ಸೃಜನ್ ಅವರನ್ನು ಚಿಕ್ಕೆಜಮಾನರು ಎಂದು ಕರೆಯುತ್ತಿದ್ದ ರಾಜ್​ಕುಮಾರ್; ಕಾರಣ ಏನು?

Srujan Lokesh: ರವಿಶಂಕರ್ ಗೌಡ ಕೂಡ ‘ಜಿಎಸ್​ಟಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಟ್ರೇಲರ್ ಮೆಚ್ಚುಗೆ ಪಡೆದಿದೆ. ಸಿನಿಮಾ ಹೇಗಿದೆ ಎಂದು ನೋಡಲು ನವೆಂಬರ್ 28ರವರೆಗೆ ಕಾಯಬೇಕು. ಈ ಚಿತ್ರದ ಪ್ರಚಾರದ ವೇಳೆ ರವಿಶಂಕರ್ ಒಂದು ಅಚ್ಚರಿಯ ವಿಷಯ ರಿವೀಲ್ ಮಾಡಿದ್ದಾರೆ.

ಸೃಜನ್ ಅವರನ್ನು ಚಿಕ್ಕೆಜಮಾನರು ಎಂದು ಕರೆಯುತ್ತಿದ್ದ ರಾಜ್​ಕುಮಾರ್; ಕಾರಣ ಏನು?
Rajkumar
Edited By:

Updated on: Nov 28, 2025 | 8:15 AM

ಸೃಜನ್ ಲೋಕೇಶ್ ನಟಿಸಿ, ನಿರ್ದೇಶಿಸಿರುವ ‘ಜಿಎಸ್​ಟಿ’ ಸಿನಿಮಾ ನವೆಂಬರ್ 28ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಹಾರರ್ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ ಎಂಬುದು ವಿಶೇಷ. ಈ ಸಿನಿಮಾ ಪ್ರಚಾರಕ್ಕಾಗಿ ಸೃಜನ್ ಅವರು ಸಾಕಷ್ಟು ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ರಾಜ್​ಕುಮಾರ್ ಬಗ್ಗೆ ಮಾತನಾಡಿದ್ದಾರೆ.

ರವಿಶಂಕರ್ ಗೌಡ ಕೂಡ ‘ಜಿಎಸ್​ಟಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಟ್ರೇಲರ್ ಮೆಚ್ಚುಗೆ ಪಡೆದಿದೆ. ಸಿನಿಮಾ ಹೇಗಿದೆ ಎಂದು ನೋಡಲು ನವೆಂಬರ್ 28ರವರೆಗೆ ಕಾಯಬೇಕು. ಈ ಚಿತ್ರದ ಪ್ರಚಾರದ ವೇಳೆ ರವಿಶಂಕರ್ ಒಂದು ಅಚ್ಚರಿಯ ವಿಷಯ ರಿವೀಲ್ ಮಾಡಿದ್ದಾರೆ.

‘ರಾಜ್​ಕುಮಾರ್ ಅವರು ಸೃಜನ್​ನ ಚಿಕ್ಕ ಯಜಮಾನರೇ ಎಂದು ಕರೆಯುತ್ತಿದ್ದರು. ಅಣ್ಣಾವ್ರಿಗೆ ಆಶ್ರಯ ಕೊಟ್ಟ ಕುಟುಂಬ ಅದು. ಅದಕ್ಕೆ ಆ ಕುಟುಂಬದ ಮೇಲೆ ಅಷ್ಟು ಗೌರವ’ ಎಂದರು. ‘ನಮ್ಮ ತಾತ (ಸುಬ್ಬಯ್ಯ ನಾಯ್ಡು) ನಾಟಕ ಕಂಪನಿಯಲ್ಲಿ ರಾಜ್​ಕುಮಾರ್ ಕೆಲಸ ಮಾಡುತ್ತಿದ್ದರು’ ಎಂದು ಸೃಜನ್ ಹೇಳಿದ್ದಾರೆ.

ರಾಜ್​ಕುಮಾರ್ ಅವರು ಎಲ್ಲರಿಗೂ ಸಾಕಷ್ಟು ಗೌರವ ಕೊಡುತ್ತಿದ್ದರು. ಹಿರಿಯರು ಹಾಗೂ ಕಿರಿಯರು ಎಂದು ಅವರಿಗೂ ಬೇಧಭಾವ ತೋರಿಸಿಲ್ಲ. ಈ ಕಾರಣದಿಂದಲೇ ಅವರು ಸಾಕಷ್ಟು ಇಷ್ಟ ಆಗುತ್ತಿದ್ದರು. ರಾಜ್​ಕುಮಾರ್ ಅವರು ಮಾಡಿದ ಸಾಧನೆ ತುಂಬಾನೇ ದೊಡ್ಡದು. ಇತರ ಕಲಾವಿದರನ್ನು ಅವರು ಸಾಕಷ್ಟು ಗೌರವದಿಂದ ಕಾಣುತ್ತಿದ್ದರು.

ಇದನ್ನೂ ಓದಿ: ನನ್ನ ಸಿನಿಮಾ ಗ್ರೇಟ್ ಅಂತ ನಾನು ದೇವರಾಣೆಗೂ ಹೇಳಲ್ಲ: ಸೃಜನ್ ಲೋಕೇಶ್ ಪ್ರಾಮಾಣಿಕ ಮಾತು

ಚಿತ್ರರಂಗಕ್ಕೆ ಸಾಕಷ್ಟು ವಿಲನ್​ಗಳನ್ನು ನೀಡಿದ ಕೊಡುಗೆ ಕೂಡ ರಾಜ್​ಕುಮಾರ್​ಗೆ ಇದೆ. ನಾಟಕ ಕಂಪನಿಯಿಂದ ಬಂದ ಅವರು ನಂತರ ಸೂಪರ್ ಸ್ಟಾರ್ ಆದರು. ಅವರು ನಿಧನ ಹೊಂದಿ ಸಾಕಷ್ಟು ವರ್ಷಗಳು ಕಳೆದರೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಈಗಲೂ ಆಗುತ್ತಿದೆ. ಇದು ಅವರ ಸಾಧನೆಗೆ ಹಿಡಿದ ಕೈಗನ್ನಡಿ ಆಗಿದೆ. ಪರಭಾಷಾ ಕಲಾವಿದರೂ ಕೂಡ ಅವರಿಗೆ ಸಾಕಷ್ಟು ಗೌರವ ನೀಡುತ್ತಿದ್ದರು. ಅವರ ಕುಟುಂಬ ರಾಜಕೀಯದಲ್ಲಿ ಈಗಲೂ ಆ್ಯಕ್ಟಿವ್ ಆಗಿದೆ. 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:14 am, Fri, 28 November 25

ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us