AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯದ ಗರ್ಭಗುಡಿಯಲ್ಲಿ ಮಲಗಿದ್ದ ರಾಜ್​ಕುಮಾರ್; ಆ ಬಳಿಕ ನಡೆದಿದ್ದು ಏನು?

ರಾಜ್ ಕುಮಾರ್ ಅವರು ತಮ್ಮ ಭಕ್ತಿಯಿಂದ ಪ್ರಸಿದ್ಧರಾಗಿದ್ದರು. ‘ಮಂತ್ರಾಲಯ ಮಹಾತ್ಮೆ’ ಸಿನಿಮಾ ಚಿತ್ರೀಕರಣದ ಸಮಯದಲ್ಲಿ ಅವರು ಮಂತ್ರಾಲಯದ ಗರ್ಭಗುಡಿಯಲ್ಲಿ ರಾತ್ರಿ ಕಳೆದರು ಎಂಬುದು ವಿಶೇಷ. ಈ ಚಿತ್ರವು ಅವರ ನೆಚ್ಚಿನ ಚಿತ್ರವಾಗಿತ್ತು ಮತ್ತು ದೊರೆ ಭಗವಾನ್ ಅವರ ಸಹಾಯದಿಂದ ನಿರ್ಮಾಣಗೊಂಡಿತು .

ಮಂತ್ರಾಲಯದ ಗರ್ಭಗುಡಿಯಲ್ಲಿ ಮಲಗಿದ್ದ ರಾಜ್​ಕುಮಾರ್; ಆ ಬಳಿಕ ನಡೆದಿದ್ದು ಏನು?
ರಾಜ್​ಕುಮಾರ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Apr 24, 2025 | 7:35 AM

ರಾಜ್​ಕುಮಾರ್ (Rajkumar) ಅವರಿಗೆ ಇಂದು (ಏಪ್ರಿಲ್ 23) ಜನ್ಮದಿನ. ಅವರು ಹುಟ್ಟಿದ್ದು ಹಾಗೂ ನಿಧನರಾಗಿದ್ದು ಒಂದೇ ತಿಂಗಳಲ್ಲಿ. 1929ರ ಏಪ್ರಿಲ್ 24ರಂದು ರಾಜ್​ಕುಮಾರ್ ಅವರು ಸಿಂಗನಲ್ಲೂರು ಪುಟ್ಟಸ್ವಾಮಿ ಮುತ್ತುರಾಜ್ ಆಗಿ ಜನಿಸಿದರು. ದೊಡ್ಡ ಗಾಜನೂರು ಅವರು ಜನಿಸಿದ ಸ್ಥಳ. ರಾಜ್​ಕುಮಾರ್ ಅವರು ನಟಿಸಿದ ಸಿನಿಮಾ ಬಗ್ಗೆ ಅನೇಕರಿಗೆ ಹೆಮ್ಮೆ ಇದೆ. ಏಕೆಂದರೆ ಅವರ ಪ್ರತಿ ಚಿತ್ರಗಳಲ್ಲೂ ಒಂದು ಸಂದೇಶ ಇರುತ್ತಿತ್ತು. ಪ್ರತಿ ಸಿನಿಮಾಗಳ ಹಿಂದೆ ಒಂದು ಅಚ್ಚರಿಯ ಕಥೆ ಕೂಡ ಇರುತ್ತಿತ್ತು.

ರಾಜ್​ಕುಮಾರ್ ಅವರು ಪೌರಾಣಿಕ ಪಾತ್ರಗಳ ಮೂಲಕ ಗಮನ ಸೆಳೆದವರು. ಈ ಪಾತ್ರಗಳಲ್ಲಿ ಅವರು ಅನೇಕರಿಗೆ ಇಷ್ಟ ಆಗುತ್ತಾರೆ. ರಾಜ್​ಕುಮಾರ್ ಅವರನ್ನು ಜನರು ಹೆಚ್ಚು ಇಷ್ಟಪಟ್ಟಿದ್ದು ಇದೇ ಕಾರಣಕ್ಕೆ ಎಂದೇ ಹೇಳಬಹುದು. 1966ರಲ್ಲಿ ರಿಲೀಸ್ ಆದ ‘ಮಂತ್ರಾಲಯ ಮಹಾತ್ಮೆ’ ಅವರ ವಿಶೇಷ ಚಿತ್ರಗಳಲ್ಲಿ ಒಂದು.

‘ಮಂತ್ರಾಲಯ ಮಹಾತ್ಮೆ’ ಸಿನಿಮಾಗೆ ಟಿವಿ ಸಿಂಗ್ ಠಾಕೂರ್ ಅವರು ನಿರ್ದೇಶನ ಮಾಡಿದ್ದರು. ಈ ಚಿತ್ರದಲ್ಲಿ ರಾಜ್​ಕುಮಾರ್ ಅವರು ರಾಘವೇಂದ್ರ ಸ್ವಾಮಿ ಪಾತ್ರದಲ್ಲಿ ನಟಿಸಿದ್ದರು. ಇದು ಅವರ ಫೇವರಿಟ್ ಚಿತ್ರ. ಈ ಸಿನಿಮಾನ ಮಾತ್ರ ರಾಜ್​ಕುಮಾರ್ ಅವರು ನೋಡಿ ಎಂದು ಅಭಿಮಾನಿಗಳ ಬಳಿ ಕೋರುತ್ತಿದ್ದರಂತೆ. ಈ ಸಿನಿಮಾ ಅವರಿಗೆ ಅಷ್ಟು ಹತ್ತಿರ ಆಗಿತ್ತು ಎಂದೇ ಹೇಳಬಹುದು.

ಇದನ್ನೂ ಓದಿ
Image
ರಾಜ್​ಕುಮಾರ್ ಮೊದಲ ಆಡಿಷನ್ ಹೇಗಿತ್ತು? ವಿವರಿಸಿದ್ದ ಅಣ್ಣಾವ್ರು
Image
ಪಹಲ್ಗಾಮ್ ದಾಳಿ ಬಗ್ಗೆ ಪಾಕ್ ನಟನ ಅಭಿಪ್ರಾಯವೇನು? ದೂಷಿಸಿದ್ದು ಯಾರನ್ನು?
Image
ರಾಜ್​ಕುಮಾರ್ ಜನ್ಮದಿನಕ್ಕೆ ಶಿವಣ್ಣನ ಹೊಸ ಸಿನಿಮಾ ಘೋಷಣೆ; ಟೈಟಲ್ ಏನು?
Image
‘ಸೀತಾ ರಾಮ’ ಧಾರಾವಾಹಿ: ಅಶೋಕ್​ಗೆ ಗೊತ್ತಾಗಿ ಹೋಯ್ತು ಸಿಹಿಯ ಆತ್ಮದ ಕಥೆ

ರಾಜ್​ಕುಮಾರ್ ಒಮ್ಮೆ ಮಂತ್ರಾಲಯಕ್ಕೆ ತೆರಳಿದ್ದರು. ಅಲ್ಲಿ ಅವರು ರಾತ್ರಿ ಮಲಗುತ್ತೇನೆ ಎನ್ನುವ ಕೋರಿಕೆ ಇಟ್ಟರು. ಗರ್ಭಗುಡಿಯಲ್ಲಿ ಮಲಗಲು ಅವಕಾಶ ನೀಡಲಾಯಿತು. ಮುಂಜಾನೆ ಅವರು ಎದ್ದು ನೇರವಾಗಿ ಮನೆಗೆ ಬಂದರು. ದೊರೆ ಭಗವಾನ್ ಬಳಿ ಬಂದ ರಾಜ್​ಕುಮಾರ್, ನಾನು ರಾಘವೇಂದ್ರ ಸ್ವಾಮಿಗಳ ಬಗ್ಗೆ ಸಿನಿಮಾ ಮಾಡ್ತೀನಿ, ನೀವು ಮಾಡಿ ಎಂದು ಕೇಳಿದರು. ಆ ಬಳಿಕ ಸಿನಿಮಾ ಆಯಿತು.

ಇದನ್ನೂ ಓದಿ: ರಾಜ್​ಕುಮಾರ್ ಮೊದಲ ಆಡಿಷನ್ ಹೇಗಿತ್ತು? ವಿವರಿಸಿದ್ದ ಅಣ್ಣಾವ್ರು

ರಾಜ್​ಕುಮಾರ್ ಅವರು ತುಂಬಾನೇ ಶ್ರದ್ಧೆ ಹಾಗೂ ಭಕ್ತಿಯಿಂದ ಆ ಚಿತ್ರ ಮಾಡಿದರು ಎಂದೇ ಹೇಳಬಹುದು. ದೊರೈ-ಭಗವಾನ್ ಈ ಸಿನಿಮಾದ ನಿರ್ಮಾಣದಲ್ಲಿ ಹಾಗೂ ನಿರ್ದೇಶನದಲ್ಲಿ ಹೆಚ್ಚಿನ ಕಾಳಜಿ ವಹಿಸಿದ್ದರು. ಇವರ ಮೇಲುಸ್ತುವಾರಿಯಲ್ಲಿ ಸಿನಿಮಾ ಮೂಡಿ ಬಂದಿತ್ತು. ಈ ಸಿನಿಮಾ ರಿಲೀಸ್ ಆಗಿ 70 ವರ್ಷಗಳು ಕಳೆದಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Thu, 24 April 25

ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ