Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮನೆಯ ನೀರು ಅಮೃತ ಎಂದ ಅಭಿಮಾನಿ; ರಾಜ್​ಕುಮಾರ್ ಮಾಡಿದ್ದೇನು?

ಶಿವರಾಜ್ ಕುಮಾರ್ ಅವರು ತಮ್ಮ ತಂದೆ ರಾಜ್ ಕುಮಾರ್ ಅವರ ಚೆನ್ನೈ ಜೀವನದ ಬಗ್ಗೆ ಆಸಕ್ತಿಕರ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ರಾಜ್ ಕುಮಾರ್ ಅವರು ಚೆನ್ನೈನಲ್ಲಿ ವಾಸಿಸುತ್ತಿದ್ದಾಗ, ಅವರ ಮನೆಯಲ್ಲಿ ಪ್ರತಿ ದಿನ ನೂರಾರು ಜನರಿಗೆ ಊಟ ಹಾಗೂ ಜ್ಯೂಸ್​ನ ಉಚಿತವಾಗಿ ನೀಡುತ್ತಿದ್ದರು ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.

ನಿಮ್ಮ ಮನೆಯ ನೀರು ಅಮೃತ ಎಂದ ಅಭಿಮಾನಿ; ರಾಜ್​ಕುಮಾರ್ ಮಾಡಿದ್ದೇನು?
ಶಿವರಾಜ್​ಕುಮಾರ್
Follow us
ರಾಜೇಶ್ ದುಗ್ಗುಮನೆ
|

Updated on:Nov 14, 2024 | 11:54 AM

ಮೊದಲಿನ ಕಾಲದಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದ್ದುದೇ ಚೆನ್ನೈನಲ್ಲಾಗಿತ್ತು. ಈ ಕಾರಣಕ್ಕೆ ಬಹುತೇಕ ಸ್ಟಾರ್ ಹೀರೋಗಳು ಅಲ್ಲಿಯೇ ಸೆಟಲ್ ಆಗಿದ್ದರು. ರಾಜ್​ಕುಮಾರ್ ಕೂಡ ಇದಕ್ಕೆ ಹೊರತಾಗಿಲ್ಲ. ಅವರು ಚೆನ್ನೈನಲ್ಲಿ ವಾಸವಿದ್ದರು. ಅಲ್ಲಿಯೇ ಇದ್ದುಕೊಂಡು ಹಲವು ಸಿನಿಮಾ ಕೆಲಸಗಳನ್ನು ಮಾಡುತ್ತಿದ್ದರು. ವಿಶೇಷ ಎಂದರೆ ರಾಜ್​ಕುಮಾರ್ ಮನೆ ಮುಂದೆ ನಿತ್ಯವೂ ಜ್ಯೂಸ್ ಹಂಚಲಾಗುತ್ತಿತ್ತು. ಅಷ್ಟೇ ಅಲ್ಲ, ಬಂದ ಕಲಾವಿದರಿಗೆ ಊಟವನ್ನು ಹಾಕಲಾಗುತ್ತಿತ್ತು. ಈ ಬಗ್ಗೆ ಶಿವರಾಜ್​ಕುಮಾರ್ ಮಾತನಾಡಿದ್ದಾರೆ.

ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರಕ್ಕಾಗಿ ಅವರು ವಿವಿಧ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಾ ಇದ್ದಾರೆ. ಕೈರಾಮ್ ವಾಶಿ ಯ್ಯೂಟ್ಯೂಬ್ ಚಾನೆಲ್​ಗೂ ಶಿವರಾಜ್​ಕುಮಾರ್ ಅವರು ಸಂದರ್ಶನ ನೀಡಿದ್ದು, ರಾಜ್​ಕುಮಾರ್ ಬಗ್ಗೆ ಮಾತನಾಡಿದ್ದಾರೆ.

‘ಚೆನ್ನೈನಲ್ಲಿದ್ದಾಗ ನಿತ್ಯ ನೂರಾರು ಜನರು ಬಂದು ನಮ್ಮನೆಯಲ್ಲಿ ಊಟ ಮಾಡುತ್ತಿದ್ದರು. ರಾಜ್​ಕುಮಾರ್ ಮನೆಯಲ್ಲಿ ಎಲ್ಲರಿಗೂ ಬಿಸಿ ಅನ್ನ, ಬಿಸಿ ಸಾರು ಕೊಡಲಾಗುತ್ತಿತ್ತು. ಅದುವೇ ಸ್ಪೇಷಾಲಿಟಿ. ಎಷ್ಟಾದರೂ ತಿನ್ನಿ, ವೇಸ್ಟ್ ಮಾಡಬೇಡಿ ಎಂದು ಅಪ್ಪಾಜಿ ಹೇಳುತ್ತಿದ್ದರು. ನಾವಿದ್ದ ಮನೆಯ ಸಮೀಪವೇ ಎನ್​ಟಿಆರ್ ಹಾಗೂ ಎಂಜಿಆರ್​ ಮನೆಗಳು ಇದ್ದವು. ಹೀಗಾಗಿ, ಅದನ್ನು ನೋಡಲು ಜನರು ಅಲ್ಲಿಗೆ ಬರುತ್ತಿದ್ದರು. ಶೂಟಿಂಗ್ ನೋಡೋಕೆ ರಾಜ್​ಕುಮಾರ್ ಅವಕಾಶ ಕೊಡುತ್ತಿದ್ದರು. ಯಾರೋ ಬಂದು ಅಣ್ಣಾ ನಿಮ್ಮ ಮನೆಯ ನೀರು ಕೊಡಿ ಕುಡಿದುಬಿಡ್ತೀವಿ ಎಂದರು. ಆ ನೀರನ್ನು ಕುಡಿದ ಬಳಿಕ ಅಮೃತ ಕುಡಿದಂತೆ ಆಯ್ತು ಎಂದಿದ್ದರು’ ಎಂದು ಶಿವಣ್ಣ ವಿವರಿಸಿದ್ದಾರೆ.

ಇದನ್ನೂ ಓದಿ: ಶಿವರಾಜ್​ಕುಮಾರ್​ ಆರೋಗ್ಯ ಸಮಸ್ಯೆ; ಕರೆ ಮಾಡಿ ವಿಚಾರಿಸಿದ ಯಶ್, ಸುದೀಪ್, ಡಾಲಿ

ಆ ಒಂದು ಮಾತಿನಿಂದ ರಾಜ್​ಕುಮಾರ್​ಗೆ ಒಂದು ಆಲೋಚನೆ ಬಂತು. ‘ಹೊರಗಡೆ ಎಲ್ಲರಿಗೂ ಸಿಗುವ ರೀತಿ ನಿತ್ಯ ಜ್ಯೂಸ್ ಮಾಡಿಡಿ ಎಂದರು. ಅಂದಿನಿಂದ ಮಜ್ಜಿಗೆ ಅಥವಾ ಜ್ಯೂಸ್ ಇಡುತ್ತಾ ಇದ್ದರು. ಡ್ರಮ್ ಅಲ್ಲಿ ಐಸ್ ಹಾಕಿ ಇಟ್ಟು ಬಿಡ್ತಾ ಇದ್ರು. ದುಡ್ಡು ಎಷ್ಟು ಖರ್ಚಾಗುತ್ತದೆ ಎಂಬುದರ ಆಲೋಚನೆ ಅವರಿಗೆ ಇಲ್ಲ. ರಾಜ್​ಕುಮಾರ್ ಮನೆಯ ಸಮೀಪ ಕೋಲ್ಡ್ ಜ್ಯೂಸ್ ಇದೆ ಕುಡಿದು ಬರೋಣ ಎಂದು ಆಟೋ ಡ್ರೈವರ್ ಹೇಳುತ್ತಿದ್ದರು. ಅದು ನಮಗೆ ಕೇಳುತ್ತಿತ್ತು’ ಎಂದಿದ್ದಾರೆ ಶಿವಣ್ಣ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:54 am, Thu, 14 November 24

Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸತ್ಯನಾರಾಯಣ ವ್ರತದ ಮಹತ್ವ ಹಾಗೂ ಫಲ ತಿಳಿಯಿರಿ
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
Daily Horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ, ಯಾರಿಗೆ ಶುಭ ಅಶುಭ?
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯುವಕ
ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯುವಕ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?