ಕೆಲಸದ ಸಮಯದಲ್ಲಿ ಹೀರೋಯಿನ್ ಜೊತೆ ರಕ್ಷಿತ್​ ಶೆಟ್ಟಿ ಮೋಜು! ಫೋಟೋ ವೈರಲ್​

Rakshit Shetty: ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಇನ್ನೂ ಶೂಟಿಂಗ್​ ಆರಂಭ ಆಗಿಲ್ಲ. ಅಷ್ಟರಲ್ಲಾಗಲೇ ಜನರು ರುಕ್ಮಿಣಿ ಮತ್ತು ರಕ್ಷಿತ್​ ಜೋಡಿಯನ್ನು ಸಖತ್​ ಇಷ್ಟಪಡುತ್ತಿದ್ದಾರೆ. ಕಾಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಕೆಲಸದ ಸಮಯದಲ್ಲಿ ಹೀರೋಯಿನ್ ಜೊತೆ ರಕ್ಷಿತ್​ ಶೆಟ್ಟಿ ಮೋಜು! ಫೋಟೋ ವೈರಲ್​
ರಕ್ಷಿತ್​ ಶೆಟ್ಟಿ - ರುಕ್ಮಿಣಿ ವಸಂತ್​
Follow us
|

Updated on: Mar 31, 2021 | 2:48 PM

ನಟ ರಕ್ಷಿತ್​ ಶೆಟ್ಟಿ ಅವರು ಡಿಫರೆಂಟ್​ ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ. ವೃತ್ತಿಜೀವನ ಮಾತ್ರವಲ್ಲದೆ ಖಾಸಗಿ ಬದುಕಿನ ಕಾರಣದಿಂದಲೂ ಅವರು ಆಗಾಗ ಸುದ್ದಿ ಆಗುತ್ತಿರುತ್ತಾರೆ. ಈಗ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಆ ಸಂದರ್ಭದ ಕೆಲವು ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.

‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ಚಿತ್ರಕ್ಕೆ ನಿರ್ದೇಶನ ಮಾಡಿದ್ದ ಹೇಮಂತ್​ ಎಂ. ರಾವ್​ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಗಿತ್ತು. ಅಲ್ಲದೆ, ಪಾತ್ರದ ಸಲುವಾಗಿ ವರ್ಕ್​ಶಾಪ್​ನಲ್ಲಿ ಪಾಲ್ಗೊಳ್ಳುವುದಾಗಿಯೂ ರಕ್ಷಿತ್​ ಹೇಳಿದ್ದರು. ಪ್ರಸ್ತುತ ನಾಯಕಿ ರುಕ್ಮಿಣಿ ವಸಂತ್​ ಜೊತೆ ಅವರು ವರ್ಕ್​ಶಾಪ್​ನಲ್ಲಿ ತೊಡಗಿಕೊಂಡಿದ್ದಾರೆ.

ಈ ವರ್ಕ್​ಶಾಪ್​ ಸಮಯದ ಕೆಲವು ಫೋಟೋಗಳು ಈಗ ವೈರಲ್​ ಆಗಿವೆ. ಆ ಫೋಟೋಗಳನ್ನು ಹಂಚಿಕೊಂಡಿರುವುದು ಸ್ವತಃ ರಕ್ಷಿತ್​ ಶೆಟ್ಟಿ ಎಂಬುದು ವಿಶೇಷ. ಅವುಗಳ ಜೊತೆಯಲ್ಲಿ ಅವರು ನೀಡಿದ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ. ‘ಕೆಲಸದಲ್ಲಿ ನೀವು ಮೋಜು ಮಾಡುತ್ತಿದ್ದೀರಿ ಎಂದರೆ ನೀವು ಕೆಲಸ ಮಾಡುತ್ತಿಲ್ಲ ಎಂದು ಅರ್ಥವೇ? ಅಥವಾ ನಿಮ್ಮ ಕೆಲಸ ಅಷ್ಟು ಗ್ರೇಟ್​ ಆಗಿದೆ ಎಂದು ಅರ್ಥವೇ?’ ಎಂದು ರಕ್ಷಿತ್​ ಬರೆದುಕೊಂಡಿದ್ದಾರೆ.

‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಇನ್ನೂ ಶೂಟಿಂಗ್​ ಆರಂಭ ಆಗಿಲ್ಲ. ಅಷ್ಟರಲ್ಲಾಗಲೇ ಜನರು ರುಕ್ಮಿಣಿ ಮತ್ತು ರಕ್ಷಿತ್​ ಜೋಡಿಯನ್ನು ಸಖತ್​ ಇಷ್ಟಪಡುತ್ತಿದ್ದಾರೆ. ಕಾಮೆಂಟ್​ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ. ‘ಶೆಟ್ರೇ.. ನಿಮ್ಮ ಜೋಡಿ ಸೂಪರ್​ ಆಗಿದೆ. ಮದುವೆ ಆಗಿ‘ ಎಂದು ಕೆಲವು ಅಭಿಮಾನಿಗಳು ಸಲಹೆ ನೀಡುತ್ತಿದ್ದಾರೆ.

ಈ ಸಿನಿಮಾದ ಮೂಲಕ ಒಂದು ಗಂಭೀರವಾದ ಪ್ರೇಮಕತೆಯನ್ನು ನಿರ್ದೇಶಕ ಹೇಮಂತ್​ ರಾವ್​ ಹೇಳಲಿದ್ದಾರಂತೆ. ಕತೆಯ ಬಗ್ಗೆ ರಕ್ಷಿತ್​ ಹೆಚ್ಚು ಭರವಸೆ ವ್ಯಕ್ತಪಡಿಸಿದ್ದಾರೆ. ನಾಯಕ ಮತ್ತು ನಾಯಕಿಯ ಫಸ್ಟ್​ಲುಕ್​ ಪೋಸ್ಟರ್​ಗಳು ಕೂಡ ಗಮನ ಸೆಳೆಯುತ್ತಿವೆ. ಇದಲ್ಲದೆ, ‘777 ಚಾರ್ಲಿ’ ಚಿತ್ರದ ಅಂತಿಮ ಹಂತದ ಕೆಲಸಗಳಲ್ಲಿ ರಕ್ಷಿತ್​ ಶೆಟ್ಟಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ರಕ್ಷಿತ್​ ಶೆಟ್ಟಿಗೆ ರುಕ್ಮಿಣಿ ಜೊತೆ ಇದೇ ಮೊದಲ ಬಾರಿಗೆ ಸೀರಿಯಸ್​ ಆಗಿ ಲವ್​ ಆಗ್ತಿದೆ! ಏನ್​ ಸಮಾಚಾರ?

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ