AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakshak Bullet: ಹೀರೋ ಆಗೋಕೆ ರೆಡಿ ಆದ ಮರಿ ಬುಲೆಟ್; ಹೊಸ ಸಿನಿಮಾ ಘೋಷಿಸಿದ ರಕ್ಷಕ್

ಟೈಟಲ್​ನಲ್ಲಿ ಲಾಂಗ್ ಕಾಣಿಸಿದೆ. ಹೀಗಾಗಿ, ಇದೊಂದು ರೌಡಿಸಂ ಕಥೆ ಇರಬಹುದು ಎಂದು ಅವರ ಫ್ಯಾನ್ಸ್ ಊಹಿಸುತ್ತಿದ್ದಾರೆ. ಗಣಪತಿ ವಿಸರ್ಜನೆಯ ದೃಶ್ಯವೂ ಇದೆ. ಈ ಎಲ್ಲಾ ಕಾರಣದಿಂದ ಸಿನಿಮಾದ ಪೋಸ್ಟರ್ ಕುತೂಹಲ ಮೂಡಿಸಿದೆ.

Rakshak Bullet: ಹೀರೋ ಆಗೋಕೆ ರೆಡಿ ಆದ ಮರಿ ಬುಲೆಟ್; ಹೊಸ ಸಿನಿಮಾ ಘೋಷಿಸಿದ ರಕ್ಷಕ್
ರಕ್ಷಕ್
ರಾಜೇಶ್ ದುಗ್ಗುಮನೆ
|

Updated on: Apr 03, 2024 | 7:20 AM

Share

ರಕ್ಷಕ್ ಬುಲೆಟ್ (Rakshak Bullet)​ ಅವರು ಈ ಮೊದಲು ‘ಗುರು ಶಿಷ್ಯರು’ ಸಿನಿಮಾದಲ್ಲಿ ಒಂದು ಪಾತ್ರ ಮಾಡಿದ್ದರು. ಈಗ ಅವರು ಹೀರೋ ಆಗೋಕೆ ರೆಡಿ ಆಗಿದ್ದಾರೆ. ಬಿಗ್ ಬಾಸ್​ನಲ್ಲಿ ಒಂದು ತಿಂಗಳು ಇದ್ದು ಬಂದ ಬಳಿಕ ಸಾಕಷ್ಟು ಸಂದರ್ಶನಗಳಲ್ಲಿ ಅವರು ಮಾತನಾಡಿದ್ದರು. ವಿವಾದಗಳನ್ನು ಕೂಡ ಮಾಡಿಕೊಂಡಿದ್ದರು. ಈಗ ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕೆ ಸದ್ಯ   ‘RB 01’ ಎಂದು ಟೈಟಲ್ ಇಡಲಾಗಿದೆ. ಶೀಘ್ರವೇ ಸಿನಿಮಾದ ಶೀರ್ಷಿಕೆ ಹಾಗೂ ಟೀಸರ್ ಅನಾವರಣ ಮಾಡುವುದಾಗಿ ರಕ್ಷಕ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಟೈಟಲ್​ನಲ್ಲಿ ಲಾಂಗ್ ಕಾಣಿಸಿದೆ. ಹೀಗಾಗಿ, ಇದೊಂದು ರೌಡಿಸಂ ಕಥೆ ಇರಬಹುದು ಎಂದು ಅವರ ಫ್ಯಾನ್ಸ್ ಊಹಿಸುತ್ತಿದ್ದಾರೆ. ಗಣಪತಿ ವಿಸರ್ಜನೆಯ ದೃಶ್ಯವೂ ಇದೆ. ಈ ಎಲ್ಲಾ ಕಾರಣದಿಂದ ಸಿನಿಮಾದ ಪೋಸ್ಟರ್ ಕುತೂಹಲ ಮೂಡಿಸಿದೆ. ‘ಮಚ್ಚಾ ಏರಿಯಾದಲ್ಲಿ ಕಣ್ಮುಂದೆ ಬೇಜ್ಜಾನ್ ಗಾಡಿಗಳು ಸೌಂಡು ಮಾಡುತ್ತವೆ. ಆದರೆ ಸೌಂಡ್ ಕೇಳ್ತಿದ್ದ ಹಾಗೆ ಇದೇ ಗಾಡಿ ಅಂತ ಹೇಳೋಕೆ ಆಗೋದು ಒಂದನ್ನೇ ಅದುವೇ ಬುಲೆಟ್. ಇನ್ಮುಂದೆ ನಂದೇ ರೌಂಡು, ನಂದೇ ಸೌಂಡು’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಸಂದರ್ಶನಗಳಲ್ಲಿ ಆಡಿದ ಮಾತಿನಿಂದ ಹಿಗ್ಗಾ ಮುಗ್ಗಾ ಟ್ರೋಲ್ ಆದ ಬುಲೆಟ್ ಪ್ರಕಾಶ್ ಮಗ ರಕ್ಷಕ್

ಪೋಸ್ಟರ್ ಹಂಚಿಕೊಂಡು ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ ರಕ್ಷಕ್. ‘ಎಲ್ಲಾ ‌ನನ್ನ ಆತ್ಮೀಯರೇ, ಇಂದು‌ ನನ್ನ ಪೂಜ್ಯ ತಂದೆ ದಿವಂಗತ ಬುಲೆಟ್ ಪ್ರಕಾಶ್ ಅವರ 47ನೇ ಜನ್ಮದಿನ. ಇಂದಿನ ವಿಶೇಷವೇನೆಂದರೆ, ನಾನು ನಾಯಕ ನಟನಾಗಿ ನಟಿಸುತ್ತಿರುವ ನನ್ನ ಚೊಚ್ಚಲ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುತ್ತಿದ್ದೇನೆ. ಇದು ನಿಜಕ್ಕೂ ನನಗೆ ಸಂತಸ ತಂದಿದೆ. ನನ್ನ ತಂದೆಯ ಆಶೀರ್ವಾದದೊಂದಿಗೆ ನಿಮ್ಮೆಲ್ಲರ ಆಶೀರ್ವಾದ ಕೂಡ ಸದಾ ನನ್ನ ಮೇಲಿರಲಿ ಎಂದು ಬಯಸುತ್ತೇನೆ. ನನಗೂ ಹಾಗೂ ನನ್ನ ಇಡೀ ಚಿತ್ರತಂಡಕ್ಕು ಹರಸಿ ಹಾರೈಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

ರಕ್ಷಕ್ ಬುಲೆಟ್ ಪೋಸ್ಟ್

ಕ್ರಿಶ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಶ್ರೀಹರಿ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಶ್ರೀಧರ್ ಕಶ್ಯಪ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಉಳಿದ ಪಾತ್ರವರ್ಗದ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ