AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಿಕ್​ ಪಾರ್ಟಿ ರೀತಿ ಡಿಸೆಂಬರ್​ನಲ್ಲಿ ರಕ್ಷಿತ್​ ಶೆಟ್ಟಿ ಅದೃಷ್ಟ ಪರೀಕ್ಷೆ; ‘777 ಚಾರ್ಲಿ’ ಟಾರ್ಚರ್​ಗೆ ಧರ್ಮ ಸುಸ್ತೋ ಸುಸ್ತು​

Rakshit Shetty | 777 Charlie: ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈ ಎಲ್ಲ ಭಾಷೆಗಳಲ್ಲೂ ‘ಟಾರ್ಚರ್​ ಸಾಂಗ್​’ ರಿಲೀಸ್​ ಆಗಿದೆ.

ಕಿರಿಕ್​ ಪಾರ್ಟಿ ರೀತಿ ಡಿಸೆಂಬರ್​ನಲ್ಲಿ ರಕ್ಷಿತ್​ ಶೆಟ್ಟಿ ಅದೃಷ್ಟ ಪರೀಕ್ಷೆ; ‘777 ಚಾರ್ಲಿ’ ಟಾರ್ಚರ್​ಗೆ ಧರ್ಮ ಸುಸ್ತೋ ಸುಸ್ತು​
777 ಚಾರ್ಲಿ ಚಿತ್ರದಲ್ಲಿ ರಕ್ಷಿತ್​ ಶೆಟ್ಟಿ
TV9 Web
| Edited By: |

Updated on: Sep 09, 2021 | 12:46 PM

Share

‘ಸಿಂಪಲ್​​ ಸ್ಟಾರ್​’ ರಕ್ಷಿತ್​ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾ ಮೇಲೆ ಅವರ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಈ ಮೊದಲೇ ಬಿಡುಗಡೆ ಆಗಿದ್ದ ಟೀಸರ್​ ಮತ್ತು ಪೋಸ್ಟರ್​ಗಳಿಂದ ಅಭಿಮಾನಿಗಳಿಗೆ ಕೌತುಕ ಹೆಚ್ಚಿತ್ತು. ಅದನ್ನು ದುಪ್ಪಟ್ಟು ಮಾಡುವ ರೀತಿಯಲ್ಲಿ ಈಗ ಮೊದಲ ಸಾಂಗ್​ ಬಿಡುಗಡೆ ಆಗಿದೆ. ‘ಟಾರ್ಚರ್​..’ ಹಾಡು ಸೆ.9ರಂದು ಬಿಡುಗಡೆ ಆಗಲಿದೆ ಎಂದು ಹೇಳುವ ಮೂಲಕ ಚಿತ್ರತಂಡ ನಿರೀಕ್ಷೆ ಹುಟ್ಟುಹಾಕಿತ್ತು. ಇದೀಗ ಸಾಂಗ್​ ರಿಲೀಸ್​ ಆಗಿದ್ದು, ಶ್ವಾನಪ್ರಿಯರಿಂದ ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ.

ಈಗಾಗಲೇ ಗೊತ್ತಾಗಿರುವಂತೆ ಇದು ನಾಯಿ ಮತ್ತು ಮನುಷ್ಯನ ನಡುವಿನ ಬಾಂಧವ್ಯದ ಕಥೆ ಹೇಳುವ ಸಿನಿಮಾ. ಆದರೆ ಈ ಸಾಂಗ್​ನಲ್ಲಿ ಕಥಾನಾಯಕ ಧರ್ಮ ಮತ್ತು ಆತನ ನಾಯಿ ಚಾರ್ಲಿ ನಡುವಿನ ಕಿತ್ತಾಟವೇ ಹೈಲೈಟ್​ ಆಗಿದೆ. ಚಾರ್ಲಿ ಕೊಟ್ಟ ಟಾರ್ಚರ್​ಗೆ ಧರ್ಮ ಹೈರಾಣಾಗಿ ಹೋಗಿದ್ದಾನೆ. ಹಾಗಾದರೆ ಸಿನಿಮಾದ ಕಥೆ ಮುಂದೇನಾಗುತ್ತದೆ ಎಂಬ ಕೌತುಕ ಸಿನಿಪ್ರಿಯರಲ್ಲಿ ಮೂಡುವಂತಾಗಿದೆ. ಈ ಚಿತ್ರಕ್ಕೆ ಕಿರಣ್​ರಾಜ್​ ನಿರ್ದೇಶನ ಮಾಡಿದ್ದು, ನೋಬಿನ್​ ಪೌಲ್​ ಸಂಗೀತ ನಿರ್ದೇಶನ ಮಾಡಿದ್ದಾರೆ.

ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈ ಎಲ್ಲ ಭಾಷೆಗಳಲ್ಲೂ ‘ಟಾರ್ಚರ್​ ಸಾಂಗ್​’ ರಿಲೀಸ್​ ಆಗಿದೆ. ಕನ್ನಡ ವರ್ಷನ್​ಗೆ ವಿಜಯ್​ ಪ್ರಕಾಶ್​ ಧ್ವನಿ ನೀಡಿದ್ದಾರೆ. ನಾಗಾರ್ಜುನ್​ ಶರ್ಮಾ ಸಾಹಿತ್ಯ ಬರೆದಿದ್ದಾರೆ. ಈ ಹಾಡಿನ ಜೊತೆಗೆ ಇನ್ನೊಂದು ಬ್ರೇಕಿಂಗ್​ ನ್ಯೂಸ್​ ನೀಡಿದೆ ಚಿತ್ರತಂಡ. ‘777 ಚಾರ್ಲಿ’ ಯಾವಾಗ ರಿಲೀಸ್​ ಆಗಲಿದೆ ಎಂಬ ಪ್ರಶ್ನೆಗೂ ಉತ್ತರ ಸಿಕ್ಕಿದೆ. ಇದೇ ವರ್ಷ ಡಿ.31ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ರಕ್ಷಿತ್ ಶೆಟ್ಟಿ ವೃತ್ತಿಜೀವನಕ್ಕೆ ಬಹುದೊಡ್ಡ ಬ್ರೇಕ್ ​ನೀಡಿದ ಸಿನಿಮಾ ಕಿರಿಕ್​ ಪಾರ್ಟಿ. ಆ ಚಿತ್ರ ಕೂಡ ಡಿಸೆಂಬರ್​ ಅಂತ್ಯಕ್ಕೆ (ಡಿ.30) ತೆರೆಕಂಡು ಧೂಳೆಬ್ಬಿಸಿತ್ತು. ಈಗ ಅದೇ ಸಮಯಕ್ಕೆ ‘777 ಚಾರ್ಲಿ’ ಮೂಲಕ ರಕ್ಷಿತ್​ ಶೆಟ್ಟಿ ಅದೃಷ್ಟ ಪರೀಕ್ಷೆಗೆ ಮುಂದಾಗುತ್ತಿರುವುದು ವಿಶೇಷ.

ಇದನ್ನೂ ಓದಿ:

ಉಡುಪಿಯಲ್ಲಿ ರಕ್ಷಿತ್​ ಶೆಟ್ಟಿ ಹುಲಿಕುಣಿತ; ಲೋಬಾನ ಹಾಕುವ ಸಂಪ್ರದಾಯದಲ್ಲಿ ‘ಸಿಂಪಲ್ ಸ್ಟಾರ್’ ಭಾಗಿ

‘ನಾನಿರೋದೇ ಹೀಗೆ, ದಯವಿಟ್ಟು ಅರ್ಥ ಮಾಡಿಕೊಳ್ಳಿ’; ರಕ್ಷಿತ್ ಶೆಟ್ಟಿ ಮನವಿ

Follow Us
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ