AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakkasapuradhol First Half Review: ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಫಸ್ಟ್ ಹಾಫ್ ಹೇಗಿದೆ?

ಟ್ರೇಲರ್ ಮೂಲಕ ಗಮನ ಸೆಳೆದ ‘ರಕ್ಕಸಪುರದೋಳ್’ ಸಿನಿಮಾ ಈಗ ತೆರೆಕಂಡಿದೆ. ಕೌತುಕಭರಿತ ಕಥೆ ಈ ಸಿನಿಮಾದಲ್ಲಿ ಇದೆ. ಈ ಚಿತ್ರದ ಶೀರ್ಷಿಕೆಯೇ ಬಹಳ ಇಂಟರೆಸ್ಟಿಂಗ್ ಆಗಿದೆ. ರಾಜ್ ಬಿ. ಶೆಟ್ಟಿ ಅವರ ಅಭಿಮಾನಿಗಳು ಈ ಸಿನಿಮಾ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಚಿತ್ರದ ಫಸ್ಟ್ ಹಾಫ್ ವಿಮರ್ಶೆ ಇಲ್ಲಿದೆ.

Rakkasapuradhol First Half Review: ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಫಸ್ಟ್ ಹಾಫ್ ಹೇಗಿದೆ?
Raj B Shetty
ಮದನ್​ ಕುಮಾರ್​
| Edited By: |

Updated on: Feb 06, 2026 | 11:44 AM

Share

ರಾಜ್ ಬಿ. ಶೆಟ್ಟಿ (Raj B Shetty) ಅವರ ಸಿನಿಮಾ ಎಂದರೆ ಖಂಡಿತವಾಗಿಯೂ ಏನಾದರೂ ವಿಶೇಷತೆ ಇರುತ್ತದೆ ಎಂಬ ಭರವಸೆ ಅಭಿಮಾನಿಗಳಿಗೆ ಇದೆ. ಅವರು ನಟಿಸಿದ ‘ರಕ್ಕಸಪುರದೋಳ್’ ಸಿನಿಮಾ ಇಂದು (ಫೆಬ್ರವರಿ 6) ಬಿಡುಗಡೆ ಆಗಿದೆ. ರವಿ ಸಾರಂಗ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರವಿ ವರ್ಮಾ ಅವರು ನಿರ್ಮಾಣ ಮಾಡಿದ್ದಾರೆ. ಟ್ರೇಲರ್ ಮೂಲಕ ‘ರಕ್ಕಸಪುರದೋಳ್’ (Rakkasapuradhol) ಸಿನಿಮಾ ಬಹಳ ನಿರೀಕ್ಷೆ ಮೂಡಿಸಿತ್ತು. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ರಾಜ್ ಬಿ. ಶೆಟ್ಟಿ ಅವರು ಕಾಣಿಸಿಕೊಂಡಿದ್ದಾರೆ. ಒಂದು ಮರ್ಡರ್ ಮಿಸ್ಟರಿ ಕಥೆ ಈ ಸಿನಿಮಾದಲ್ಲಿ ಇದೆ. ‘ರಕ್ಕಸಪುರದೋಳ್’ ಚಿತ್ರದ ಮೊದಲಾರ್ಧದಲ್ಲಿ ಏನೆಲ್ಲ ಇದೆ? ಅದಕ್ಕೆ ಉತ್ತರ ಇಲ್ಲಿದೆ..

  1. ಸಸ್ಪೆನ್ಸ್ ಮೂಲಕವೇ ರಕ್ಕಸಪುರದೋಳ್ ಸಿನಿಮಾದ‌ ಕಥೆ ಶುರು ಆಗುತ್ತದೆ. ಜೊತೆಗೆ ಕಾಮಿಡಿ ದೃಶ್ಯಗಳು ಕೂಡ ಇದೆ.
  2. ರಾಜ್ ಬಿ. ಶೆಟ್ಟಿ ಅವರು ಪೊಲೀಸ್ ಪಾತ್ರ ಮಾಡಿದ್ದಾರೆ. ಪೊಲೀಸ್ ಆದರೂ ಆ ಪಾತ್ರ ಬಹಳ ಡಿಫರೆಂಟ್ ಆಗಿದೆ.
  3. ಸಿದ್ದಯ್ಯ ಸ್ವಾಮಿ ಹಾಡಿನಲ್ಲಿ ಅರ್ಜುನ್ ಜನ್ಯ ಅವರು ಕಾಣಿಸಿಕೊಂಡಿದ್ದಾರೆ. ಈ ಹಾಡಿನ ಬಳಿಕ ಕುತೂಹಲ ಹೆಚ್ಚುತ್ತದೆ.
  4. ರಕ್ಕಸಪುರದೋಳ್ ಸಿನಿಮಾದ ಫಸ್ಟ್ ಹಾಫ್‌ನಲ್ಲಿ ಹಾರರ್ ಎಲಿಮೆಂಟ್ ಕೂಡ ಇದೆ. ಕೊಳ್ಳಿ ದೆವ್ವದ ಕಥೆ ಹೇಳಲಾಗಿದೆ.
  5. ಸರಣಿ ಕೊಲೆ ನಡೆಯುತ್ತದೆ. ಸೀರಿಯಲ್ ಕಿಲ್ಲರ್ ಯಾರು ಎಂಬ ಕುತೂಹಲ‌ ಪ್ರತಿ ಹಂತದಲ್ಲೂ ಹೆಚ್ಚುತ್ತಾ ಸಾಗುತ್ತದೆ
  6. ಈ ಸಿನಿಮಾದ ಮೊದಲಾರ್ಧದಲ್ಲೇ ಸಾಕಷ್ಟು ಟ್ವಿಸ್ಟ್‌ಗಳಿವೆ. ಕೊಲೆ ಮಾಡಿದ್ದು ಮನುಷ್ಯನಾ ಅಥವಾ ದೆವ್ವನಾ ಎಂಬ ಕೌತುಕ ಮೂಡುತ್ತೆ.
  7. ಸಖತ್ ಥ್ರಿಲ್ಲಿಂಗ್ ಕಥೆ ಆದ್ದರಿಂದ ಈ ಸಿನಿಮಾದ ಮೊದಲಾರ್ಧ ಪಟಪಟನೆ ಸಾಗುತ್ತದೆ. ಇಂಟರ್‌ವಲ್ ವೇಳೆಗೆ ಮಹತ್ವದ ಟ್ವಿಸ್ಟ್.
  8. ಹಲವು ಪಾತ್ರದ ಮೇಲೆ ಕೊಲೆಯ ಅನುಮಾನ ಮೂಡುತ್ತದೆ. ಕೊಲೆಗಾರ ಸಿಕ್ಕೇ ಬಿಟ್ಟ ಎಂಬಷ್ಟರಲ್ಲಿ ಹೊಸ ಟ್ವಿಸ್ಟ್ ಬರುತ್ತದೆ.
  9. ರಾಜ್ ಬಿ. ಶೆಟ್ಟಿ ಅವರಿಗೆ ಇದೊಂದು ಡಿಫರೆಂಟ್ ಸಿನಿಮಾ. ಅವರ ಆಭಿಮಾನಿಗಳಿಗೆ ಇಷ್ಟ ಆಗುವ ರೀತಿಯಲ್ಲಿ ಮೂಡಿಬಂದಿದೆ.
  10. ಮೂಢನಂಬಿಕೆ ವರ್ಸಸ್ ವಿಜ್ಞಾನ ಎಂಬ ಕಾನ್ಸೆಪ್ಟ್ ಮೇಲೆ ರಕ್ಕಸಪುರದೋಳ್ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ?
ಬಲಗೈಯಿಂದಲೇ ಆಶೀರ್ವಾದ ಮಾಡುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಇಂದು ಈ ರಾಶಿಯವರ ಹಳೆಯ ಹೂಡಿಕೆಯಿಂದ ಲಾಭ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಮುಂದಿನ 30 ದಿನಗಳಲ್ಲಿ 56,432 ಹುದ್ದೆ ಭರ್ತಿಗೆ ಅನುಮೋದನೆ
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಯುವಕನ ಶವ ತಂದು ಹೆದ್ದಾರಿಯಲ್ಲಿ ಹಾಕಿದ್ದ ಕೇಸ್: ಕೊಲೆ ರಹಸ್ಯ ಬಿಚ್ಚಿಟ್ಟ SP
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
ಅಧಿಕಾರ ಹಂಚಿಕೆ ತಿಕ್ಕಾಟ ಮಧ್ಯೆ ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಪ್ರತ್ಯಕ್ಷ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
9 ರೂ 34 ಪೈಸೆ ಸಾಲಕ್ಕಾಗಿ ಬೆನ್ನುಬಿದ್ದ ಬ್ಯಾಂಕ್​​ಗೆ ಚಳಿ ಬಿಡಿಸಿದ ಗ್ರಾಹಕ
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ರೈಲು ಹತ್ತುವಾಗ ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್​ಸ್ಟೆಬಲ್
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ
ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಕೋಡಿಮಠದ ಸ್ವಾಮೀಜಿ ಪ್ರತಿಕ್ರಿಯೆ