AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಿಕ್​ ಪಾರ್ಟಿ ರೀತಿ ಡಿಸೆಂಬರ್​ನಲ್ಲಿ ರಕ್ಷಿತ್​ ಶೆಟ್ಟಿ ಅದೃಷ್ಟ ಪರೀಕ್ಷೆ; ‘777 ಚಾರ್ಲಿ’ ಟಾರ್ಚರ್​ಗೆ ಧರ್ಮ ಸುಸ್ತೋ ಸುಸ್ತು​

Rakshit Shetty | 777 Charlie: ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈ ಎಲ್ಲ ಭಾಷೆಗಳಲ್ಲೂ ‘ಟಾರ್ಚರ್​ ಸಾಂಗ್​’ ರಿಲೀಸ್​ ಆಗಿದೆ.

ಕಿರಿಕ್​ ಪಾರ್ಟಿ ರೀತಿ ಡಿಸೆಂಬರ್​ನಲ್ಲಿ ರಕ್ಷಿತ್​ ಶೆಟ್ಟಿ ಅದೃಷ್ಟ ಪರೀಕ್ಷೆ; ‘777 ಚಾರ್ಲಿ’ ಟಾರ್ಚರ್​ಗೆ ಧರ್ಮ ಸುಸ್ತೋ ಸುಸ್ತು​
777 ಚಾರ್ಲಿ ಚಿತ್ರದಲ್ಲಿ ರಕ್ಷಿತ್​ ಶೆಟ್ಟಿ
TV9 Web
| Edited By: |

Updated on: Sep 09, 2021 | 12:46 PM

Share

‘ಸಿಂಪಲ್​​ ಸ್ಟಾರ್​’ ರಕ್ಷಿತ್​ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾ ಮೇಲೆ ಅವರ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಈ ಮೊದಲೇ ಬಿಡುಗಡೆ ಆಗಿದ್ದ ಟೀಸರ್​ ಮತ್ತು ಪೋಸ್ಟರ್​ಗಳಿಂದ ಅಭಿಮಾನಿಗಳಿಗೆ ಕೌತುಕ ಹೆಚ್ಚಿತ್ತು. ಅದನ್ನು ದುಪ್ಪಟ್ಟು ಮಾಡುವ ರೀತಿಯಲ್ಲಿ ಈಗ ಮೊದಲ ಸಾಂಗ್​ ಬಿಡುಗಡೆ ಆಗಿದೆ. ‘ಟಾರ್ಚರ್​..’ ಹಾಡು ಸೆ.9ರಂದು ಬಿಡುಗಡೆ ಆಗಲಿದೆ ಎಂದು ಹೇಳುವ ಮೂಲಕ ಚಿತ್ರತಂಡ ನಿರೀಕ್ಷೆ ಹುಟ್ಟುಹಾಕಿತ್ತು. ಇದೀಗ ಸಾಂಗ್​ ರಿಲೀಸ್​ ಆಗಿದ್ದು, ಶ್ವಾನಪ್ರಿಯರಿಂದ ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ.

ಈಗಾಗಲೇ ಗೊತ್ತಾಗಿರುವಂತೆ ಇದು ನಾಯಿ ಮತ್ತು ಮನುಷ್ಯನ ನಡುವಿನ ಬಾಂಧವ್ಯದ ಕಥೆ ಹೇಳುವ ಸಿನಿಮಾ. ಆದರೆ ಈ ಸಾಂಗ್​ನಲ್ಲಿ ಕಥಾನಾಯಕ ಧರ್ಮ ಮತ್ತು ಆತನ ನಾಯಿ ಚಾರ್ಲಿ ನಡುವಿನ ಕಿತ್ತಾಟವೇ ಹೈಲೈಟ್​ ಆಗಿದೆ. ಚಾರ್ಲಿ ಕೊಟ್ಟ ಟಾರ್ಚರ್​ಗೆ ಧರ್ಮ ಹೈರಾಣಾಗಿ ಹೋಗಿದ್ದಾನೆ. ಹಾಗಾದರೆ ಸಿನಿಮಾದ ಕಥೆ ಮುಂದೇನಾಗುತ್ತದೆ ಎಂಬ ಕೌತುಕ ಸಿನಿಪ್ರಿಯರಲ್ಲಿ ಮೂಡುವಂತಾಗಿದೆ. ಈ ಚಿತ್ರಕ್ಕೆ ಕಿರಣ್​ರಾಜ್​ ನಿರ್ದೇಶನ ಮಾಡಿದ್ದು, ನೋಬಿನ್​ ಪೌಲ್​ ಸಂಗೀತ ನಿರ್ದೇಶನ ಮಾಡಿದ್ದಾರೆ.

ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈ ಎಲ್ಲ ಭಾಷೆಗಳಲ್ಲೂ ‘ಟಾರ್ಚರ್​ ಸಾಂಗ್​’ ರಿಲೀಸ್​ ಆಗಿದೆ. ಕನ್ನಡ ವರ್ಷನ್​ಗೆ ವಿಜಯ್​ ಪ್ರಕಾಶ್​ ಧ್ವನಿ ನೀಡಿದ್ದಾರೆ. ನಾಗಾರ್ಜುನ್​ ಶರ್ಮಾ ಸಾಹಿತ್ಯ ಬರೆದಿದ್ದಾರೆ. ಈ ಹಾಡಿನ ಜೊತೆಗೆ ಇನ್ನೊಂದು ಬ್ರೇಕಿಂಗ್​ ನ್ಯೂಸ್​ ನೀಡಿದೆ ಚಿತ್ರತಂಡ. ‘777 ಚಾರ್ಲಿ’ ಯಾವಾಗ ರಿಲೀಸ್​ ಆಗಲಿದೆ ಎಂಬ ಪ್ರಶ್ನೆಗೂ ಉತ್ತರ ಸಿಕ್ಕಿದೆ. ಇದೇ ವರ್ಷ ಡಿ.31ರಂದು ಈ ಸಿನಿಮಾ ಬಿಡುಗಡೆ ಆಗಲಿದೆ.

ರಕ್ಷಿತ್ ಶೆಟ್ಟಿ ವೃತ್ತಿಜೀವನಕ್ಕೆ ಬಹುದೊಡ್ಡ ಬ್ರೇಕ್ ​ನೀಡಿದ ಸಿನಿಮಾ ಕಿರಿಕ್​ ಪಾರ್ಟಿ. ಆ ಚಿತ್ರ ಕೂಡ ಡಿಸೆಂಬರ್​ ಅಂತ್ಯಕ್ಕೆ (ಡಿ.30) ತೆರೆಕಂಡು ಧೂಳೆಬ್ಬಿಸಿತ್ತು. ಈಗ ಅದೇ ಸಮಯಕ್ಕೆ ‘777 ಚಾರ್ಲಿ’ ಮೂಲಕ ರಕ್ಷಿತ್​ ಶೆಟ್ಟಿ ಅದೃಷ್ಟ ಪರೀಕ್ಷೆಗೆ ಮುಂದಾಗುತ್ತಿರುವುದು ವಿಶೇಷ.

ಇದನ್ನೂ ಓದಿ:

ಉಡುಪಿಯಲ್ಲಿ ರಕ್ಷಿತ್​ ಶೆಟ್ಟಿ ಹುಲಿಕುಣಿತ; ಲೋಬಾನ ಹಾಕುವ ಸಂಪ್ರದಾಯದಲ್ಲಿ ‘ಸಿಂಪಲ್ ಸ್ಟಾರ್’ ಭಾಗಿ

‘ನಾನಿರೋದೇ ಹೀಗೆ, ದಯವಿಟ್ಟು ಅರ್ಥ ಮಾಡಿಕೊಳ್ಳಿ’; ರಕ್ಷಿತ್ ಶೆಟ್ಟಿ ಮನವಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್