪನಿಯಿಂದ ಬಂದ ಅವರು ನಂತರ ಸೂಪರ್ ಸ್ಟಾರ್ ಆದರು. ಅವರು ನಿಧನ ಹೊಂದಿ ಸಾಕಷ್ಟು ವರ್ಷಗಳು ಕಳೆದರೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಈಗಲೂ ಆಗುತ್ತಿದೆ. ಇದು ಅವರ ಸಾಧನೆಗೆ ಹಿಡಿದ ಕೈಗನ್ನಡಿ ಆಗಿದೆ. ಪರಭಾಷಾ ಕಲಾವಿದರೂ ಕೂಡ ಅವರಿಗೆ ಸಾಕಷ್ಟು ಗೌರವ ನೀಡುತ್ತಿದ್ದರು. ಅವರ ಕುಟುಂಬ ರಾಜಕೀಯದಲ್ಲಿ ಈಗಲೂ ಆ್ಯಕ್ಟಿವ್ ಆಗಿದೆ. 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:14 am, Fri, 28 November 25

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ