AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ಚೆನ್ನಾಗಿರಲು ಮುಖ್ಯವಾಗಿ ಬೇಕಾಗಿದ್ದು ಏನು? ರಾಜ್​ಕುಮಾರ್ ಮಾತು ಈಗಲೂ ಪ್ರಸ್ತುತ

ಡಾ. ರಾಜ್‌ಕುಮಾರ್ ಅವರು ಸಿನಿಮಾದ ಗುಣಮಟ್ಟದ ಬಗ್ಗೆ ನೀಡಿದ ಸಂದರ್ಶನ ಈಗಲೂ ಪ್ರಸ್ತುತ. ಕಥೆ, ಸ್ವಂತಿಕೆ ಮತ್ತು ಮಾತೃಭಾಷೆಗೆ ಪ್ರಾಮುಖ್ಯತೆ ನೀಡಬೇಕು ಎಂದಿದ್ದ ಅವರ ಮಾತುಗಳು ಇಂದಿಗೂ ದಿಕ್ಸೂಚಿ. ತಂತ್ರಜ್ಞಾನ ಎಷ್ಟೇ ಬೆಳೆದರೂ, ಸಿನಿಮಾದ ಆತ್ಮ ಕಥೆಯೇ. ಕಥೆಯಿಲ್ಲದ ಸಿನಿಮಾ ಗೆಲ್ಲಲ್ಲ ಎಂದು ಅವರು ಹೇಳಿದ್ದು, ಕನ್ನಡ ಚಿತ್ರರಂಗಕ್ಕೆ ಮಾರ್ಗದರ್ಶನವಾಗಿದೆ.

ಸಿನಿಮಾ ಚೆನ್ನಾಗಿರಲು ಮುಖ್ಯವಾಗಿ ಬೇಕಾಗಿದ್ದು ಏನು? ರಾಜ್​ಕುಮಾರ್ ಮಾತು ಈಗಲೂ ಪ್ರಸ್ತುತ
ರಾಜ್​ಕುಮಾರ್
 ಶ್ರೀಲಕ್ಷ್ಮೀ ಎಚ್
| Updated By: Digi Tech Desk|

Updated on:Dec 03, 2025 | 9:20 AM

Share

ರಾಜ್​​ಕುಮಾರ್ (Rajkumar) ಅವರು ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದರು. ಮೊದಲು ಸಿನಿಮಾ ಕೆಲಸಗಳು ಮದ್ರಾಸ್​ನಲ್ಲಿ ನಡೆಯುತ್ತಿದ್ದವು ಮತ್ತು ರಾಜ್​ಕುಮಾರ್ ಅವರು ಅಲ್ಲಿಯೇ ಇದ್ದರು. ಕಪ್ಪು ಬಿಳುಪಿನಿಂದ ಆರಂಭ ಆದ ಸಿನಿಮಾ ಜರ್ನಿ, ಕಲರ್​ ಸಿನಿಮಾವರೆಗೆ ಬಂದಿತ್ತು ಎಂಬುದು ವಿಶೇಷ. ಅವರ ಹಳೆಯ ಸಂದರ್ಶನ ಒಂದು ಈಗ ವೈರಲ್ ಆಗಿದೆ. ಈ ಸಂದರ್ಶನದಲ್ಲಿ ಅವರು ಸಿನಿಮಾದಲ್ಲಿ ಏನು ಮುಖ್ಯ ಎಂಬ ಬಗ್ಗೆ ಮಾತನಾಡಿದ್ದರು. ಅವರು ಹೇಳಿದ ಮಾತು ಈಗಲೂ ಪ್ರಸ್ತುತವಾಗಿದೆ.

‘ಇತ್ತೀಚೆಗೆ ಸಿನಿಮಾ ಗುಣಮಟ್ಟ ಕಡಿಮೆ ಆಗಿದೆ ಎಂಬ ಮಾತಿದೆ’ ಎಂದು ರಾಜ್​ಕುಮಾರ್ ಅವರಿಗೆ ಸಂದರ್ಶಕರು ಕೇಳಿದರು. ಇದಕ್ಕೆ ರಾಜ್​ಕುಮಾರ್ ಅವರು ತಮ್ಮದೇ ಸ್ಟೈಲ್​ನಲ್ಲಿ ಉತ್ತರ ನೀಡಿದ್ದರು. ‘ಒಂದು ಕಾಲದಲ್ಲಿ ಕನ್ನಡ ಸಿನಿಮಾಗಳು ತುಂಬಾನೇ ಚೆನ್ನಾಗಿದೆ ಎನ್ನುತ್ತಿದ್ದರು. ಬ್ಲ್ಯಾಕ್ ಆ್ಯಂಡ್ ವೈಟ್​ ಕಾಲದ ಮಾತು ಇದು’ ಎಂದಿದ್ದರು ರಾಜ್​​ಕುಮಾರ್. ರಾಜ್​ಕುಮಾರ್ ಅವರು ಆ ಮಯದಲ್ಲಿ ಮದ್ರಾಸ್​​ನಲ್ಲಿದ್ದರು. ಮದರಾಸ್​ನಲ್ಲಿ ಹೇಳುತ್ತಿದ್ದ ಮಾತು ಇದಾಗಿತ್ತಂತೆ.

‘ಸಿನಿಮಾಗಳ ಗುಣಮಟ್ಟ ಕಡಿಮೆ ಇದೆ ಎಂದು ಅನೇಕರು ಹೇಳುತ್ತಾರೆ. ಜನರಿಗೆ ಇಷ್ಟ ಆಗೋದನ್ನು ಮಾಡಬೇಕು ಎನ್ನುವುದಕ್ಕಿಂತ, ಸ್ವಂತಿಕೆ ಮುಖ್ಯ. ನನ್ನ ತಾಯಿ ಭಾಷೆಗೆ ಪ್ರಾಮುಖ್ಯತೆ ಕೊಡಬೇಕು’ ಎಂದು ರಾಜ್​ಕುಮಾರ್ ಅವರು ಹೇಳಿದ್ದರು.

ಸಿನಿಮಾದಲ್ಲಿ ಕಥೆ ಎಂಬುದು ತುಂಬಾನೇ ಮುಖ್ಯ ಆಗುತ್ತದೆ’ ಎಂದು ರಾಜ್​ಕುಮಾರ್ ಅಭಿಪ್ರಾಯ ಹೊರಹಾಕಿದ್ದರು. ಕಥೆ ಎಂಬುದು ಕಣ್ಣುಗಳಿದ್ದಂತೆ ಎಂದು ಅವರು ಯಾವಾಗಲೂ ಹೇಳುತ್ತಿದ್ದರು. ಕಣ್ಣು ಊನ ಆಗಿಬಿಟ್ಟರೆ ಸಿನಿಮಾ ಚೆನ್ನಾಗಿರೋದಿಲ್ಲ ಎಂದು ಅವರು ಹೇಳುತ್ತಿದ್ದರು. ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಇತ್ತೀಚೆಗೆ ತಂತ್ರಜ್ಞಾನ ಮುಂದುವರಿದಿದೆ. ಹಾಗಂತ ಬಂದ ಸಿನಿಮಾಗಳೆಲ್ಲ ಹಿಟ್ ಆಗುತ್ತಿಲ್ಲ. ಈ ಬಗ್ಗೆ ರಾಜ್​ಕುಮಾರ್ ಅಭಿಪ್ರಾಯ ಹೊರಹಾಕಿದ್ದರು. ರಾಜ್​ಕುಮಾರ್ ಅವರ ಪ್ರಕಾರ, ತಂತ್ರಜ್ಞಾನ ಉತ್ತಮವಾಗಿರುವುದರಿಂದ ಕಥೆ ಚೆನ್ನಾಗಿ ಮಾಡಿದರೆ ಸಿನಿಮಾನ ಗೆಲ್ಲಿಸಬಹುದು ಎಂಬ ಅಭಿಪ್ರಾಯ ಅವರದ್ದಾಗಿತ್ತು.

ಇದನ್ನೂ ಓದಿ: ಸೃಜನ್ ಅವರನ್ನು ಚಿಕ್ಕೆಜಮಾನರು ಎಂದು ಕರೆಯುತ್ತಿದ್ದ ರಾಜ್​ಕುಮಾರ್; ಕಾರಣ ಏನು?

ರಾಜ್​ಕುಮಾರ್ ಅಗಲಿ ಎರಡು ದಶಕ ಕಳೆಯುತ್ತಾ ಬಂದಿದೆ. ಅವರ ಮಕ್ಕಳು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ರಾಜ್​ಕುಮಾರ್ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಎಲ್ಲರೂ ಸಾಗುತ್ತಿದ್ದಾರೆ ಎನ್ನುವುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:48 am, Wed, 3 December 25

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ