AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮನೆಯ ನೀರು ಅಮೃತ ಎಂದ ಅಭಿಮಾನಿ; ರಾಜ್​ಕುಮಾರ್ ಮಾಡಿದ್ದೇನು?

ಶಿವರಾಜ್ ಕುಮಾರ್ ಅವರು ತಮ್ಮ ತಂದೆ ರಾಜ್ ಕುಮಾರ್ ಅವರ ಚೆನ್ನೈ ಜೀವನದ ಬಗ್ಗೆ ಆಸಕ್ತಿಕರ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ರಾಜ್ ಕುಮಾರ್ ಅವರು ಚೆನ್ನೈನಲ್ಲಿ ವಾಸಿಸುತ್ತಿದ್ದಾಗ, ಅವರ ಮನೆಯಲ್ಲಿ ಪ್ರತಿ ದಿನ ನೂರಾರು ಜನರಿಗೆ ಊಟ ಹಾಗೂ ಜ್ಯೂಸ್​ನ ಉಚಿತವಾಗಿ ನೀಡುತ್ತಿದ್ದರು ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.

ನಿಮ್ಮ ಮನೆಯ ನೀರು ಅಮೃತ ಎಂದ ಅಭಿಮಾನಿ; ರಾಜ್​ಕುಮಾರ್ ಮಾಡಿದ್ದೇನು?
ಶಿವರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Nov 14, 2024 | 11:54 AM

Share

ಮೊದಲಿನ ಕಾಲದಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದ್ದುದೇ ಚೆನ್ನೈನಲ್ಲಾಗಿತ್ತು. ಈ ಕಾರಣಕ್ಕೆ ಬಹುತೇಕ ಸ್ಟಾರ್ ಹೀರೋಗಳು ಅಲ್ಲಿಯೇ ಸೆಟಲ್ ಆಗಿದ್ದರು. ರಾಜ್​ಕುಮಾರ್ ಕೂಡ ಇದಕ್ಕೆ ಹೊರತಾಗಿಲ್ಲ. ಅವರು ಚೆನ್ನೈನಲ್ಲಿ ವಾಸವಿದ್ದರು. ಅಲ್ಲಿಯೇ ಇದ್ದುಕೊಂಡು ಹಲವು ಸಿನಿಮಾ ಕೆಲಸಗಳನ್ನು ಮಾಡುತ್ತಿದ್ದರು. ವಿಶೇಷ ಎಂದರೆ ರಾಜ್​ಕುಮಾರ್ ಮನೆ ಮುಂದೆ ನಿತ್ಯವೂ ಜ್ಯೂಸ್ ಹಂಚಲಾಗುತ್ತಿತ್ತು. ಅಷ್ಟೇ ಅಲ್ಲ, ಬಂದ ಕಲಾವಿದರಿಗೆ ಊಟವನ್ನು ಹಾಕಲಾಗುತ್ತಿತ್ತು. ಈ ಬಗ್ಗೆ ಶಿವರಾಜ್​ಕುಮಾರ್ ಮಾತನಾಡಿದ್ದಾರೆ.

ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರಕ್ಕಾಗಿ ಅವರು ವಿವಿಧ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಾ ಇದ್ದಾರೆ. ಕೈರಾಮ್ ವಾಶಿ ಯ್ಯೂಟ್ಯೂಬ್ ಚಾನೆಲ್​ಗೂ ಶಿವರಾಜ್​ಕುಮಾರ್ ಅವರು ಸಂದರ್ಶನ ನೀಡಿದ್ದು, ರಾಜ್​ಕುಮಾರ್ ಬಗ್ಗೆ ಮಾತನಾಡಿದ್ದಾರೆ.

‘ಚೆನ್ನೈನಲ್ಲಿದ್ದಾಗ ನಿತ್ಯ ನೂರಾರು ಜನರು ಬಂದು ನಮ್ಮನೆಯಲ್ಲಿ ಊಟ ಮಾಡುತ್ತಿದ್ದರು. ರಾಜ್​ಕುಮಾರ್ ಮನೆಯಲ್ಲಿ ಎಲ್ಲರಿಗೂ ಬಿಸಿ ಅನ್ನ, ಬಿಸಿ ಸಾರು ಕೊಡಲಾಗುತ್ತಿತ್ತು. ಅದುವೇ ಸ್ಪೇಷಾಲಿಟಿ. ಎಷ್ಟಾದರೂ ತಿನ್ನಿ, ವೇಸ್ಟ್ ಮಾಡಬೇಡಿ ಎಂದು ಅಪ್ಪಾಜಿ ಹೇಳುತ್ತಿದ್ದರು. ನಾವಿದ್ದ ಮನೆಯ ಸಮೀಪವೇ ಎನ್​ಟಿಆರ್ ಹಾಗೂ ಎಂಜಿಆರ್​ ಮನೆಗಳು ಇದ್ದವು. ಹೀಗಾಗಿ, ಅದನ್ನು ನೋಡಲು ಜನರು ಅಲ್ಲಿಗೆ ಬರುತ್ತಿದ್ದರು. ಶೂಟಿಂಗ್ ನೋಡೋಕೆ ರಾಜ್​ಕುಮಾರ್ ಅವಕಾಶ ಕೊಡುತ್ತಿದ್ದರು. ಯಾರೋ ಬಂದು ಅಣ್ಣಾ ನಿಮ್ಮ ಮನೆಯ ನೀರು ಕೊಡಿ ಕುಡಿದುಬಿಡ್ತೀವಿ ಎಂದರು. ಆ ನೀರನ್ನು ಕುಡಿದ ಬಳಿಕ ಅಮೃತ ಕುಡಿದಂತೆ ಆಯ್ತು ಎಂದಿದ್ದರು’ ಎಂದು ಶಿವಣ್ಣ ವಿವರಿಸಿದ್ದಾರೆ.

ಇದನ್ನೂ ಓದಿ: ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್, ಡಾಲಿ

ಆ ಒಂದು ಮಾತಿನಿಂದ ರಾಜ್​ಕುಮಾರ್​ಗೆ ಒಂದು ಆಲೋಚನೆ ಬಂತು. ‘ಹೊರಗಡೆ ಎಲ್ಲರಿಗೂ ಸಿಗುವ ರೀತಿ ನಿತ್ಯ ಜ್ಯೂಸ್ ಮಾಡಿಡಿ ಎಂದರು. ಅಂದಿನಿಂದ ಮಜ್ಜಿಗೆ ಅಥವಾ ಜ್ಯೂಸ್ ಇಡುತ್ತಾ ಇದ್ದರು. ಡ್ರಮ್ ಅಲ್ಲಿ ಐಸ್ ಹಾಕಿ ಇಟ್ಟು ಬಿಡ್ತಾ ಇದ್ರು. ದುಡ್ಡು ಎಷ್ಟು ಖರ್ಚಾಗುತ್ತದೆ ಎಂಬುದರ ಆಲೋಚನೆ ಅವರಿಗೆ ಇಲ್ಲ. ರಾಜ್​ಕುಮಾರ್ ಮನೆಯ ಸಮೀಪ ಕೋಲ್ಡ್ ಜ್ಯೂಸ್ ಇದೆ ಕುಡಿದು ಬರೋಣ ಎಂದು ಆಟೋ ಡ್ರೈವರ್ ಹೇಳುತ್ತಿದ್ದರು. ಅದು ನಮಗೆ ಕೇಳುತ್ತಿತ್ತು’ ಎಂದಿದ್ದಾರೆ ಶಿವಣ್ಣ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:54 am, Thu, 14 November 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ