AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಸದಾ ಬಿಳಿ ಪಂಚೆ, ಶರ್ಟ್​ನಲ್ಲೇ ಇರುತ್ತಿದ್ದರೇಕೆ? ಆ ಘಟನೆಯೇ ಕಾರಣ

ರಾಜ್ಕುಮಾರ್ ಅವರು ತಮ್ಮ ಜೀವನದ ಒಂದು ಹಂತದಲ್ಲಿ ಬಿಳಿ ಪಂಚೆ ಮತ್ತು ಶರ್ಟ್ ಧರಿಸಲು ಆರಂಭಿಸಿದರು. ಇದಕ್ಕೆ ಕಾರಣ ಮದ್ರಾಸ್‌ನಲ್ಲಿ ಒಬ್ಬ ಅಭಿಮಾನಿಯು ಅವರಿಗೆ ಹೇಳಿದ ಮಾತು. ಅಭಿಮಾನಿಯ ಮಾತು ಅವರ ಮೇಲೆ ಆಳವಾದ ಪ್ರಭಾವ ಬೀರಿತು. ಈ ಘಟನೆಯ ನಂತರ ಅವರು ಸದಾ ಸರಳ ಉಡುಗೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗೌರವವನ್ನು ಗಳಿಸಿದರು.

ರಾಜ್​ಕುಮಾರ್ ಸದಾ ಬಿಳಿ ಪಂಚೆ, ಶರ್ಟ್​ನಲ್ಲೇ ಇರುತ್ತಿದ್ದರೇಕೆ? ಆ ಘಟನೆಯೇ ಕಾರಣ
ರಾಜ್​ಕುಮಾರ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:May 13, 2025 | 8:06 AM

Share

ರಾಜ್​ಕುಮಾರ್ (Rajkumar) ಅವರು ಒಂದು ವಯಸ್ಸನ್ನು ದಾಟಿದ ಬಳಿಕ ಬಿಳಿ ಪಂಚೆ ಹಾಗೂ ಬಿಳಿ ಶರ್ಟ್​​​ನಲ್ಲೇ ಹೆಚ್ಚು ಕಾಣಿಸಿಕೊಂಡರು. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಎಲ್ಲಿಯೂ ರಿವೀಲ್ ಮಾಡಿರಲಿಲ್ಲ. ಈ ಬಗ್ಗೆ ಅವರು ಕೂಡ ಎಲ್ಲಿಯೂ ಹೇಳಿಕೊಂಡಿಲ್ಲ. ಆದರೆ, ಈಗ ರಾಜ್​ಕುಮಾರ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡವರೊಬ್ಬರು ಈ ಬಗ್ಗೆ ಮಾತನಾಡಿದ್ದಾರೆ. ರಾಜ್​ಕುಮಾರ್ ಬಿಳಿ ಪಂಚೆ ಹಾಗೂ ಶರ್ಟ್​ನಲ್ಲೇ ಕಾಣಿಸಿಕೊಳ್ಳುತ್ತಿದ್ದು ಏಕೆ ಎಂಬುದಕ್ಕೆ ಉತ್ತರ ಸಿಕ್ಕಿದೆ.

ರಾಜ್​ಕುಮಾರ್ ಅವರು ಸರಳತೆಗೆ ಮತ್ತೊಂದು ಹೆಸರಾಗಿದ್ದರು. ಸದಾ ಸಿಂಪಲ್ ಉಡುಗೆಯಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದರು. ಎಂದಿಗೂ ಅವರು ಡ್ರೆಸ್ ವಿಚಾರದಲ್ಲಿ ಮೆರೆದವರಲ್ಲ. ಅಷ್ಟೇ ಏಕೆ ದುಬಾರಿ ಕಾರುಗಳನ್ನು ತೆಗೆದುಕೊಂಡು ಓಡಾಡಿದವರಲ್ಲ. ರಾಜ್​ಕುಮಾರ್ ಸರಳತೆ ಮೂಲಕ ಗಮನ ಸೆಳೆದವರು. ಆದರೆ, ರಾಜ್​ಕುಮಾರ್ ಅವರು ಈ ಮೊದಲು ಜೀನ್ಸ್ ಹಾಕುತ್ತಿದ್ದರು. ಒಂದು ಘಟನೆ ಅವರನ್ನು ಬದಲಾಯಿಸಿತು.

ಇದನ್ನೂ ಓದಿ
Image
ನನ್ನ ತಂದೆ ಪಾಕಿಸ್ತಾನದವರು ಎಂದಿದ್ದ ಶಾರುಖ್ ಖಾನ್; ಈ ಕಾರಣಕ್ಕೆ ಮೌನ?
Image
‘ಕೂಲಿ’ ಸಿನಿಮಾದ ಬಹುತೇಕ ಶೂಟ್​ನ ಬಾಡಿ ಡಬಲ್​ ಮೂಲಕವೇ ಮುಗಿಸಿದ ನಿರ್ದೇಶಕ
Image
ಕಲರ್ಸ್​​ ಧಾರಾವಾಹಿಯಲ್ಲಿ ಗೌತಮಿ ಜಾಧವ್; ಪ್ರೋಮೋ ಮೂಲಕ ಬಿಗ್ ಸರ್​ಪ್ರೈಸ್
Image
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ

ಆರ್​ಜೆ ಮಯೂರ್ ಅವರು ನಡೆಸುತ್ತಿರುವ ‘ಗೋಲ್ಡ್ ಕ್ಲಾಸ್ ವಿತ್ ಮಯೂರ್’ ಯೂಟ್ಯೂಬ್ ಚಾನೆಲ್​ಗೆ ಹಿರಿಯ ನಿರ್ದೇಶಕ ಪ್ರವೀಣ್ ನಾಯಕ್ ಅವರು ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ ಅವರು ಈ ವಿಚಾರ ರಿವೀಲ್ ಮಾಡಿದ್ದಾರೆ. ರಾಜ್​ಕುಮಾರ್ ಬಗ್ಗೆ ಅಚ್ಚರಿಯ ವಿಚಾರ ರಿವೀಲ್ ಮಾಡಿದ್ದಾರೆ.

ರಾಜ್​ಕುಮಾರ್ ಅವರು ಸ್ಟೈಲಿಶ್ ಆಗಿಯೇ ಓಡಾಡಿಕೊಂಡಿದ್ದರು. ಜೀನ್ಸ್ ಹಾಕುತ್ತಿದ್ದರು. ಆದರೆ, ಮದ್ರಾಸ್​​ನಲ್ಲಿ ಓರ್ವ ವ್ಯಕ್ತಿ ಹೇಳಿದ ಮಾತು ಅವರನ್ನು ಪ್ರಭಾವಿಗೊಳಿಸಿತು. ‘ರಾಜ್​ಕುಮಾರ್ ಅವರು ಮದ್ರಾಸ್ ವಿಮಾನ ನಿಲ್ದಾಣದಲ್ಲಿ ಇಳಿದು ಬಂದರು. ಆಗ ತಮಿಳಿನ ವ್ಯಕ್ತಿಯೊಬ್ಬರು ನಮಸ್ಕಾರ, ನಿಮ್ಮ ಸಿನಿಮಾಗಳನ್ನು ನೋಡುತ್ತೇನೆ ಎಂದು ರಾಜ್​ಕುಮಾರ್ ಬಳಿ ಹೇಳಿದರು’ ಎಂದು ಮಾತು ಆರಂಭಿಸಿದರು ಪ್ರವೀಣ್.

‘ನಿಮ್ಮನ್ನು ನೋಡಿದರೆ ಗೌರವ ಭಾವನೆ ಮೂಡುತ್ತದೆ. ಆದರೆ, ಈ ರೀತಿ ಜೀನ್ಸ್ ಹಾಕಿದರೆ ನಿಮ್ಮ ಪಾತ್ರಗಳೇ ನೆನಪಿಗೆ ಬರುತ್ತವೆ. ನಿಮಗೆ ಬಿಳಿ ಪಂಚೆ-ಶರ್ಟ್ ಚೆನ್ನಾಗಿ ಕಾಣುತ್ತದೆ. ಗೌರವ ಹಾಗೆಯೇ ಉಳಿಯುತ್ತದೆ’ ಎಂದರಂತೆ. ಇದು ರಾಜ್​ಕುಮಾರ್ ಮೇಲೆ ಸಾಕಷ್ಟು ಪ್ರಭಾವ ಬೀರಿತು.

ಇದನ್ನೂ ಓದಿ: ‘ಒಡಹುಟ್ಟಿದವರು’ ಸಿನಿಮಾ ಮಾಡಲು ರಾಜ್​ಕುಮಾರ್​ಗೆ ಎರಡು ಷರತ್ತು ಹಾಕಿದ್ದ ಅಂಬರೀಷ್

ರಾಜ್​ಕುಮಾರ್ ತಂದೆ ಕೂಡ ಬಿಳಿ ಪಂಚೆ, ಶರ್ಟ್ ಹಾಕುತ್ತಿದ್ದರು. ‘ಸ್ಟೈಲ್ ಮಾಡೋಕೆ ಜಾಗ ಇದೆ. ಅದುವೇ ರಂಗಭೂಮಿ. ಅಲ್ಲಿ ಮಾಡು’ ಎಂದು ರಾಜ್​ಕುಮಾರ್ ತಂದೆ ಹೇಳಿದ್ದರಂತೆ. ಅದು ಕೂಡ ರಾಜ್​ಕುಮಾರ್​ಗೆ ನೆನಪಿಗೆ ಬಂತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:04 am, Tue, 13 May 25

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು