AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾದಾ ಸಾಹೇಬ್​ ಫಾಲ್ಕೆ ಸೌತ್​ 2020 ಪ್ರಶಸ್ತಿ: ರಕ್ಷಿತ್​-ರಶ್ಮಿಕಾಗೆ ಅವಾರ್ಡ್​

ಅವನೇ ಶ್ರೀಮನ್ನಾರಾಯಣ ಚಿತ್ರಕ್ಕಾಗಿ ರಕ್ಷಿತ್​ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ. ಈ ಸಿನಿಮಾ 2020ರಲ್ಲಿ ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಅಲ್ಲದೆ, ರಕ್ಷಿತ್​​ ಶೆಟ್ಟಿ ಈ ಸಿನಿಮಾದಲ್ಲಿ ಅತ್ಯುತ್ತಮ ನಟನೆ ತೋರಿದ್ದರು. 

ದಾದಾ ಸಾಹೇಬ್​ ಫಾಲ್ಕೆ ಸೌತ್​ 2020 ಪ್ರಶಸ್ತಿ: ರಕ್ಷಿತ್​-ರಶ್ಮಿಕಾಗೆ ಅವಾರ್ಡ್​
ರಕ್ಷಿತ್​ ಶೆಟ್ಟಿ ಮತ್ತು ರಶ್ಮಿಕಾ ಮಂದಿಣ್ಣ
ರಾಜೇಶ್ ದುಗ್ಗುಮನೆ
| Edited By: |

Updated on: Jan 03, 2021 | 4:26 PM

Share

ದಾದಾ ಸಾಹೇಬ್​ ಫಾಲ್ಕೆ ಸೌತ್​ 2020 ಪ್ರಶಸ್ತಿ ಪ್ರಕಟಗೊಂಡಿದೆ. ಕನ್ನಡದಲ್ಲಿ ರಕ್ಷಿತ್​ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕರೆ, ತೆಲುಗಿನಲ್ಲಿ ರಶ್ಮಿಕಾ ಮಂದಣ್ಣಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.

ಅವನೇ ಶ್ರೀಮನ್ನಾರಾಯಣ ಚಿತ್ರಕ್ಕಾಗಿ ರಕ್ಷಿತ್​ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ. ಈ ಸಿನಿಮಾ 2020ರಲ್ಲಿ ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಅಲ್ಲದೆ, ರಕ್ಷಿತ್​​ ಶೆಟ್ಟಿ ಈ ಸಿನಿಮಾದಲ್ಲಿ ಅತ್ಯುತ್ತಮ ನಟನೆ ತೋರಿದ್ದರು.

ಇನ್ನು, ಸಿನಿಮಾದಿಂದ ಸಿನಿಮಾಗೆ ಬೇರೆ ಬೇರೆ ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ಗೆ ಬಹುಮುಖ ನಟ ಪ್ರಶಸ್ತಿ ಸಿಕ್ಕಿದೆ. ಅತ್ಯುತ್ತಮ ನಟಿ ಪ್ರಶಸ್ತಿ ಯಜಮಾನ ಸಿನಿಮಾದ ನಾಯಕಿ ತಾನ್ಯಾ ಹೋಪ್​ಗೆ ಲಭಿಸಿದೆ. ಪ್ರೀಮಿಯರ್​ ಪದ್ಮಿನಿ ನಿರ್ದೇಶಕ ರಮೇಶ್​ ಇಂದಿರಾ ಅತ್ಯುತ್ತಮ ನಿರ್ದೇಶಕ ಅವಾರ್ಡ್​ ಮುಡಿಗೇರಿಸಿಕೊಂಡಿದ್ದಾರೆ. ಶಿವರಾಮ​ ಕಾರಂತರು ಬರೆದ ಮೂಕಜ್ಜಿಯ ಕನಸುಗಳು ಕಾದಂಬರಿ ಸಿನಿಮಾ ಆಗಿತ್ತು. ಇದು ಅತ್ಯುತ್ತಮ ಚಿತ್ರವಾಗಿ ಹೊರ ಹೊಮ್ಮಿದೆ. ವಿ. ಹರಿಕೃಷ್ಣಗೆ ಅತ್ಯುತ್ತಮ ಸಿನಿಮಾ ನಿರ್ದೇಶಕ ಪ್ರಶಸ್ತಿ ಸಿಕ್ಕಿದೆ.

ತಮಿಳಿನಲ್ಲಿ ಅಸುರನ್​ ಸಿನಿಮಾದಲ್ಲಿ ಅದ್ಭುತ ನಟನೆ ತೋರಿದ ಧನುಶ್​ಗೆ ಬೆಸ್ಟ್​​ ಆ್ಯಕ್ಟರ್​ ಪ್ರಶಸ್ತಿ ದೊರೆತಿದೆ. ಜ್ಯೋತಿಕಾ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತೆಲುಗು ಚಿತ್ರರಂಗದಲ್ಲಿ ನಟಿ ರಶ್ಮಿಕಾ ಮಂದಣ್ಣ ಅತ್ಯುತ್ತಮ ನಟಿ ಅವಾರ್ಡ್​ ಗೆದ್ದಿದ್ದಾರೆ. ನವೀನ್​ ಪಾಲಿಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಹುಟ್ಟೂರಿನಲ್ಲಿ ನೆಲದ ಮೇಲೆ ಉಂಡ ನಟ ರಕ್ಷಿತ್ ಶೆಟ್ಟಿ..! ಸಿಕ್ಕಾಪಟ್ಟೆ ವೈರಲ್​ ಆಗ್ತಿದೆ ಫೋಟೋ

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ