AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾದಾ ಸಾಹೇಬ್​ ಫಾಲ್ಕೆ ಸೌತ್​ 2020 ಪ್ರಶಸ್ತಿ: ರಕ್ಷಿತ್​-ರಶ್ಮಿಕಾಗೆ ಅವಾರ್ಡ್​

ಅವನೇ ಶ್ರೀಮನ್ನಾರಾಯಣ ಚಿತ್ರಕ್ಕಾಗಿ ರಕ್ಷಿತ್​ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ. ಈ ಸಿನಿಮಾ 2020ರಲ್ಲಿ ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಅಲ್ಲದೆ, ರಕ್ಷಿತ್​​ ಶೆಟ್ಟಿ ಈ ಸಿನಿಮಾದಲ್ಲಿ ಅತ್ಯುತ್ತಮ ನಟನೆ ತೋರಿದ್ದರು. 

ದಾದಾ ಸಾಹೇಬ್​ ಫಾಲ್ಕೆ ಸೌತ್​ 2020 ಪ್ರಶಸ್ತಿ: ರಕ್ಷಿತ್​-ರಶ್ಮಿಕಾಗೆ ಅವಾರ್ಡ್​
ರಕ್ಷಿತ್​ ಶೆಟ್ಟಿ ಮತ್ತು ರಶ್ಮಿಕಾ ಮಂದಿಣ್ಣ
ರಾಜೇಶ್ ದುಗ್ಗುಮನೆ
| Edited By: |

Updated on: Jan 03, 2021 | 4:26 PM

Share

ದಾದಾ ಸಾಹೇಬ್​ ಫಾಲ್ಕೆ ಸೌತ್​ 2020 ಪ್ರಶಸ್ತಿ ಪ್ರಕಟಗೊಂಡಿದೆ. ಕನ್ನಡದಲ್ಲಿ ರಕ್ಷಿತ್​ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕರೆ, ತೆಲುಗಿನಲ್ಲಿ ರಶ್ಮಿಕಾ ಮಂದಣ್ಣಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.

ಅವನೇ ಶ್ರೀಮನ್ನಾರಾಯಣ ಚಿತ್ರಕ್ಕಾಗಿ ರಕ್ಷಿತ್​ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ. ಈ ಸಿನಿಮಾ 2020ರಲ್ಲಿ ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಅಲ್ಲದೆ, ರಕ್ಷಿತ್​​ ಶೆಟ್ಟಿ ಈ ಸಿನಿಮಾದಲ್ಲಿ ಅತ್ಯುತ್ತಮ ನಟನೆ ತೋರಿದ್ದರು.

ಇನ್ನು, ಸಿನಿಮಾದಿಂದ ಸಿನಿಮಾಗೆ ಬೇರೆ ಬೇರೆ ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ಗೆ ಬಹುಮುಖ ನಟ ಪ್ರಶಸ್ತಿ ಸಿಕ್ಕಿದೆ. ಅತ್ಯುತ್ತಮ ನಟಿ ಪ್ರಶಸ್ತಿ ಯಜಮಾನ ಸಿನಿಮಾದ ನಾಯಕಿ ತಾನ್ಯಾ ಹೋಪ್​ಗೆ ಲಭಿಸಿದೆ. ಪ್ರೀಮಿಯರ್​ ಪದ್ಮಿನಿ ನಿರ್ದೇಶಕ ರಮೇಶ್​ ಇಂದಿರಾ ಅತ್ಯುತ್ತಮ ನಿರ್ದೇಶಕ ಅವಾರ್ಡ್​ ಮುಡಿಗೇರಿಸಿಕೊಂಡಿದ್ದಾರೆ. ಶಿವರಾಮ​ ಕಾರಂತರು ಬರೆದ ಮೂಕಜ್ಜಿಯ ಕನಸುಗಳು ಕಾದಂಬರಿ ಸಿನಿಮಾ ಆಗಿತ್ತು. ಇದು ಅತ್ಯುತ್ತಮ ಚಿತ್ರವಾಗಿ ಹೊರ ಹೊಮ್ಮಿದೆ. ವಿ. ಹರಿಕೃಷ್ಣಗೆ ಅತ್ಯುತ್ತಮ ಸಿನಿಮಾ ನಿರ್ದೇಶಕ ಪ್ರಶಸ್ತಿ ಸಿಕ್ಕಿದೆ.

ತಮಿಳಿನಲ್ಲಿ ಅಸುರನ್​ ಸಿನಿಮಾದಲ್ಲಿ ಅದ್ಭುತ ನಟನೆ ತೋರಿದ ಧನುಶ್​ಗೆ ಬೆಸ್ಟ್​​ ಆ್ಯಕ್ಟರ್​ ಪ್ರಶಸ್ತಿ ದೊರೆತಿದೆ. ಜ್ಯೋತಿಕಾ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತೆಲುಗು ಚಿತ್ರರಂಗದಲ್ಲಿ ನಟಿ ರಶ್ಮಿಕಾ ಮಂದಣ್ಣ ಅತ್ಯುತ್ತಮ ನಟಿ ಅವಾರ್ಡ್​ ಗೆದ್ದಿದ್ದಾರೆ. ನವೀನ್​ ಪಾಲಿಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಹುಟ್ಟೂರಿನಲ್ಲಿ ನೆಲದ ಮೇಲೆ ಉಂಡ ನಟ ರಕ್ಷಿತ್ ಶೆಟ್ಟಿ..! ಸಿಕ್ಕಾಪಟ್ಟೆ ವೈರಲ್​ ಆಗ್ತಿದೆ ಫೋಟೋ

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ