AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯದ ಗರ್ಭಗುಡಿಯಲ್ಲಿ ರಾತ್ರಿ ಕಳೆದ ರಾಜ್​ಕುಮಾರ್; ನಡೆದಿತ್ತು ಪವಾಡ

1966ರಲ್ಲಿ ಬಿಡುಗಡೆಯಾದ ‘ಮಂತ್ರಾಲಯ ಮಹಾತ್ಮೆ’ ಚಿತ್ರ ರಾಜ್ ಕುಮಾರ್ ಅವರ ನೆಚ್ಚಿನ ಚಿತ್ರವಾಗಿತ್ತು. ರಾಘವೇಂದ್ರ ಸ್ವಾಮಿ ಪಾತ್ರದಲ್ಲಿ ಅವರ ಅಭಿನಯ ಅದ್ಭುತವಾಗಿತ್ತು. ಚಿತ್ರಕ್ಕಾಗಿ ಅವರು 43 ದಿನಗಳ ಕಟ್ಟುನಿಟ್ಟಾದ ಸಸ್ಯಾಹಾರ ಮತ್ತು 18 ಕಿ.ಮೀ. ಪಾದಯಾತ್ರೆ ಮಾಡಿದ್ದರು. ಚಿತ್ರದ ಯಶಸ್ಸಿನ ಹಿಂದಿನ ಆಧ್ಯಾತ್ಮಿಕ ವಿಚಾರ ಇಲ್ಲಿದೆ.

ಮಂತ್ರಾಲಯದ ಗರ್ಭಗುಡಿಯಲ್ಲಿ ರಾತ್ರಿ ಕಳೆದ ರಾಜ್​ಕುಮಾರ್; ನಡೆದಿತ್ತು ಪವಾಡ
ರಾಜ್​ಕುಮಾರ್ (ಚಿತ್ರಕೃಪೆ: ಎಸ್​ಜಿವಿ ಡಿಜಿಟಲ್ )
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 23, 2024 | 12:23 PM

Share

1966ರಲ್ಲಿ ‘ಮಂತ್ರಾಲಯ ಮಹಾತ್ಮೆ’ ಸಿನಿಮಾ ರಿಲೀಸ್ ಆಯಿತು. ಟಿವಿ ಸಿಂಗ್ ಠಾಕೂರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರದಲ್ಲಿ ರಾಜ್​ಕುಮಾರ್ ಅವರು ರಾಘವೇಂದ್ರ ಸ್ವಾಮಿ ಪಾತ್ರದಲ್ಲಿ ನಟಿಸಿದ್ದರು. ರಾಜ್​ಕುಮಾರ್ ಅವರ ಫೇವರಿಟ್ ಸಿನಿಮಾಗಳಲ್ಲಿ ಈ ಚಿತ್ರ ಮೊದಲ ಸ್ಥಾನದಲ್ಲಿ ನಿಲ್ಲುತ್ತದೆ. ಈ ಸಿನಿಮಾವನ್ನು ರಾಜ್​ಕುಮಾರ್ ಮಾಡಿದ್ದು ಹೇಗೆ ಎಂಬ ಬಗ್ಗೆ ಶಿವರಾಜ್​ಕುಮಾರ್ ಅವರು ಈ ಮೊದಲು ಹೇಳಿದ್ದರು.

ರಾಜ್​ಕುಮಾರ್ ಅವರು ರಾಘವೇಂದ್ರ ಸ್ವಾಮಿ ಪಾತ್ರ ಮಾಡಿದರೆ, ಜಯಂತಿ ಸರಸ್ವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಕಲ್ಪನಾ ಅವರು ತುಳಸಿಯಾಗಿ ಕಾಣಿಸಿಕೊಂಡರು. ಈ ಚಿತ್ರಕ್ಕಾಗಿ ರಾಜ್​ಕುಮಾರ್ ಅವರು 43 ದಿನಗಳ ಕಾಲ ಕಟ್ಟುನಿಟ್ಟಾದ ಸಸ್ಯಾಹಾರ ಸೇವನೆ ಮಾಡಿದ್ದರು. ಚಪ್ಪಲಿ ಧರಿಸದೆ ಅವರು 18 ಕಿಲೋ ಮೀಟರ್ ನಡೆದಿದ್ದರು ಅನ್ನೋದು ವಿಶೇಷ. ಈ ಸಿನಿಮಾ ಅಂದಿನ ಕಾಲಕ್ಕೆ ಸೂಪರ್ ಹಿಟ್ ಎನಿಸಿಕೊಂಡಿತು. ಈ ಸಿನಿಮಾದಲ್ಲಿ ರಾಜ್​ಕುಮಾರ್ ಅವರು ರಾಘವೇಂದ್ರ ಸ್ವಾಮಿ ಪಾತ್ರ ಮಾಡಲು ಒಂದು ಪ್ರಮುಖ ಕಾರಣ ಇತ್ತು. ಈ ಬಗ್ಗೆ ಶಿವಣ್ಣ ಮಾತನಾಡಿದ್ದರು.

‘ಮಂತ್ರಾಲಯಕ್ಕೆ ಹೋದಾಗ ಗರ್ಭಗುಡಿಯಲ್ಲಿ ಮಲಗಬಹುದಾ ಎಂದು ಅಪ್ಪಾಜಿ ಕೇಳಿದರು. ಅದೇ ರೀತಿ ಮಲಗಿದರು. ಬೆಳಿಗ್ಗೆ ಎದ್ದು ಪೂಜೆ ಮುಗಿಸಿದರು. ಆ ಬಳಿಕ ದೊರೆ ಭಗವಾನ್ ಬಳಿ ಬಂದ ರಾಜ್​ಕುಮಾರ್, ನಾನು ರಾಘವೇಂದ್ರ ಸ್ವಾಮಿಗಳ ಬಗ್ಗೆ ಸಿನಿಮಾ ಮಾಡ್ತೀನಿ, ನೀವು ಮಾಡಿ ಎಂದು ಕೇಳಿದರು. ಆ ಸಿನಿಮಾನ ಅಷ್ಟು ಸುಲಭದಲ್ಲಿ ಮಾಡೋಕೆ ಆಗಲ್ಲ. ಅಪ್ಪಾಜಿ ಅಷ್ಟು ಶ್ರದ್ಧೆಯಿಂದ ಮಾಡಿದರು ’ ಎಂದಿದ್ದರು ಶಿವರಾಜ್​ಕುಮಾರ್. ಆಗಿನ ಕಾಲದಲ್ಲಿ ಸಿನಿಮಾ 25 ವಾರ ಓಡಿತ್ತು. ಆ ರಾತ್ರಿ ಏನೋ ಪವಾಡ ನಡೆದಿತ್ತು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ದೊರೈ-ಭಗವಾನ್ ಈ ಸಿನಿಮಾದ ನಿರ್ಮಾಣದಲ್ಲಿ ಹಾಗೂ ನಿರ್ದೇಶನದಲ್ಲಿ ಹೆಚ್ಚಿನ ಕಾಳಜಿ ವಹಿಸಿದ್ದರು. ಇವರ ಮೇಲುಸ್ತುವಾರಿಯಲ್ಲಿ ಸಿನಿಮಾ ಮೂಡಿ ಬಂದಿತ್ತು. ಈ ಸಿನಿಮಾ ರಿಲೀಸ್ ಆಗಿ 60 ವರ್ಷಗಳೇ ಕಳೆಯುತ್ತಾ ಬಂದಿವೆ.

ಇದನ್ನೂ ಓದಿ: ನಿಮ್ಮ ಮನೆಯ ನೀರು ಅಮೃತ ಎಂದ ಅಭಿಮಾನಿ; ರಾಜ್​ಕುಮಾರ್ ಮಾಡಿದ್ದೇನು?

ರಾಜ್​ಕುಮಾರ್ ಅವರು ಈ ಮೊದಲು ಮಾತನಾಡಿದ್ದಾಗ ತಮ್ಮಿಷ್ಟದ ಸಿನಿಮಾ ಎಂದರೆ ಮಂತ್ರಾಲಯ ಮಹಾತ್ಮೆ ಎಂದಿದ್ದರು. ‘ನಾನು ಹಲವು ಸಿನಿಮಾ ಮಾಡಿದ್ದೇನೆ. ಯಾವ ಚಿತ್ರವನ್ನೂ ನೋಡಿ ಎಂದು ಅಭಿಮಾನಿಗಳ ಬಳಿ ಕೋರಿಲ್ಲ. ಮಂತ್ರಾಲಯ ಮಹಾತ್ಮೆ ಒಂದನ್ನು ಹೊರತುಪಡಿಸಿ. ಅದನ್ನು ಅಭಿಮಾನಿಗಳ ಬಳಿ ನೋಡಿ ಎಂದು ನಾನು ಕೋರಿದ್ದೆ’ ಎಂದಿದ್ದರು ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:01 am, Sat, 23 November 24

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್