AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷ್ ಬರ್ತ್​ಡೇಗೆ ಬಂತು ‘ಬರ್ಮ’ ಸಿನಿಮಾ ಹೊಸ ಪೋಸ್ಟರ್​; ಎಲ್ಲಾ ರಕ್ತಸಿಕ್ತ

‘ಬರ್ಮ’ ಹೊಸ ಪೋಸ್ಟರ್ ಗಮನ ಸೆಳೆಯುತ್ತಿದೆ. ರಕ್ಷ್ ಅವರ ಕೈಯಲ್ಲಿ ಕೊಡಲಿ ಇದೆ. ರಕ್ತಸಿಕ್ತ ಅವತಾರದಲ್ಲಿರುವ ಅವರು, ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ‘ಬರ್ಮ’ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ ಎಂದು ತಂಡ ಹೇಳಿಕೊಂಡಿದೆ.

ರಕ್ಷ್ ಬರ್ತ್​ಡೇಗೆ ಬಂತು ‘ಬರ್ಮ’ ಸಿನಿಮಾ ಹೊಸ ಪೋಸ್ಟರ್​; ಎಲ್ಲಾ ರಕ್ತಸಿಕ್ತ
ಬರ್ಮ
ರಾಜೇಶ್ ದುಗ್ಗುಮನೆ
|

Updated on:Jan 08, 2024 | 2:27 PM

Share

‘ಗಟ್ಟಿಮೇಳ’ ಧಾರಾವಾಹಿ (Gattimela Serial) ಮೂಲಕ ಜನಪ್ರಿಯತೆ ಹೆಚ್ಚಿಸಿಕೊಂಡವರು ರಕ್ಷ್ ರಾಮ್. ಅವರಿಗೆ ಇಂದು (ಜನವರಿ 8) ಜನ್ಮದಿನದ ಸಂಭ್ರಮ. ಸಾಮಾನ್ಯವಾಗಿ ಹೀರೋಗಳ ಜನ್ಮದಿನದಂದು ಅವರು ನಟಿಸುತ್ತಿರುವ ಸಿನಿಮಾ ಕಡೆಯಿಂದ ಸರ್​ಪ್ರೈಸ್ ಸಿಗುತ್ತದೆ. ಅದೇ ರೀತಿ ರಕ್ಷ್ ಅವರ ಮುಂದಿನ ಸಿನಿಮಾ ‘ಬರ್ಮ’ ಚಿತ್ರದ ಹೊಸ ಲುಕ್ ರಿವೀಲ್ ಆಗಿದೆ. ರಕ್ತಸಿಕ್ತ ಅವತಾರದಲ್ಲಿ ರಕ್ಷ್ ಅವರು ಕಾಣಿಸಿಕೊಂಡಿದ್ದಾರೆ. ಈ ಪೋಸ್ಟರ್ ಅಭಿಮಾನಿಗಳಿಗೆ ಇಷ್ಟವಾಗಿದೆ.

‘ಬರ್ಮ’ ಹೊಸ ಪೋಸ್ಟರ್ ಗಮನ ಸೆಳೆಯುತ್ತಿದೆ. ರಕ್ಷ್ ಅವರ ಕೈಯಲ್ಲಿ ಕೊಡಲಿ ಇದೆ. ರಕ್ತಸಿಕ್ತ ಅವತಾರದಲ್ಲಿರುವ ಅವರು, ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ‘ಬರ್ಮ’ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ ಎಂದು ತಂಡ ಹೇಳಿಕೊಂಡಿದೆ. ಅದಕ್ಕೆ ಪೂರಕವಾಗಿ ಪೋಸ್ಟರ್ ಮೂಡಿ ಬಂದಿದೆ. ಈ ಚಿತ್ರದ ಮೂಲಕ ಕಿರುತೆರೆ ನಟ ರಕ್ಷ್ ಅವರು ಪ್ಯಾನ್ ಇಂಡಿಯಾ ಹೀರೋ ಆಗುತ್ತಿದ್ದಾರೆ. ಈ ಚಿತ್ರವನ್ನು ರಕ್ಷ್ ಅವರೇ ನಿರ್ಮಾಣ ಮಾಡುತ್ತಿದ್ದಾರೆ. ‘ಶ್ರೀ ಸಾಯಿ ಆಂಜನೇಯ’ ಬ್ಯಾನರ್ ಮೂಲಕ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಈ ಮೊದಲು ‘ಜೇಮ್ಸ್’, ‘ಭರ್ಜರಿ’ ರೀತಿಯ ಸಿನಿಮಾಗಳನ್ನು ನೀಡಿದ ಚೇತನ್​ ಕುಮಾರ್ ಅವರು ‘ಬರ್ಮ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವಿ. ಹರಿಕೃಷ್ಣ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಮೊದಲು ‘ಭರ್ಜರಿ’ ಹಾಗೂ ‘ಬಹದ್ದೂರ್’ ಸಿನಿಮಾಗಳಲ್ಲಿ ಚೇತನ್ ಕುಮಾರ್ ಹಾಗೂ ಹರಿಕೃಷ್ಣ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಇವರು ಮೂರನೇ ಬಾರಿಗೆ ಒಂದಾಗಿದ್ದಾರೆ. ‘ಜೇಮ್ಸ್​’ ಚಿತ್ರವನ್ನು ಹೊರತುಪಡಿಸಿ ಚೇತನ್ ಕುಮಾರ್ ನಿರ್ದೇಶನ ಮಾಡಿದ ‘ಬಹದ್ದೂರ್’, ‘ಭರ್ಜರಿ’ ಹಾಗೂ ‘ಭರಾಟೆ’ ಸಿನಿಮಾ ‘ಬ’ ಅಥವಾ ‘ಭ’ ಅಕ್ಷರದಿಂದ ಪ್ರಾರಂಭ ಆಗಿದ್ದವು. ‘ಬರ್ಮ’ದಲ್ಲೂ ಅದು ಮುಂದುವರಿದಿದೆ.

View this post on Instagram

A post shared by Rakksh (@rakkshofficial)

ಇದನ್ನೂ ಓದಿ: ‘ಬರ್ಮ’ನಲ್ಲಿ ಬಾಲಿವುಡ್ ನಟ: ಮತ್ತೆ ಕನ್ನಡಕ್ಕೆ ಬಂದ ನಟ ಶಾವರ್ ಅಲಿ

‘ಬರ್ಮ’ ಸಿನಿಮಾದಲ್ಲಿ ಶಾವರ್ ಅಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ದೊಡ್ಡ ತಾರಾ ಬಳಗ ಇದೆ. ‘ಬರ್ಮ’ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿಯೇ ರಿಲೀಸ್ ಆಗುತ್ತಿದೆ ಅನ್ನೋದು ವಿಶೇಷ. ರಕ್ಷ್ ಅವರು ನಟಿಸುತ್ತಿದ್ದ ‘ಗಟ್ಟಿಮೇಳ’ ಧಾರಾವಾಹಿ ಇತ್ತೀಚೆಗೆ ಪೂರ್ಣಗೊಂಡಿದೆ. ಈಗ ಅವರು ಹಿರಿತೆರೆಯಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದಾರೆ. ಅವರನ್ನು ದೊಡ್ಡ ಪರದೆಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ. ‘ಬರ್ಮ’ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:26 pm, Mon, 8 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು