AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾದಾ ಸಾಹೇಬ್​ ಫಾಲ್ಕೆ ಸೌತ್​ 2020 ಪ್ರಶಸ್ತಿ: ರಕ್ಷಿತ್​-ರಶ್ಮಿಕಾಗೆ ಅವಾರ್ಡ್​

ಅವನೇ ಶ್ರೀಮನ್ನಾರಾಯಣ ಚಿತ್ರಕ್ಕಾಗಿ ರಕ್ಷಿತ್​ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ. ಈ ಸಿನಿಮಾ 2020ರಲ್ಲಿ ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಅಲ್ಲದೆ, ರಕ್ಷಿತ್​​ ಶೆಟ್ಟಿ ಈ ಸಿನಿಮಾದಲ್ಲಿ ಅತ್ಯುತ್ತಮ ನಟನೆ ತೋರಿದ್ದರು. 

ದಾದಾ ಸಾಹೇಬ್​ ಫಾಲ್ಕೆ ಸೌತ್​ 2020 ಪ್ರಶಸ್ತಿ: ರಕ್ಷಿತ್​-ರಶ್ಮಿಕಾಗೆ ಅವಾರ್ಡ್​
ರಕ್ಷಿತ್​ ಶೆಟ್ಟಿ ಮತ್ತು ರಶ್ಮಿಕಾ ಮಂದಿಣ್ಣ
ರಾಜೇಶ್ ದುಗ್ಗುಮನೆ
| Edited By: |

Updated on: Jan 03, 2021 | 4:26 PM

Share

ದಾದಾ ಸಾಹೇಬ್​ ಫಾಲ್ಕೆ ಸೌತ್​ 2020 ಪ್ರಶಸ್ತಿ ಪ್ರಕಟಗೊಂಡಿದೆ. ಕನ್ನಡದಲ್ಲಿ ರಕ್ಷಿತ್​ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕರೆ, ತೆಲುಗಿನಲ್ಲಿ ರಶ್ಮಿಕಾ ಮಂದಣ್ಣಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.

ಅವನೇ ಶ್ರೀಮನ್ನಾರಾಯಣ ಚಿತ್ರಕ್ಕಾಗಿ ರಕ್ಷಿತ್​ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ. ಈ ಸಿನಿಮಾ 2020ರಲ್ಲಿ ಸ್ಯಾಂಡಲ್​ವುಡ್​ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಅಲ್ಲದೆ, ರಕ್ಷಿತ್​​ ಶೆಟ್ಟಿ ಈ ಸಿನಿಮಾದಲ್ಲಿ ಅತ್ಯುತ್ತಮ ನಟನೆ ತೋರಿದ್ದರು.

ಇನ್ನು, ಸಿನಿಮಾದಿಂದ ಸಿನಿಮಾಗೆ ಬೇರೆ ಬೇರೆ ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ಗೆ ಬಹುಮುಖ ನಟ ಪ್ರಶಸ್ತಿ ಸಿಕ್ಕಿದೆ. ಅತ್ಯುತ್ತಮ ನಟಿ ಪ್ರಶಸ್ತಿ ಯಜಮಾನ ಸಿನಿಮಾದ ನಾಯಕಿ ತಾನ್ಯಾ ಹೋಪ್​ಗೆ ಲಭಿಸಿದೆ. ಪ್ರೀಮಿಯರ್​ ಪದ್ಮಿನಿ ನಿರ್ದೇಶಕ ರಮೇಶ್​ ಇಂದಿರಾ ಅತ್ಯುತ್ತಮ ನಿರ್ದೇಶಕ ಅವಾರ್ಡ್​ ಮುಡಿಗೇರಿಸಿಕೊಂಡಿದ್ದಾರೆ. ಶಿವರಾಮ​ ಕಾರಂತರು ಬರೆದ ಮೂಕಜ್ಜಿಯ ಕನಸುಗಳು ಕಾದಂಬರಿ ಸಿನಿಮಾ ಆಗಿತ್ತು. ಇದು ಅತ್ಯುತ್ತಮ ಚಿತ್ರವಾಗಿ ಹೊರ ಹೊಮ್ಮಿದೆ. ವಿ. ಹರಿಕೃಷ್ಣಗೆ ಅತ್ಯುತ್ತಮ ಸಿನಿಮಾ ನಿರ್ದೇಶಕ ಪ್ರಶಸ್ತಿ ಸಿಕ್ಕಿದೆ.

ತಮಿಳಿನಲ್ಲಿ ಅಸುರನ್​ ಸಿನಿಮಾದಲ್ಲಿ ಅದ್ಭುತ ನಟನೆ ತೋರಿದ ಧನುಶ್​ಗೆ ಬೆಸ್ಟ್​​ ಆ್ಯಕ್ಟರ್​ ಪ್ರಶಸ್ತಿ ದೊರೆತಿದೆ. ಜ್ಯೋತಿಕಾ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತೆಲುಗು ಚಿತ್ರರಂಗದಲ್ಲಿ ನಟಿ ರಶ್ಮಿಕಾ ಮಂದಣ್ಣ ಅತ್ಯುತ್ತಮ ನಟಿ ಅವಾರ್ಡ್​ ಗೆದ್ದಿದ್ದಾರೆ. ನವೀನ್​ ಪಾಲಿಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಹುಟ್ಟೂರಿನಲ್ಲಿ ನೆಲದ ಮೇಲೆ ಉಂಡ ನಟ ರಕ್ಷಿತ್ ಶೆಟ್ಟಿ..! ಸಿಕ್ಕಾಪಟ್ಟೆ ವೈರಲ್​ ಆಗ್ತಿದೆ ಫೋಟೋ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ