AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakkasapuradhol First Half Review: ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಫಸ್ಟ್ ಹಾಫ್ ಹೇಗಿದೆ?

ಟ್ರೇಲರ್ ಮೂಲಕ ಗಮನ ಸೆಳೆದ ‘ರಕ್ಕಸಪುರದೋಳ್’ ಸಿನಿಮಾ ಈಗ ತೆರೆಕಂಡಿದೆ. ಕೌತುಕಭರಿತ ಕಥೆ ಈ ಸಿನಿಮಾದಲ್ಲಿ ಇದೆ. ಈ ಚಿತ್ರದ ಶೀರ್ಷಿಕೆಯೇ ಬಹಳ ಇಂಟರೆಸ್ಟಿಂಗ್ ಆಗಿದೆ. ರಾಜ್ ಬಿ. ಶೆಟ್ಟಿ ಅವರ ಅಭಿಮಾನಿಗಳು ಈ ಸಿನಿಮಾ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಚಿತ್ರದ ಫಸ್ಟ್ ಹಾಫ್ ವಿಮರ್ಶೆ ಇಲ್ಲಿದೆ.

Rakkasapuradhol First Half Review: ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಫಸ್ಟ್ ಹಾಫ್ ಹೇಗಿದೆ?
Raj B Shetty
ಮದನ್​ ಕುಮಾರ್​
| Edited By: |

Updated on: Feb 06, 2026 | 11:44 AM

Share

ರಾಜ್ ಬಿ. ಶೆಟ್ಟಿ (Raj B Shetty) ಅವರ ಸಿನಿಮಾ ಎಂದರೆ ಖಂಡಿತವಾಗಿಯೂ ಏನಾದರೂ ವಿಶೇಷತೆ ಇರುತ್ತದೆ ಎಂಬ ಭರವಸೆ ಅಭಿಮಾನಿಗಳಿಗೆ ಇದೆ. ಅವರು ನಟಿಸಿದ ‘ರಕ್ಕಸಪುರದೋಳ್’ ಸಿನಿಮಾ ಇಂದು (ಫೆಬ್ರವರಿ 6) ಬಿಡುಗಡೆ ಆಗಿದೆ. ರವಿ ಸಾರಂಗ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರವಿ ವರ್ಮಾ ಅವರು ನಿರ್ಮಾಣ ಮಾಡಿದ್ದಾರೆ. ಟ್ರೇಲರ್ ಮೂಲಕ ‘ರಕ್ಕಸಪುರದೋಳ್’ (Rakkasapuradhol) ಸಿನಿಮಾ ಬಹಳ ನಿರೀಕ್ಷೆ ಮೂಡಿಸಿತ್ತು. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ರಾಜ್ ಬಿ. ಶೆಟ್ಟಿ ಅವರು ಕಾಣಿಸಿಕೊಂಡಿದ್ದಾರೆ. ಒಂದು ಮರ್ಡರ್ ಮಿಸ್ಟರಿ ಕಥೆ ಈ ಸಿನಿಮಾದಲ್ಲಿ ಇದೆ. ‘ರಕ್ಕಸಪುರದೋಳ್’ ಚಿತ್ರದ ಮೊದಲಾರ್ಧದಲ್ಲಿ ಏನೆಲ್ಲ ಇದೆ? ಅದಕ್ಕೆ ಉತ್ತರ ಇಲ್ಲಿದೆ..

  1. ಸಸ್ಪೆನ್ಸ್ ಮೂಲಕವೇ ರಕ್ಕಸಪುರದೋಳ್ ಸಿನಿಮಾದ‌ ಕಥೆ ಶುರು ಆಗುತ್ತದೆ. ಜೊತೆಗೆ ಕಾಮಿಡಿ ದೃಶ್ಯಗಳು ಕೂಡ ಇದೆ.
  2. ರಾಜ್ ಬಿ. ಶೆಟ್ಟಿ ಅವರು ಪೊಲೀಸ್ ಪಾತ್ರ ಮಾಡಿದ್ದಾರೆ. ಪೊಲೀಸ್ ಆದರೂ ಆ ಪಾತ್ರ ಬಹಳ ಡಿಫರೆಂಟ್ ಆಗಿದೆ.
  3. ಸಿದ್ದಯ್ಯ ಸ್ವಾಮಿ ಹಾಡಿನಲ್ಲಿ ಅರ್ಜುನ್ ಜನ್ಯ ಅವರು ಕಾಣಿಸಿಕೊಂಡಿದ್ದಾರೆ. ಈ ಹಾಡಿನ ಬಳಿಕ ಕುತೂಹಲ ಹೆಚ್ಚುತ್ತದೆ.
  4. ರಕ್ಕಸಪುರದೋಳ್ ಸಿನಿಮಾದ ಫಸ್ಟ್ ಹಾಫ್‌ನಲ್ಲಿ ಹಾರರ್ ಎಲಿಮೆಂಟ್ ಕೂಡ ಇದೆ. ಕೊಳ್ಳಿ ದೆವ್ವದ ಕಥೆ ಹೇಳಲಾಗಿದೆ.
  5. ಸರಣಿ ಕೊಲೆ ನಡೆಯುತ್ತದೆ. ಸೀರಿಯಲ್ ಕಿಲ್ಲರ್ ಯಾರು ಎಂಬ ಕುತೂಹಲ‌ ಪ್ರತಿ ಹಂತದಲ್ಲೂ ಹೆಚ್ಚುತ್ತಾ ಸಾಗುತ್ತದೆ
  6. ಈ ಸಿನಿಮಾದ ಮೊದಲಾರ್ಧದಲ್ಲೇ ಸಾಕಷ್ಟು ಟ್ವಿಸ್ಟ್‌ಗಳಿವೆ. ಕೊಲೆ ಮಾಡಿದ್ದು ಮನುಷ್ಯನಾ ಅಥವಾ ದೆವ್ವನಾ ಎಂಬ ಕೌತುಕ ಮೂಡುತ್ತೆ.
  7. ಸಖತ್ ಥ್ರಿಲ್ಲಿಂಗ್ ಕಥೆ ಆದ್ದರಿಂದ ಈ ಸಿನಿಮಾದ ಮೊದಲಾರ್ಧ ಪಟಪಟನೆ ಸಾಗುತ್ತದೆ. ಇಂಟರ್‌ವಲ್ ವೇಳೆಗೆ ಮಹತ್ವದ ಟ್ವಿಸ್ಟ್.
  8. ಹಲವು ಪಾತ್ರದ ಮೇಲೆ ಕೊಲೆಯ ಅನುಮಾನ ಮೂಡುತ್ತದೆ. ಕೊಲೆಗಾರ ಸಿಕ್ಕೇ ಬಿಟ್ಟ ಎಂಬಷ್ಟರಲ್ಲಿ ಹೊಸ ಟ್ವಿಸ್ಟ್ ಬರುತ್ತದೆ.
  9. ರಾಜ್ ಬಿ. ಶೆಟ್ಟಿ ಅವರಿಗೆ ಇದೊಂದು ಡಿಫರೆಂಟ್ ಸಿನಿಮಾ. ಅವರ ಆಭಿಮಾನಿಗಳಿಗೆ ಇಷ್ಟ ಆಗುವ ರೀತಿಯಲ್ಲಿ ಮೂಡಿಬಂದಿದೆ.
  10. ಮೂಢನಂಬಿಕೆ ವರ್ಸಸ್ ವಿಜ್ಞಾನ ಎಂಬ ಕಾನ್ಸೆಪ್ಟ್ ಮೇಲೆ ರಕ್ಕಸಪುರದೋಳ್ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ