AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಸದಾ ಬಿಳಿ ಪಂಚೆ, ಶರ್ಟ್​ನಲ್ಲೇ ಇರುತ್ತಿದ್ದರೇಕೆ? ಆ ಘಟನೆಯೇ ಕಾರಣ

ರಾಜ್ಕುಮಾರ್ ಅವರು ತಮ್ಮ ಜೀವನದ ಒಂದು ಹಂತದಲ್ಲಿ ಬಿಳಿ ಪಂಚೆ ಮತ್ತು ಶರ್ಟ್ ಧರಿಸಲು ಆರಂಭಿಸಿದರು. ಇದಕ್ಕೆ ಕಾರಣ ಮದ್ರಾಸ್‌ನಲ್ಲಿ ಒಬ್ಬ ಅಭಿಮಾನಿಯು ಅವರಿಗೆ ಹೇಳಿದ ಮಾತು. ಅಭಿಮಾನಿಯ ಮಾತು ಅವರ ಮೇಲೆ ಆಳವಾದ ಪ್ರಭಾವ ಬೀರಿತು. ಈ ಘಟನೆಯ ನಂತರ ಅವರು ಸದಾ ಸರಳ ಉಡುಗೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗೌರವವನ್ನು ಗಳಿಸಿದರು.

ರಾಜ್​ಕುಮಾರ್ ಸದಾ ಬಿಳಿ ಪಂಚೆ, ಶರ್ಟ್​ನಲ್ಲೇ ಇರುತ್ತಿದ್ದರೇಕೆ? ಆ ಘಟನೆಯೇ ಕಾರಣ
ರಾಜ್​ಕುಮಾರ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:May 13, 2025 | 8:06 AM

Share

ರಾಜ್​ಕುಮಾರ್ (Rajkumar) ಅವರು ಒಂದು ವಯಸ್ಸನ್ನು ದಾಟಿದ ಬಳಿಕ ಬಿಳಿ ಪಂಚೆ ಹಾಗೂ ಬಿಳಿ ಶರ್ಟ್​​​ನಲ್ಲೇ ಹೆಚ್ಚು ಕಾಣಿಸಿಕೊಂಡರು. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಎಲ್ಲಿಯೂ ರಿವೀಲ್ ಮಾಡಿರಲಿಲ್ಲ. ಈ ಬಗ್ಗೆ ಅವರು ಕೂಡ ಎಲ್ಲಿಯೂ ಹೇಳಿಕೊಂಡಿಲ್ಲ. ಆದರೆ, ಈಗ ರಾಜ್​ಕುಮಾರ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡವರೊಬ್ಬರು ಈ ಬಗ್ಗೆ ಮಾತನಾಡಿದ್ದಾರೆ. ರಾಜ್​ಕುಮಾರ್ ಬಿಳಿ ಪಂಚೆ ಹಾಗೂ ಶರ್ಟ್​ನಲ್ಲೇ ಕಾಣಿಸಿಕೊಳ್ಳುತ್ತಿದ್ದು ಏಕೆ ಎಂಬುದಕ್ಕೆ ಉತ್ತರ ಸಿಕ್ಕಿದೆ.

ರಾಜ್​ಕುಮಾರ್ ಅವರು ಸರಳತೆಗೆ ಮತ್ತೊಂದು ಹೆಸರಾಗಿದ್ದರು. ಸದಾ ಸಿಂಪಲ್ ಉಡುಗೆಯಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದರು. ಎಂದಿಗೂ ಅವರು ಡ್ರೆಸ್ ವಿಚಾರದಲ್ಲಿ ಮೆರೆದವರಲ್ಲ. ಅಷ್ಟೇ ಏಕೆ ದುಬಾರಿ ಕಾರುಗಳನ್ನು ತೆಗೆದುಕೊಂಡು ಓಡಾಡಿದವರಲ್ಲ. ರಾಜ್​ಕುಮಾರ್ ಸರಳತೆ ಮೂಲಕ ಗಮನ ಸೆಳೆದವರು. ಆದರೆ, ರಾಜ್​ಕುಮಾರ್ ಅವರು ಈ ಮೊದಲು ಜೀನ್ಸ್ ಹಾಕುತ್ತಿದ್ದರು. ಒಂದು ಘಟನೆ ಅವರನ್ನು ಬದಲಾಯಿಸಿತು.

ಇದನ್ನೂ ಓದಿ
Image
ನನ್ನ ತಂದೆ ಪಾಕಿಸ್ತಾನದವರು ಎಂದಿದ್ದ ಶಾರುಖ್ ಖಾನ್; ಈ ಕಾರಣಕ್ಕೆ ಮೌನ?
Image
‘ಕೂಲಿ’ ಸಿನಿಮಾದ ಬಹುತೇಕ ಶೂಟ್​ನ ಬಾಡಿ ಡಬಲ್​ ಮೂಲಕವೇ ಮುಗಿಸಿದ ನಿರ್ದೇಶಕ
Image
ಕಲರ್ಸ್​​ ಧಾರಾವಾಹಿಯಲ್ಲಿ ಗೌತಮಿ ಜಾಧವ್; ಪ್ರೋಮೋ ಮೂಲಕ ಬಿಗ್ ಸರ್​ಪ್ರೈಸ್
Image
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ

ಆರ್​ಜೆ ಮಯೂರ್ ಅವರು ನಡೆಸುತ್ತಿರುವ ‘ಗೋಲ್ಡ್ ಕ್ಲಾಸ್ ವಿತ್ ಮಯೂರ್’ ಯೂಟ್ಯೂಬ್ ಚಾನೆಲ್​ಗೆ ಹಿರಿಯ ನಿರ್ದೇಶಕ ಪ್ರವೀಣ್ ನಾಯಕ್ ಅವರು ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ ಅವರು ಈ ವಿಚಾರ ರಿವೀಲ್ ಮಾಡಿದ್ದಾರೆ. ರಾಜ್​ಕುಮಾರ್ ಬಗ್ಗೆ ಅಚ್ಚರಿಯ ವಿಚಾರ ರಿವೀಲ್ ಮಾಡಿದ್ದಾರೆ.

ರಾಜ್​ಕುಮಾರ್ ಅವರು ಸ್ಟೈಲಿಶ್ ಆಗಿಯೇ ಓಡಾಡಿಕೊಂಡಿದ್ದರು. ಜೀನ್ಸ್ ಹಾಕುತ್ತಿದ್ದರು. ಆದರೆ, ಮದ್ರಾಸ್​​ನಲ್ಲಿ ಓರ್ವ ವ್ಯಕ್ತಿ ಹೇಳಿದ ಮಾತು ಅವರನ್ನು ಪ್ರಭಾವಿಗೊಳಿಸಿತು. ‘ರಾಜ್​ಕುಮಾರ್ ಅವರು ಮದ್ರಾಸ್ ವಿಮಾನ ನಿಲ್ದಾಣದಲ್ಲಿ ಇಳಿದು ಬಂದರು. ಆಗ ತಮಿಳಿನ ವ್ಯಕ್ತಿಯೊಬ್ಬರು ನಮಸ್ಕಾರ, ನಿಮ್ಮ ಸಿನಿಮಾಗಳನ್ನು ನೋಡುತ್ತೇನೆ ಎಂದು ರಾಜ್​ಕುಮಾರ್ ಬಳಿ ಹೇಳಿದರು’ ಎಂದು ಮಾತು ಆರಂಭಿಸಿದರು ಪ್ರವೀಣ್.

‘ನಿಮ್ಮನ್ನು ನೋಡಿದರೆ ಗೌರವ ಭಾವನೆ ಮೂಡುತ್ತದೆ. ಆದರೆ, ಈ ರೀತಿ ಜೀನ್ಸ್ ಹಾಕಿದರೆ ನಿಮ್ಮ ಪಾತ್ರಗಳೇ ನೆನಪಿಗೆ ಬರುತ್ತವೆ. ನಿಮಗೆ ಬಿಳಿ ಪಂಚೆ-ಶರ್ಟ್ ಚೆನ್ನಾಗಿ ಕಾಣುತ್ತದೆ. ಗೌರವ ಹಾಗೆಯೇ ಉಳಿಯುತ್ತದೆ’ ಎಂದರಂತೆ. ಇದು ರಾಜ್​ಕುಮಾರ್ ಮೇಲೆ ಸಾಕಷ್ಟು ಪ್ರಭಾವ ಬೀರಿತು.

ಇದನ್ನೂ ಓದಿ: ‘ಒಡಹುಟ್ಟಿದವರು’ ಸಿನಿಮಾ ಮಾಡಲು ರಾಜ್​ಕುಮಾರ್​ಗೆ ಎರಡು ಷರತ್ತು ಹಾಕಿದ್ದ ಅಂಬರೀಷ್

ರಾಜ್​ಕುಮಾರ್ ತಂದೆ ಕೂಡ ಬಿಳಿ ಪಂಚೆ, ಶರ್ಟ್ ಹಾಕುತ್ತಿದ್ದರು. ‘ಸ್ಟೈಲ್ ಮಾಡೋಕೆ ಜಾಗ ಇದೆ. ಅದುವೇ ರಂಗಭೂಮಿ. ಅಲ್ಲಿ ಮಾಡು’ ಎಂದು ರಾಜ್​ಕುಮಾರ್ ತಂದೆ ಹೇಳಿದ್ದರಂತೆ. ಅದು ಕೂಡ ರಾಜ್​ಕುಮಾರ್​ಗೆ ನೆನಪಿಗೆ ಬಂತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:04 am, Tue, 13 May 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!