AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಿಕ್​ ಪಾರ್ಟಿ ರೀತಿ ಡಿಸೆಂಬರ್​ನಲ್ಲಿ ರಕ್ಷಿತ್​ ಶೆಟ್ಟಿ ಅದೃಷ್ಟ ಪರೀಕ್ಷೆ; ‘777 ಚಾರ್ಲಿ’ ಟಾರ್ಚರ್​ಗೆ ಧರ್ಮ ಸುಸ್ತೋ ಸುಸ್ತು​

Rakshit Shetty | 777 Charlie: ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈ ಎಲ್ಲ ಭಾಷೆಗಳಲ್ಲೂ ‘ಟಾರ್ಚರ್​ ಸಾಂಗ್​’ ರಿಲೀಸ್​ ಆಗಿದೆ.

ಕಿರಿಕ್​ ಪಾರ್ಟಿ ರೀತಿ ಡಿಸೆಂಬರ್​ನಲ್ಲಿ ರಕ್ಷಿತ್​ ಶೆಟ್ಟಿ ಅದೃಷ್ಟ ಪರೀಕ್ಷೆ; ‘777 ಚಾರ್ಲಿ’ ಟಾರ್ಚರ್​ಗೆ ಧರ್ಮ ಸುಸ್ತೋ ಸುಸ್ತು​
777 ಚಾರ್ಲಿ ಚಿತ್ರದಲ್ಲಿ ರಕ್ಷಿತ್​ ಶೆಟ್ಟಿ
TV9 Web
| Edited By: |

Updated on: Sep 09, 2021 | 12:46 PM

Share

‘ಸಿಂಪಲ್​​ ಸ್ಟಾರ್​’ ರಕ್ಷಿತ್​ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾ ಮೇಲೆ ಅವರ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಈ ಮೊದಲೇ ಬಿಡುಗಡೆ ಆಗಿದ್ದ ಟೀಸರ್​ ಮತ್ತು ಪೋಸ್ಟರ್​ಗಳಿಂದ ಅಭಿಮಾನಿಗಳಿಗೆ ಕೌತುಕ ಹೆಚ್ಚಿತ್ತು. ಅದನ್ನು ದುಪ್ಪಟ್ಟು ಮಾಡುವ ರೀತಿಯಲ್ಲಿ ಈಗ ಮೊದಲ ಸಾಂಗ್​ ಬಿಡುಗಡೆ ಆಗಿದೆ. ‘ಟಾರ್ಚರ್​..’ ಹಾಡು ಸೆ.9ರಂದು ಬಿಡುಗಡೆ ಆಗಲಿದೆ ಎಂದು ಹೇಳುವ ಮೂಲಕ ಚಿತ್ರತಂಡ ನಿರೀಕ್ಷೆ ಹುಟ್ಟುಹಾಕಿತ್ತು. ಇದೀಗ ಸಾಂಗ್​ ರಿಲೀಸ್​ ಆಗಿದ್ದು, ಶ್ವಾನಪ್ರಿಯರಿಂದ ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ.

ಈಗಾಗಲೇ ಗೊತ್ತಾಗಿರುವಂತೆ ಇದು ನಾಯಿ ಮತ್ತು ಮನುಷ್ಯನ ನಡುವಿನ ಬಾಂಧವ್ಯದ ಕಥೆ ಹೇಳುವ ಸಿನಿಮಾ. ಆದರೆ ಈ ಸಾಂಗ್​ನಲ್ಲಿ ಕಥಾನಾಯಕ ಧರ್ಮ ಮತ್ತು ಆತನ ನಾಯಿ ಚಾರ್ಲಿ ನಡುವಿನ ಕಿತ್ತಾಟವೇ ಹೈಲೈಟ್​ ಆಗಿದೆ. ಚಾರ್ಲಿ ಕೊಟ್ಟ ಟಾರ್ಚರ್​ಗೆ ಧರ್ಮ ಹೈರಾಣಾಗಿ ಹೋಗಿದ್ದಾನೆ. ಹಾಗಾದರೆ ಸಿನಿಮಾದ ಕಥೆ ಮುಂದೇನಾಗುತ್ತದೆ ಎಂಬ ಕೌತುಕ ಸಿನಿಪ್ರಿಯರಲ್ಲಿ ಮೂಡುವಂತಾಗಿದೆ. ಈ ಚಿತ್ರಕ್ಕೆ ಕಿರಣ್​ರಾಜ್​ ನಿರ್ದೇಶನ ಮಾಡಿದ್ದು, ನೋಬಿನ್​ ಪೌಲ್​ ಸಂಗೀತ ನಿರ್ದೇಶನ ಮಾಡಿದ್ದಾರೆ.

ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈ ಎಲ್ಲ ಭಾಷೆಗಳಲ್ಲೂ ‘ಟಾರ್ಚರ್​ ಸಾಂಗ್​’ ರಿಲೀಸ್​ ಆಗಿದೆ. ಕನ್ನಡ ವರ್ಷನ್​ಗೆ ವಿಜಯ್​ ಪ್ರಕಾಶ್​ ಧ್ವನಿ ನೀಡಿದ್ದಾರೆ. ನಾಗಾರ್ಜುನ್​ ಶರ್ಮಾ ಸಾಹಿತ್ಯ ಬರೆದಿದ್ದಾರೆ. ಈ ಹಾಡಿನ ಜೊತೆಗೆ ಇನ್ನೊಂದು ಬ್ರೇಕಿಂಗ್​ ನ್ಯೂಸ್​ ನೀಡಿದೆ ಚಿತ್ರತಂಡ. ‘777 ಚಾರ್ಲಿ’ ಯಾವಾಗ ರಿಲೀಸ್​ ಆಗಲಿದೆ ಎಂಬ ಪ್ರಶ್ನೆಗೂ ಉತ್ತರ ಸಿಕ್ಕಿದೆ. ಇದೇ ವರ್ಷ ಡಿ.31ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ರಕ್ಷಿತ್ ಶೆಟ್ಟಿ ವೃತ್ತಿಜೀವನಕ್ಕೆ ಬಹುದೊಡ್ಡ ಬ್ರೇಕ್ ​ನೀಡಿದ ಸಿನಿಮಾ ಕಿರಿಕ್​ ಪಾರ್ಟಿ. ಆ ಚಿತ್ರ ಕೂಡ ಡಿಸೆಂಬರ್​ ಅಂತ್ಯಕ್ಕೆ (ಡಿ.30) ತೆರೆಕಂಡು ಧೂಳೆಬ್ಬಿಸಿತ್ತು. ಈಗ ಅದೇ ಸಮಯಕ್ಕೆ ‘777 ಚಾರ್ಲಿ’ ಮೂಲಕ ರಕ್ಷಿತ್​ ಶೆಟ್ಟಿ ಅದೃಷ್ಟ ಪರೀಕ್ಷೆಗೆ ಮುಂದಾಗುತ್ತಿರುವುದು ವಿಶೇಷ.

ಇದನ್ನೂ ಓದಿ:

ಉಡುಪಿಯಲ್ಲಿ ರಕ್ಷಿತ್​ ಶೆಟ್ಟಿ ಹುಲಿಕುಣಿತ; ಲೋಬಾನ ಹಾಕುವ ಸಂಪ್ರದಾಯದಲ್ಲಿ ‘ಸಿಂಪಲ್ ಸ್ಟಾರ್’ ಭಾಗಿ

‘ನಾನಿರೋದೇ ಹೀಗೆ, ದಯವಿಟ್ಟು ಅರ್ಥ ಮಾಡಿಕೊಳ್ಳಿ’; ರಕ್ಷಿತ್ ಶೆಟ್ಟಿ ಮನವಿ

ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!