AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಬಳಿ ಇತ್ತು ಒಂದು ದೊಡ್ಡ ಬ್ರಹ್ಮಾಸ್ತ್ರ; ವಿವರಿಸಿದ್ದ ಜಗ್ಗೇಶ್

ಜಗ್ಗೇಶ್ ಅವರು ರಾಜ್​ಕುಮಾರ್ ಅವರ ಸರಳತೆಯನ್ನು ಅವರ ದೊಡ್ಡ ಬ್ರಹ್ಮಾಸ್ತ್ರ ಎಂದು ವಿವರಿಸಿದ್ದಾರೆ. ರಾಜ್​ಕುಮಾರ್ ಅವರ ಜನಪ್ರಿಯತೆ ಮತ್ತು ಸಂಪತ್ತಿದ್ದರೂ, ಅವರು ಎಂದಿಗೂ ತಮ್ಮ ದೊಡ್ಡತನವನ್ನು ತೋರಿಸಲಿಲ್ಲ. ಅವರ ಸೌಮ್ಯತೆ ಮತ್ತು ಇತರರ ಬಗ್ಗೆ ಗೌರವದಿಂದ ಮಾತನಾಡುವ ಗುಣ ಅವರನ್ನು ವಿಶೇಷವಾಗಿಸಿತು. ಪಂಚೆ-ಬಿಳಿ ಶರ್ಟ್ ಧರಿಸುವುದು ಕೂಡ ಅವರ ಸರಳತೆಯನ್ನು ಪ್ರತಿಬಿಂಬಿಸುತ್ತದೆ.

ರಾಜ್​ಕುಮಾರ್ ಬಳಿ ಇತ್ತು ಒಂದು ದೊಡ್ಡ ಬ್ರಹ್ಮಾಸ್ತ್ರ; ವಿವರಿಸಿದ್ದ ಜಗ್ಗೇಶ್
ರಾಜ್​ಕುಮಾರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 13, 2025 | 8:04 AM

Share

ರಾಜ್​ಕುಮಾರ್ (Rajkumar) ಅವರು ನಮ್ಮನ್ನು ಅಗಲಿ ಹಲವು ವರ್ಷಗಳೇ ಕಳೆದಿವೆ. ಆದರೆ, ಅವರು ಸದಾ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಅವರ ಬಗ್ಗೆ, ಅವರ ಸಿನಿಮಾಗಳ ಬಗ್ಗೆ ಈಗಲೂ ಚರ್ಚೆಗಳು ಆಗುತ್ತವೆ. ರಾಜ್​ಕುಮಾರ್ ಬಳಿ ಒಂದು ದೊಡ್ಡ ಬ್ರಹ್ಮಾಸ್ತ್ರ ಇತ್ತು ಎಂಬುದು ಜಗ್ಗೇಶ್ ಅಭಿಪ್ರಾಯ. ಈ ಮೊದಲು ಸಂದರ್ಶನ ಒಂದರಲ್ಲಿ ಈ ಬಗ್ಗೆ ಅವರು ಮಾತನಾಡಿದ್ದರು. ಆ ಮಾತನ್ನು ನಾವು ಮತ್ತೊಮ್ಮೆ ನೆನಪಿಸಿಕೊಳ್ಳೋಣ.

ರಾಜ್​ಕುಮಾರ್ ಅವರು ಸರಳತೆಗೆ ಹೆಸರು ವಾಸಿ ಆಗಿದ್ದರು. ಇದುವೇ ಅವರ ಬ್ರಹ್ಮಾಸ್ತ್ರ ಎಂದು ಜಗ್ಗೇಶ್ ಈ ಮೊದಲು ಅಭಿಪ್ರಾಯ ಹೊರಹಾಕಿದ್ದರು. ರಾಜ್​ಕುಮಾರ್ ಬಳಿ ಸಾಕಷ್ಟು ಹಣ ಇತ್ತು. ಅಷ್ಟೇ ಏಕೆ ಸಾಕಷ್ಟು ಜನಪ್ರಿಯತೆ ಇತ್ತು. ಅವರು ಕರೆದರೆ ಪರಭಾಷೆಯ ಸೆಲೆಬ್ರಿಟಿಗಳು ಇಲ್ಲಿಗೆ ಬರುತ್ತಿದ್ದರು. ಆದರೆ, ಅವರು ಎಂದಿಗೂ ತಮ್ಮ ದೊಡ್ಡತನವನ್ನು ತೋರಿಸುವ ಪ್ರಯತ್ನ ಮಾಡಲೇ ಇಲ್ಲ.

ರಾಜ್​ಕುಮಾರ್ ಬಳಿ ಮತ್ತೊಂದು ಒಳ್ಳೆಯ ಗುಣ ಇತ್ತು. ಅದುವೇ ಯಾರ ಬಗ್ಗೆಯೂ ಕೆಟ್ಟ ಮಾತು ಆಡದೆ ಇರುವುದು. ರಾಜ್​ಕುಮಾರ್ ಅವರು ಯಾರ ಬಗ್ಗೆಯೂ ಕೆಟ್ಟ ಮಾತನ್ನು ಹೇಳುತ್ತಿರಲಿಲ್ಲ. ಯಾರ ಬಗ್ಗೆಯೂ ಚಾಡಿ ಹೇಳುವ ಕೆಲಸವನ್ನು ಅವರು ಮಾಡಿರಲೇ ಇಲ್ಲ. ಬೇರೆಯವರ ವಿಚಾರ ಬಂತು ಎಂದರೆ ಅವರು ಆ ಸ್ಥಳದಿಂದಲೇ ಎದ್ದು ನಡೆಯುತ್ತಿದ್ದರು.

ಇದನ್ನೂ ಓದಿ
Image
ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್ ನನ್ನ ಸಂಬಂಧಿ ಅಲ್ಲ; ವಿಕ್ರಾಂತ್ ಮಾಸಿ
Image
ವಿಮಾನ ದುರಂತದ ಟ್ವೀಟ್ ಮಾಡಿದ ಬಳಿಕ ಹೃದಯಾಘಾತದಿಂದ ನಟಿಯ ಮಾಜಿ ಪತಿ ನಿಧನ
Image
ವಿಮಾನ ದುರಂತ: ‘12th ಫೇಲ್’ ನಟನ ಸಂಬಂಧಿ, ಕರ್ನಾಟಕದ ಕ್ಲೈವ್ ಕುಂದರ್ ಸಾವು
Image
ನಿಶಾ ರವಿಕೃಷ್ಣನ್​ಗೆ ತೆಲುಗು ಕಿರುತೆರೆಯಲ್ಲಿ ಎದುರಾದ ಕಷ್ಟಗಳು ಒಂದೆರಡಲ್ಲ

‘ರಾಜ್​ಕುಮಾರ್ ಸರಳತೆಯೇ ಅವರ ಬ್ರಹ್ಮಾಸ್ತ್ರ. ಒಂದು ದಿನ ಇನ್ನೊಬ್ಬರ ಬಗ್ಗೆ ಮಾತನಾಡಿಲ್ಲ. ಒಬ್ಬರ ಬಗ್ಗೆ ಬೈದಿಲ್ಲ. ಒಬ್ಬರನ್ನು ಏಕವಚನದಲ್ಲಿ ಮಾತನಾಡಿಸಿಲ್ಲ. ಎಗ್ಸೈಟ್​ಮೆಂಟ್ ಅನ್ನೋದು, ಕಸಿವಿಸಿ ಇಲ್ಲ. ಪ್ರಶಾಂತವಾಗಿರುತ್ತಿದ್ದರು. ಯಾವುದೋ ತಪಸ್ವಿ ಜೊತೆ ಇದ್ದಂತೆ ಅನಿಸುತ್ತಿತ್ತು’ ಎಂದು ರಾಜ್​ಕುಮಾರ್ ಅವರು ಫಿಲ್ಮ್ ಕಂಪಾನಿಯನ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

ಇದನ್ನೂ ಓದಿ: ರಾಜ್​ಕುಮಾರ್ ಬಗ್ಗೆ ಆರ್​ಜಿವಿ ಅಲ್ಪಜ್ಞಾನದ ಹೇಳಿಕೆ ಸುಳ್ಳು; ಅಣ್ಣಾವ್ರ ಚಿತ್ರವನ್ನು ರಿಮೇಕ್ ಮಾಡಿದ್ದ ಅಮಿತಾಭ್

ರಾಜ್​ಕುಮಾರ್ ಈ ಮೊದಲು ಜೀನ್ಸ್ ಹಾಕುತ್ತಿದ್ದರು. ಆದರೆ, ವಿಮಾನ ನಿಲ್ದಾಣದಲ್ಲಿ ಸಿಕ್ಕ ಪೈಲಟ್ ಒಬ್ಬರು ಈ ಬಗ್ಗೆ ಪ್ರಶ್ನೆ ಮಾಡಿದರು. ಪಂಚೆ-ಬಿಳಿ ಶರ್ಟ್ ನಿಮಗೆ ಸೂಕ್ತ ಎಂದರು. ಅಂದಿನಿಂದ ಅದನ್ನೇ ಅವರು ಹಾಕೋಕೆ ಆರಂಭಿಸಿದರು. ಕೊನೆಯವರೆಗೂ ರಾಜ್​ಕುಮಾರ್ ಹೀಗೆಯೇ ಇದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್