AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakshak Bullet: ಹೀರೋ ಆಗೋಕೆ ರೆಡಿ ಆದ ಮರಿ ಬುಲೆಟ್; ಹೊಸ ಸಿನಿಮಾ ಘೋಷಿಸಿದ ರಕ್ಷಕ್

ಟೈಟಲ್​ನಲ್ಲಿ ಲಾಂಗ್ ಕಾಣಿಸಿದೆ. ಹೀಗಾಗಿ, ಇದೊಂದು ರೌಡಿಸಂ ಕಥೆ ಇರಬಹುದು ಎಂದು ಅವರ ಫ್ಯಾನ್ಸ್ ಊಹಿಸುತ್ತಿದ್ದಾರೆ. ಗಣಪತಿ ವಿಸರ್ಜನೆಯ ದೃಶ್ಯವೂ ಇದೆ. ಈ ಎಲ್ಲಾ ಕಾರಣದಿಂದ ಸಿನಿಮಾದ ಪೋಸ್ಟರ್ ಕುತೂಹಲ ಮೂಡಿಸಿದೆ.

Rakshak Bullet: ಹೀರೋ ಆಗೋಕೆ ರೆಡಿ ಆದ ಮರಿ ಬುಲೆಟ್; ಹೊಸ ಸಿನಿಮಾ ಘೋಷಿಸಿದ ರಕ್ಷಕ್
ರಕ್ಷಕ್
ರಾಜೇಶ್ ದುಗ್ಗುಮನೆ
|

Updated on: Apr 03, 2024 | 7:20 AM

Share

ರಕ್ಷಕ್ ಬುಲೆಟ್ (Rakshak Bullet)​ ಅವರು ಈ ಮೊದಲು ‘ಗುರು ಶಿಷ್ಯರು’ ಸಿನಿಮಾದಲ್ಲಿ ಒಂದು ಪಾತ್ರ ಮಾಡಿದ್ದರು. ಈಗ ಅವರು ಹೀರೋ ಆಗೋಕೆ ರೆಡಿ ಆಗಿದ್ದಾರೆ. ಬಿಗ್ ಬಾಸ್​ನಲ್ಲಿ ಒಂದು ತಿಂಗಳು ಇದ್ದು ಬಂದ ಬಳಿಕ ಸಾಕಷ್ಟು ಸಂದರ್ಶನಗಳಲ್ಲಿ ಅವರು ಮಾತನಾಡಿದ್ದರು. ವಿವಾದಗಳನ್ನು ಕೂಡ ಮಾಡಿಕೊಂಡಿದ್ದರು. ಈಗ ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕೆ ಸದ್ಯ   ‘RB 01’ ಎಂದು ಟೈಟಲ್ ಇಡಲಾಗಿದೆ. ಶೀಘ್ರವೇ ಸಿನಿಮಾದ ಶೀರ್ಷಿಕೆ ಹಾಗೂ ಟೀಸರ್ ಅನಾವರಣ ಮಾಡುವುದಾಗಿ ರಕ್ಷಕ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಟೈಟಲ್​ನಲ್ಲಿ ಲಾಂಗ್ ಕಾಣಿಸಿದೆ. ಹೀಗಾಗಿ, ಇದೊಂದು ರೌಡಿಸಂ ಕಥೆ ಇರಬಹುದು ಎಂದು ಅವರ ಫ್ಯಾನ್ಸ್ ಊಹಿಸುತ್ತಿದ್ದಾರೆ. ಗಣಪತಿ ವಿಸರ್ಜನೆಯ ದೃಶ್ಯವೂ ಇದೆ. ಈ ಎಲ್ಲಾ ಕಾರಣದಿಂದ ಸಿನಿಮಾದ ಪೋಸ್ಟರ್ ಕುತೂಹಲ ಮೂಡಿಸಿದೆ. ‘ಮಚ್ಚಾ ಏರಿಯಾದಲ್ಲಿ ಕಣ್ಮುಂದೆ ಬೇಜ್ಜಾನ್ ಗಾಡಿಗಳು ಸೌಂಡು ಮಾಡುತ್ತವೆ. ಆದರೆ ಸೌಂಡ್ ಕೇಳ್ತಿದ್ದ ಹಾಗೆ ಇದೇ ಗಾಡಿ ಅಂತ ಹೇಳೋಕೆ ಆಗೋದು ಒಂದನ್ನೇ ಅದುವೇ ಬುಲೆಟ್. ಇನ್ಮುಂದೆ ನಂದೇ ರೌಂಡು, ನಂದೇ ಸೌಂಡು’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಸಂದರ್ಶನಗಳಲ್ಲಿ ಆಡಿದ ಮಾತಿನಿಂದ ಹಿಗ್ಗಾ ಮುಗ್ಗಾ ಟ್ರೋಲ್ ಆದ ಬುಲೆಟ್ ಪ್ರಕಾಶ್ ಮಗ ರಕ್ಷಕ್

ಪೋಸ್ಟರ್ ಹಂಚಿಕೊಂಡು ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ ರಕ್ಷಕ್. ‘ಎಲ್ಲಾ ‌ನನ್ನ ಆತ್ಮೀಯರೇ, ಇಂದು‌ ನನ್ನ ಪೂಜ್ಯ ತಂದೆ ದಿವಂಗತ ಬುಲೆಟ್ ಪ್ರಕಾಶ್ ಅವರ 47ನೇ ಜನ್ಮದಿನ. ಇಂದಿನ ವಿಶೇಷವೇನೆಂದರೆ, ನಾನು ನಾಯಕ ನಟನಾಗಿ ನಟಿಸುತ್ತಿರುವ ನನ್ನ ಚೊಚ್ಚಲ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುತ್ತಿದ್ದೇನೆ. ಇದು ನಿಜಕ್ಕೂ ನನಗೆ ಸಂತಸ ತಂದಿದೆ. ನನ್ನ ತಂದೆಯ ಆಶೀರ್ವಾದದೊಂದಿಗೆ ನಿಮ್ಮೆಲ್ಲರ ಆಶೀರ್ವಾದ ಕೂಡ ಸದಾ ನನ್ನ ಮೇಲಿರಲಿ ಎಂದು ಬಯಸುತ್ತೇನೆ. ನನಗೂ ಹಾಗೂ ನನ್ನ ಇಡೀ ಚಿತ್ರತಂಡಕ್ಕು ಹರಸಿ ಹಾರೈಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

ರಕ್ಷಕ್ ಬುಲೆಟ್ ಪೋಸ್ಟ್

ಕ್ರಿಶ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಶ್ರೀಹರಿ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಶ್ರೀಧರ್ ಕಶ್ಯಪ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಉಳಿದ ಪಾತ್ರವರ್ಗದ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ