AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುಪೂರ್ಣಿಮೆ: ಗುರು ರಾಯರಿಂದ ಸಾಕಷ್ಟು ಪ್ರಭಾವಿತರಾಗಿದ್ದ ರಾಜ್​ಕುಮಾರ್

ಗುರುಪೂರ್ಣಿಮೆಯಂದು ರಾಜ್‌ಕುಮಾರ್ ಅವರ ರಾಯರ ಭಕ್ತಿಯನ್ನು ನೆನಪಿಸಿಕೊಳ್ಳುವುದು ಅತ್ಯಂತ ಸೂಕ್ತ. ರಾಘವೇಂದ್ರ ಸ್ವಾಮಿಗಳ ಮೇಲಿನ ಅವರ ಅಪಾರ ನಂಬಿಕೆ 'ಮಂತ್ರಾಲಯ ಮಹಾತ್ಮೆ' ಚಿತ್ರದ ಮೂಲಕ ವ್ಯಕ್ತವಾಗಿದೆ. ಜಗ್ಗೇಶ್ ಅವರೊಂದಿಗಿನ ಅವರ ಚರ್ಚೆಗಳು ಕೂಡ ರಾಯರ ಭಕ್ತಿಯನ್ನು ಸೂಚಿಸುತ್ತವೆ. ಆ ಬಗ್ಗೆ ಇಲ್ಲಿದೆ ವಿವರ.

ಗುರುಪೂರ್ಣಿಮೆ: ಗುರು ರಾಯರಿಂದ ಸಾಕಷ್ಟು ಪ್ರಭಾವಿತರಾಗಿದ್ದ ರಾಜ್​ಕುಮಾರ್
ರಾಜ್​ಕುಮಾರ್
ರಾಜೇಶ್ ದುಗ್ಗುಮನೆ
|

Updated on:Jul 10, 2025 | 10:22 AM

Share

ಇಂದು (ಜುಲೈ 10) ಗುರಪೂರ್ಣಿಮೆ. ಇದರ ಜೊತೆಗೆ ರಾಯರ ದಿನವೂ ಹೌದು. ಎರಡೂ ವಿಶೇಷತೆಗಳು ಒಂದೇ ದಿನ ಬರೋದು ಅಪರೂಪ. ಈ ದಿನದಂದು ರಾಜ್​ಕುಮಾರ್ ಅವರ ರಾಯರ ಭಕ್ತಿಯನ್ನು ನೆನಪಿಸಿಕೊಳ್ಳಲೇಬೇಕು. ರಾಜ್​ಕುಮಾರ್ (Rajkumar) ಅವರು ರಾಘವೇಂದ್ರ ಸ್ವಾಮಿಗಳನ್ನು ಅಪರಾವಾಗಿ ನಂಬುತ್ತಿದ್ದರು. ಇದಕ್ಕಾಗಿ ಅವರು ರಾಯರ ಮೇಲೆ ಸಿನಿಮಾವನ್ನೇ ಮಾಡಿದ್ದರು. ರಾಘವೇಂದ್ರ ಸ್ವಾಮಿಗಳ ಬಗ್ಗೆ ಹಾಡುಗಳನ್ನು ಕೂಡ ಹಾಡಿದ್ದಾರೆ.

ಜಗ್ಗೇಶ್ ಸಿಕ್ಕಾಗ..

ಜಗ್ಗೇಶ್ ಅವರು ಕೂಡ ರಾಯರ ಭಕ್ತರು. ರಾಜ್​ಕುಮಾರ್ ಹಾಗೂ ಜಗ್ಗೇಶ್ ಸಿಕ್ಕಾಗ ಇದೇ ರೀತಿಯ ಚರ್ಚೆಗಳೇ ನಡೆಯುತ್ತಿದ್ದವು. ‘ಅಧ್ಯಾತ್ಮದ ಬಗ್ಗೆ ರಾಜ್​ಕುಮಾರ್​ಗೆ ಅಪಾರ ಆಸಕ್ತಿ ಇತ್ತು. ನಾನು ಹಾಗೂ ರಾಜ್​ಕುಮಾರ್ ಸಿಕ್ಕಾಗ ರಾಘವೇಂದ್ರ ಸ್ವಾಮಿಗಳ ಬಗ್ಗೆಯೇ ಮಾತನಾಡುತ್ತಿದ್ದೆವು. ರಾಯರ ಜೊತೆಗೆ ಅವರು ಬೆರೆತು ಹೋಗಿದ್ದರು. ಅವರು ಪರಮ ದೈವ ಭಕ್ತ ಆಗಿದ್ದರು’ ಎಂದು ಜಗ್ಗೇಶ್ ಹೇಳಿದ್ದರು.

ಮಗನಿಗೂ ಹೆಸರು..

ರಾಜ್​ಕುಮಾರ್ ತಮಗೆ ಜನಿಸಿದ ಮೊದಲ ಮಗನಿಗೆ ರಾಯರ ಹೆಸರನ್ನೇ ಇಟ್ಟಿದ್ದಾರೆ. ರಾಘವೇಂದ್ರ ಎಂಬುದು ರಾಜ್​ಕುಮಾರ್ ಅವರ ಹಿರಿಯ ಮಗನ ಹೆಸರು. ರಾಜ್​ಕುಮಾರ್​ಗೆ ರಾಯರ ಮೇಲೆ ಎಷ್ಟು ನಂಬಿಕೆ ಇತ್ತು ಎಂದು ಈ ವಿಚಾರ ಸಾರುತ್ತದೆ.

ಇದನ್ನೂ ಓದಿ
Image
ವಿಎಫ್​ಎಕ್ಸ್ ಮಶಿನ್, 86 ಕ್ಯಾಮೆರಾಗಳ ಮಧ್ಯೆ ಶೂಟ್ ಮಾಡಿದ ಯಶ್
Image
ಟಾಲಿವುಡ್​​ನ ಸ್ಟಾರ್ ಹೀರೋ ಚಿತ್ರಕ್ಕೆ ನಾಯಕಿ ಆದ ರಶ್ಮಿಕಾ ಮಂದಣ್ಣ
Image
ಆಂಧ್ರ ಪ್ರದೇಶದಲ್ಲಿ ಗಾಂಜಾ ಕಡಿಮೆ ಮಾಡಿದ ನಟ ಪವನ್ ಕಲ್ಯಾಣ್
Image
‘ನಿವೇದಿತಾಳನ್ನು ಈಗಲೂ ಮಿಸ್ ಮಾಡಿ ಕೊಳ್ತೀನಿ’; ಚಂದನ್ ಶೆಟ್ಟಿ

ಸಿನಿಮಾ ಮಾಡಲು ಆಸಕ್ತಿ..

1966ರಲ್ಲಿ ‘ಮಂತ್ರಾಲಯ ಮಹಾತ್ಮೆ’ ಹೆಸರಿನ ಸಿನಿಮಾ ಬಂತು. ಈ ಚಿತ್ರದಲ್ಲಿ ರಾಜ್​ಕುಮಾರ್ ಅವರು ರಾಯರ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರು ಈ ಪಾತ್ರವನ್ನು ಅಕ್ಷರಶಃ ಜೀವಿಸಿದ್ದರು. ಈ ಸಿನಿಮಾ ಮಾಡಲು ಸ್ಫೂರ್ತಿ ನೀಡಿದ್ದು ಕೂಡ ರಾಯರೇ.

ಇದನ್ನೂ ಓದಿ: 666 ಆಪರೇಷನ್ ಡ್ರೀಮ್ ಥಿಯೇಟರ್‌: ಶಿವರಾಜ್‌ಕುಮಾರ್ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

ರಾಜ್​ಕುಮಾರ್ ಅವರು ಮಂತ್ರಾಲಯಕ್ಕೆ ತೆರಳಿ ರಾಯರ ಗುಡಿಯಲ್ಲೇ ಮಲಗಿದ್ದರು. ಬೆಳಿಗ್ಗೆ ಎದ್ದ ತಕ್ಷಣ ಅವರಿಗೆ ಏನನ್ನಿಸಿತೋ ಏನೋ, ನೇರವಾಗಿ ಎದ್ದು, ದೇವರಿಗೆ ನಮಿಸಿ ಬೆಂಗಳೂರಿಗೆ ಬಂದರು. ಅವರು ನಿರ್ಮಾಪಕರ ಕರೆದು ಈ ರೀತಿಯ ಸಿನಿಮಾನ ತಾವು ಮಾಡಬೇಕು ಎಂದು ಬೇಡಿಕೆ ಇಟ್ಟರು. ಆ ಬಳಿಕ ಸಿನಿಮಾ ಆಯಿತು. ‘ಹಾಲಲ್ಲಾದರೂ ಹಾಕು..’ ಹಾಡನ್ನು ರಾಜ್​ಕುಮಾರ್ ಅವರು ಶ್ರದ್ಧೆಯಿಂದ ಹಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:59 am, Thu, 10 July 25

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ