ರಾಜ್​ಕುಮಾರ್​ಗೆ ಯೋಗಾಸನ ಹೇಳಿಕೊಟ್ಟ ಹೊನ್ನಪ್ಪ ನಾಯ್ಕರ್​ ಕೊವಿಡ್​​ನಿಂದ ನಿಧನ

Rajkumar: ಹೊನ್ನಪ್ಪ ನಾಯ್ಕರ್​​ ಅವರಿಗೆ ಇತ್ತೀಚೆಗೆ ಕೊವಿಡ್​ ಕಾಣಿಸಿಕೊಂಡಿತ್ತು. ಆದರೆ, ಅವರಿಗೆ ಚಿಕಿತ್ಸೆ ಫಲಕಾರಿಯಾಗಿಲ್ಲ. ಇಂದು ಬೆಳಗ್ಗೆ ಅವರು ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್​ಕುಮಾರ್​ಗೆ ಯೋಗಾಸನ ಹೇಳಿಕೊಟ್ಟ ಹೊನ್ನಪ್ಪ ನಾಯ್ಕರ್​ ಕೊವಿಡ್​​ನಿಂದ ನಿಧನ
ಹೊನ್ನಪ್ಪ ನಾಯ್ಕರ್​-ರಾಜ್​ಕುಮಾರ್
Follow us
| Updated By: Digi Tech Desk

Updated on:May 20, 2021 | 4:23 PM

 ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ಚಿತ್ರರಂಗದ ಸಾಕಷ್ಟು ಮಂದಿ ಕೊರೊನಾದಿಂದ ಬಲಿಯಾಗುತ್ತಿದ್ದಾರೆ. ನಿತ್ಯ ಲಕ್ಷಾಂತರ ಕೊವಿಡ್​ ಕೇಸ್​​ಗಳು ವರದಿಯಾಗುತ್ತಿರುವುದು ಸಾಕಷ್ಟು ಆತಂಕ ಸೃಷ್ಟಿಸಿದೆ. ಈಗ, ವರನಟ ಡಾಕ್ಟರ್ ರಾಜ್​ಕುಮಾರ್ ಸೇರಿದಂತೆ ಅವರ ಕುಟುಂಬದವರಿಗೆ ಯೋಗಾಸನ ಹೇಳಿಕೊಡುತ್ತಿದ್ದ ಹೊನ್ನಪ್ಪ ನಾಯ್ಕರ್ ಮೃತಪಟ್ಟಿದ್ದಾರೆ. ಅವರಿಗೆ ಸುಮಾರು 90 ವರ್ಷ ವಯಸ್ಸಾಗಿತ್ತು.

ಹೊನ್ನಪ್ಪ ನಾಯ್ಕರ್​​ ಅವರಿಗೆ ಇತ್ತೀಚೆಗೆ ಕೊವಿಡ್​ ಕಾಣಿಸಿಕೊಂಡಿತ್ತು. ಆದರೆ, ಅವರಿಗೆ ಚಿಕಿತ್ಸೆ ಫಲಕಾರಿಯಾಗಿಲ್ಲ. ಇಂದು (ಮೇ 20) ಬೆಳಗ್ಗೆ ಅವರು ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಇವರು  ಪೊಲೀಸ್ ಇಲಾಖೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ್ದರು ಎಂಬುದು ವಿಶೇಷ.

ಹೊನ್ನಪ್ಪ ನಾಯ್ಕರ್ ರಾಜ್​ಕುಮಾರ್  ಮತ್ತು ಅವರ ಕುಟುಂಬದವರಿಗೆ ಯೋಗಾಸನವನ್ನು ಹೇಳಿಕೊಡುತ್ತಿದ್ದರು. ಅಲ್ಲದೆ ಗಣ್ಯವ್ಯಕ್ತಿಗಳಿಗೆ ಅವರು ಯೋಗಾಸನ ಹೇಳಿಕೊಡುತ್ತಿದ್ದರು. ಇವರಿಗೆ ಮೂರು ಗಂಡು ಮಕ್ಕಳಿದ್ದಾರೆ. ಹೊನ್ನಪ್ಪ ನಾಯ್ಕರ್​ ಬೆಂಗಳೂರಿನ ಜೆ.ಪಿ. ನಗರದಲ್ಲಿ ವಾಸವಿದ್ದರು. ಕನಕಪುರದ ಬಳಿ ಇವರ ಯೋಗಾಶ್ರಮವಿದೆ.

ಇವರ ಅಂತ್ಯಕ್ರಿಯೆಯನ್ನು ಕನಕಪುರದ ನಾಗದೇವನಹಳ್ಳಿ ಬಳಿ ನೆರವೇರಿಸಲು ಅವರ ಕುಟುಂಬಸ್ಥರು  ತೀರ್ಮಾನಿಸಿದ್ದಾರೆ. ಹೊನ್ನಪ್ಪ ನಾಯ್ಕರ್ ಅವರ ಆತ್ಮೀಯರಾದ ಎಸ್.ಎ. ಚಿನ್ನೇಗೌಡ ಅವರು  ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಕೋರಿದ್ದಾರೆ.

ರಾಜ್​ಕುಮಾರ್ ಅವರು ಯೋಗಾಸನದಲ್ಲಿ ಪಳಗಿದ್ದರು. ಹಾಗಂತ ಅವರು ಚಿಕ್ಕ ವಯಸ್ಸಿನಿಂದ ಯೋಗಾಸನ ಆರಂಭಿಸಿದವರಲ್ಲ. ಆದಾಗ್ಯೂ, ಯೋಗಾಸನದಲ್ಲಿ ಪಳಗಿದ್ದರು. ಇದಕ್ಕೆ ಹೊನ್ನಪ್ಪ ನಾಯ್ಕರ್ ಅವರ ಕೊಡುಗೆ ದೊಡ್ಡದಿದೆ.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ ಬಲಿಯಾಗುತ್ತಿದ್ದಾರೆ. ಬಾಲಿವುಡ್​, ಸ್ಯಾಂಡಲ್​ವುಡ್​ ಹಾಗೂ ಕಾಲಿವುಡ್​ನಲ್ಲಿ ಸಾಕಷ್ಟು ಜನರು ಕೊವಿಡ್​ಗೆ ಬಲಿಯಾಗಿದ್ದಾರೆ.

ಇದನ್ನೂ ಓದಿ: RCB: ರಾಜ್​ಕುಮಾರ್ ಹುಟ್ಟುಹಬ್ಬಕ್ಕೆ ‘ಬಭ್ರುವಾಹನ’ ಸಿನಿಮಾ ಹಾಡಿನ ಸಾಲು ಬರೆದು ಶುಭಕೋರಿದ ಆರ್​ಸಿಬಿ!

550ಕ್ಕೂ ಹೆಚ್ಚು ಬಾರಿ ರೀ-ರಿಲೀಸ್​ ಆದ ಶಿವರಾಜ್​ಕುಮಾರ್​-ಉಪೇಂದ್ರ ಓಂ ಚಿತ್ರಕ್ಕೆ 26 ವರ್ಷ; ಸಿನಿಮಾ ಮಾಡಿದ ದಾಖಲೆಗಳೆಷ್ಟು?

Published On - 3:58 pm, Thu, 20 May 21

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?