AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಬಳಿ ಇತ್ತು ಒಂದು ದೊಡ್ಡ ಬ್ರಹ್ಮಾಸ್ತ್ರ; ವಿವರಿಸಿದ್ದ ಜಗ್ಗೇಶ್

ಜಗ್ಗೇಶ್ ಅವರು ರಾಜ್​ಕುಮಾರ್ ಅವರ ಸರಳತೆಯನ್ನು ಅವರ ದೊಡ್ಡ ಬ್ರಹ್ಮಾಸ್ತ್ರ ಎಂದು ವಿವರಿಸಿದ್ದಾರೆ. ರಾಜ್​ಕುಮಾರ್ ಅವರ ಜನಪ್ರಿಯತೆ ಮತ್ತು ಸಂಪತ್ತಿದ್ದರೂ, ಅವರು ಎಂದಿಗೂ ತಮ್ಮ ದೊಡ್ಡತನವನ್ನು ತೋರಿಸಲಿಲ್ಲ. ಅವರ ಸೌಮ್ಯತೆ ಮತ್ತು ಇತರರ ಬಗ್ಗೆ ಗೌರವದಿಂದ ಮಾತನಾಡುವ ಗುಣ ಅವರನ್ನು ವಿಶೇಷವಾಗಿಸಿತು. ಪಂಚೆ-ಬಿಳಿ ಶರ್ಟ್ ಧರಿಸುವುದು ಕೂಡ ಅವರ ಸರಳತೆಯನ್ನು ಪ್ರತಿಬಿಂಬಿಸುತ್ತದೆ.

ರಾಜ್​ಕುಮಾರ್ ಬಳಿ ಇತ್ತು ಒಂದು ದೊಡ್ಡ ಬ್ರಹ್ಮಾಸ್ತ್ರ; ವಿವರಿಸಿದ್ದ ಜಗ್ಗೇಶ್
ರಾಜ್​ಕುಮಾರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 13, 2025 | 8:04 AM

Share

ರಾಜ್​ಕುಮಾರ್ (Rajkumar) ಅವರು ನಮ್ಮನ್ನು ಅಗಲಿ ಹಲವು ವರ್ಷಗಳೇ ಕಳೆದಿವೆ. ಆದರೆ, ಅವರು ಸದಾ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಅವರ ಬಗ್ಗೆ, ಅವರ ಸಿನಿಮಾಗಳ ಬಗ್ಗೆ ಈಗಲೂ ಚರ್ಚೆಗಳು ಆಗುತ್ತವೆ. ರಾಜ್​ಕುಮಾರ್ ಬಳಿ ಒಂದು ದೊಡ್ಡ ಬ್ರಹ್ಮಾಸ್ತ್ರ ಇತ್ತು ಎಂಬುದು ಜಗ್ಗೇಶ್ ಅಭಿಪ್ರಾಯ. ಈ ಮೊದಲು ಸಂದರ್ಶನ ಒಂದರಲ್ಲಿ ಈ ಬಗ್ಗೆ ಅವರು ಮಾತನಾಡಿದ್ದರು. ಆ ಮಾತನ್ನು ನಾವು ಮತ್ತೊಮ್ಮೆ ನೆನಪಿಸಿಕೊಳ್ಳೋಣ.

ರಾಜ್​ಕುಮಾರ್ ಅವರು ಸರಳತೆಗೆ ಹೆಸರು ವಾಸಿ ಆಗಿದ್ದರು. ಇದುವೇ ಅವರ ಬ್ರಹ್ಮಾಸ್ತ್ರ ಎಂದು ಜಗ್ಗೇಶ್ ಈ ಮೊದಲು ಅಭಿಪ್ರಾಯ ಹೊರಹಾಕಿದ್ದರು. ರಾಜ್​ಕುಮಾರ್ ಬಳಿ ಸಾಕಷ್ಟು ಹಣ ಇತ್ತು. ಅಷ್ಟೇ ಏಕೆ ಸಾಕಷ್ಟು ಜನಪ್ರಿಯತೆ ಇತ್ತು. ಅವರು ಕರೆದರೆ ಪರಭಾಷೆಯ ಸೆಲೆಬ್ರಿಟಿಗಳು ಇಲ್ಲಿಗೆ ಬರುತ್ತಿದ್ದರು. ಆದರೆ, ಅವರು ಎಂದಿಗೂ ತಮ್ಮ ದೊಡ್ಡತನವನ್ನು ತೋರಿಸುವ ಪ್ರಯತ್ನ ಮಾಡಲೇ ಇಲ್ಲ.

ರಾಜ್​ಕುಮಾರ್ ಬಳಿ ಮತ್ತೊಂದು ಒಳ್ಳೆಯ ಗುಣ ಇತ್ತು. ಅದುವೇ ಯಾರ ಬಗ್ಗೆಯೂ ಕೆಟ್ಟ ಮಾತು ಆಡದೆ ಇರುವುದು. ರಾಜ್​ಕುಮಾರ್ ಅವರು ಯಾರ ಬಗ್ಗೆಯೂ ಕೆಟ್ಟ ಮಾತನ್ನು ಹೇಳುತ್ತಿರಲಿಲ್ಲ. ಯಾರ ಬಗ್ಗೆಯೂ ಚಾಡಿ ಹೇಳುವ ಕೆಲಸವನ್ನು ಅವರು ಮಾಡಿರಲೇ ಇಲ್ಲ. ಬೇರೆಯವರ ವಿಚಾರ ಬಂತು ಎಂದರೆ ಅವರು ಆ ಸ್ಥಳದಿಂದಲೇ ಎದ್ದು ನಡೆಯುತ್ತಿದ್ದರು.

ಇದನ್ನೂ ಓದಿ
Image
ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್ ನನ್ನ ಸಂಬಂಧಿ ಅಲ್ಲ; ವಿಕ್ರಾಂತ್ ಮಾಸಿ
Image
ವಿಮಾನ ದುರಂತದ ಟ್ವೀಟ್ ಮಾಡಿದ ಬಳಿಕ ಹೃದಯಾಘಾತದಿಂದ ನಟಿಯ ಮಾಜಿ ಪತಿ ನಿಧನ
Image
ವಿಮಾನ ದುರಂತ: ‘12th ಫೇಲ್’ ನಟನ ಸಂಬಂಧಿ, ಕರ್ನಾಟಕದ ಕ್ಲೈವ್ ಕುಂದರ್ ಸಾವು
Image
ನಿಶಾ ರವಿಕೃಷ್ಣನ್​ಗೆ ತೆಲುಗು ಕಿರುತೆರೆಯಲ್ಲಿ ಎದುರಾದ ಕಷ್ಟಗಳು ಒಂದೆರಡಲ್ಲ

‘ರಾಜ್​ಕುಮಾರ್ ಸರಳತೆಯೇ ಅವರ ಬ್ರಹ್ಮಾಸ್ತ್ರ. ಒಂದು ದಿನ ಇನ್ನೊಬ್ಬರ ಬಗ್ಗೆ ಮಾತನಾಡಿಲ್ಲ. ಒಬ್ಬರ ಬಗ್ಗೆ ಬೈದಿಲ್ಲ. ಒಬ್ಬರನ್ನು ಏಕವಚನದಲ್ಲಿ ಮಾತನಾಡಿಸಿಲ್ಲ. ಎಗ್ಸೈಟ್​ಮೆಂಟ್ ಅನ್ನೋದು, ಕಸಿವಿಸಿ ಇಲ್ಲ. ಪ್ರಶಾಂತವಾಗಿರುತ್ತಿದ್ದರು. ಯಾವುದೋ ತಪಸ್ವಿ ಜೊತೆ ಇದ್ದಂತೆ ಅನಿಸುತ್ತಿತ್ತು’ ಎಂದು ರಾಜ್​ಕುಮಾರ್ ಅವರು ಫಿಲ್ಮ್ ಕಂಪಾನಿಯನ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

ಇದನ್ನೂ ಓದಿ: ರಾಜ್​ಕುಮಾರ್ ಬಗ್ಗೆ ಆರ್​ಜಿವಿ ಅಲ್ಪಜ್ಞಾನದ ಹೇಳಿಕೆ ಸುಳ್ಳು; ಅಣ್ಣಾವ್ರ ಚಿತ್ರವನ್ನು ರಿಮೇಕ್ ಮಾಡಿದ್ದ ಅಮಿತಾಭ್

ರಾಜ್​ಕುಮಾರ್ ಈ ಮೊದಲು ಜೀನ್ಸ್ ಹಾಕುತ್ತಿದ್ದರು. ಆದರೆ, ವಿಮಾನ ನಿಲ್ದಾಣದಲ್ಲಿ ಸಿಕ್ಕ ಪೈಲಟ್ ಒಬ್ಬರು ಈ ಬಗ್ಗೆ ಪ್ರಶ್ನೆ ಮಾಡಿದರು. ಪಂಚೆ-ಬಿಳಿ ಶರ್ಟ್ ನಿಮಗೆ ಸೂಕ್ತ ಎಂದರು. ಅಂದಿನಿಂದ ಅದನ್ನೇ ಅವರು ಹಾಕೋಕೆ ಆರಂಭಿಸಿದರು. ಕೊನೆಯವರೆಗೂ ರಾಜ್​ಕುಮಾರ್ ಹೀಗೆಯೇ ಇದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ