AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಿಕ್​ ಪಾರ್ಟಿ ರೀತಿ ಡಿಸೆಂಬರ್​ನಲ್ಲಿ ರಕ್ಷಿತ್​ ಶೆಟ್ಟಿ ಅದೃಷ್ಟ ಪರೀಕ್ಷೆ; ‘777 ಚಾರ್ಲಿ’ ಟಾರ್ಚರ್​ಗೆ ಧರ್ಮ ಸುಸ್ತೋ ಸುಸ್ತು​

Rakshit Shetty | 777 Charlie: ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈ ಎಲ್ಲ ಭಾಷೆಗಳಲ್ಲೂ ‘ಟಾರ್ಚರ್​ ಸಾಂಗ್​’ ರಿಲೀಸ್​ ಆಗಿದೆ.

ಕಿರಿಕ್​ ಪಾರ್ಟಿ ರೀತಿ ಡಿಸೆಂಬರ್​ನಲ್ಲಿ ರಕ್ಷಿತ್​ ಶೆಟ್ಟಿ ಅದೃಷ್ಟ ಪರೀಕ್ಷೆ; ‘777 ಚಾರ್ಲಿ’ ಟಾರ್ಚರ್​ಗೆ ಧರ್ಮ ಸುಸ್ತೋ ಸುಸ್ತು​
777 ಚಾರ್ಲಿ ಚಿತ್ರದಲ್ಲಿ ರಕ್ಷಿತ್​ ಶೆಟ್ಟಿ
TV9 Web
| Edited By: |

Updated on: Sep 09, 2021 | 12:46 PM

Share

‘ಸಿಂಪಲ್​​ ಸ್ಟಾರ್​’ ರಕ್ಷಿತ್​ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾ ಮೇಲೆ ಅವರ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಈ ಮೊದಲೇ ಬಿಡುಗಡೆ ಆಗಿದ್ದ ಟೀಸರ್​ ಮತ್ತು ಪೋಸ್ಟರ್​ಗಳಿಂದ ಅಭಿಮಾನಿಗಳಿಗೆ ಕೌತುಕ ಹೆಚ್ಚಿತ್ತು. ಅದನ್ನು ದುಪ್ಪಟ್ಟು ಮಾಡುವ ರೀತಿಯಲ್ಲಿ ಈಗ ಮೊದಲ ಸಾಂಗ್​ ಬಿಡುಗಡೆ ಆಗಿದೆ. ‘ಟಾರ್ಚರ್​..’ ಹಾಡು ಸೆ.9ರಂದು ಬಿಡುಗಡೆ ಆಗಲಿದೆ ಎಂದು ಹೇಳುವ ಮೂಲಕ ಚಿತ್ರತಂಡ ನಿರೀಕ್ಷೆ ಹುಟ್ಟುಹಾಕಿತ್ತು. ಇದೀಗ ಸಾಂಗ್​ ರಿಲೀಸ್​ ಆಗಿದ್ದು, ಶ್ವಾನಪ್ರಿಯರಿಂದ ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ.

ಈಗಾಗಲೇ ಗೊತ್ತಾಗಿರುವಂತೆ ಇದು ನಾಯಿ ಮತ್ತು ಮನುಷ್ಯನ ನಡುವಿನ ಬಾಂಧವ್ಯದ ಕಥೆ ಹೇಳುವ ಸಿನಿಮಾ. ಆದರೆ ಈ ಸಾಂಗ್​ನಲ್ಲಿ ಕಥಾನಾಯಕ ಧರ್ಮ ಮತ್ತು ಆತನ ನಾಯಿ ಚಾರ್ಲಿ ನಡುವಿನ ಕಿತ್ತಾಟವೇ ಹೈಲೈಟ್​ ಆಗಿದೆ. ಚಾರ್ಲಿ ಕೊಟ್ಟ ಟಾರ್ಚರ್​ಗೆ ಧರ್ಮ ಹೈರಾಣಾಗಿ ಹೋಗಿದ್ದಾನೆ. ಹಾಗಾದರೆ ಸಿನಿಮಾದ ಕಥೆ ಮುಂದೇನಾಗುತ್ತದೆ ಎಂಬ ಕೌತುಕ ಸಿನಿಪ್ರಿಯರಲ್ಲಿ ಮೂಡುವಂತಾಗಿದೆ. ಈ ಚಿತ್ರಕ್ಕೆ ಕಿರಣ್​ರಾಜ್​ ನಿರ್ದೇಶನ ಮಾಡಿದ್ದು, ನೋಬಿನ್​ ಪೌಲ್​ ಸಂಗೀತ ನಿರ್ದೇಶನ ಮಾಡಿದ್ದಾರೆ.

ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈ ಎಲ್ಲ ಭಾಷೆಗಳಲ್ಲೂ ‘ಟಾರ್ಚರ್​ ಸಾಂಗ್​’ ರಿಲೀಸ್​ ಆಗಿದೆ. ಕನ್ನಡ ವರ್ಷನ್​ಗೆ ವಿಜಯ್​ ಪ್ರಕಾಶ್​ ಧ್ವನಿ ನೀಡಿದ್ದಾರೆ. ನಾಗಾರ್ಜುನ್​ ಶರ್ಮಾ ಸಾಹಿತ್ಯ ಬರೆದಿದ್ದಾರೆ. ಈ ಹಾಡಿನ ಜೊತೆಗೆ ಇನ್ನೊಂದು ಬ್ರೇಕಿಂಗ್​ ನ್ಯೂಸ್​ ನೀಡಿದೆ ಚಿತ್ರತಂಡ. ‘777 ಚಾರ್ಲಿ’ ಯಾವಾಗ ರಿಲೀಸ್​ ಆಗಲಿದೆ ಎಂಬ ಪ್ರಶ್ನೆಗೂ ಉತ್ತರ ಸಿಕ್ಕಿದೆ. ಇದೇ ವರ್ಷ ಡಿ.31ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ರಕ್ಷಿತ್ ಶೆಟ್ಟಿ ವೃತ್ತಿಜೀವನಕ್ಕೆ ಬಹುದೊಡ್ಡ ಬ್ರೇಕ್ ​ನೀಡಿದ ಸಿನಿಮಾ ಕಿರಿಕ್​ ಪಾರ್ಟಿ. ಆ ಚಿತ್ರ ಕೂಡ ಡಿಸೆಂಬರ್​ ಅಂತ್ಯಕ್ಕೆ (ಡಿ.30) ತೆರೆಕಂಡು ಧೂಳೆಬ್ಬಿಸಿತ್ತು. ಈಗ ಅದೇ ಸಮಯಕ್ಕೆ ‘777 ಚಾರ್ಲಿ’ ಮೂಲಕ ರಕ್ಷಿತ್​ ಶೆಟ್ಟಿ ಅದೃಷ್ಟ ಪರೀಕ್ಷೆಗೆ ಮುಂದಾಗುತ್ತಿರುವುದು ವಿಶೇಷ.

ಇದನ್ನೂ ಓದಿ:

ಉಡುಪಿಯಲ್ಲಿ ರಕ್ಷಿತ್​ ಶೆಟ್ಟಿ ಹುಲಿಕುಣಿತ; ಲೋಬಾನ ಹಾಕುವ ಸಂಪ್ರದಾಯದಲ್ಲಿ ‘ಸಿಂಪಲ್ ಸ್ಟಾರ್’ ಭಾಗಿ

‘ನಾನಿರೋದೇ ಹೀಗೆ, ದಯವಿಟ್ಟು ಅರ್ಥ ಮಾಡಿಕೊಳ್ಳಿ’; ರಕ್ಷಿತ್ ಶೆಟ್ಟಿ ಮನವಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್