AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಮಧ್ಯೆ ಫ್ರೆಂಡ್​ಶಿಪ್ ಬೆಳೆದಿದ್ದು ಹೇಗೆ? ಇಲ್ಲಿದೆ ಇವರ ಗೆಳೆತನದ ಕಥೆ

Rakshit Shetty Birthday: ‘ತುಗ್ಲಕ್’ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಒಟ್ಟಾಗಿ ನಟಿಸಿದ್ದರು. ರಕ್ಷಿತ್ ಶೆಟ್ಟಿ ಅವರಿಗೆ ಸಿನಿಮಾ ಮೇಲೆ ನಿಜವಾದ ಪ್ರೀತಿ ಇದೆ ಎಂಬುದು ಆ ಸಿನಿಮಾ ಸೋತಾಗ ರಿಷಬ್​​ಗೆ ಗೊತ್ತಾಗಿತ್ತು.

ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಮಧ್ಯೆ ಫ್ರೆಂಡ್​ಶಿಪ್ ಬೆಳೆದಿದ್ದು ಹೇಗೆ? ಇಲ್ಲಿದೆ ಇವರ ಗೆಳೆತನದ ಕಥೆ
ರಕ್ಷಿತ್ ಶೆಟ್ಟಿ-ರಿಷಬ್ ಶೆಟ್ಟಿ
Follow us
ರಾಜೇಶ್ ದುಗ್ಗುಮನೆ
|

Updated on: Jun 06, 2023 | 7:37 AM

ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ (Rishab Shetty) ಒಟ್ಟಿಗೆ ಹಲವು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಇವರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಚಿತ್ರರಂಗದಲ್ಲಿ ಇಬ್ಬರೂ ಸಾಕಷ್ಟು ಬೆಳೆದಿದ್ದಾರೆ. 2022ರಲ್ಲಿ ರಕ್ಷಿತ್ ಶೆಟ್ಟಿ ಅವರು ‘777 ಚಾರ್ಲಿ’ ಸಿನಿಮಾ ಮೂಲಕ ಗೆದ್ದರೆ, ರಿಷಬ್ ಶೆಟ್ಟಿ ಅವರು ‘ಕಾಂತಾರ’ (Kantara Movie) ಮೂಲಕ ದೊಡ್ಡ ಗೆಲುವು ಕಂಡರು. ಈಗ ಇಬ್ಬರೂ ಬೇರೆ ಬೇರೆ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಇವರ ಮಧ್ಯೆ ತುಂಬಾ ಹಳೆಯ ಫ್ರೆಂಡ್​ಶಿಪ್ ಇದೆ. ಈ ಬಗ್ಗೆ ರಿಷಬ್ ಶೆಟ್ಟಿ ಅವರು ಈ ಮೊದಲು ಮಾತನಾಡಿದ್ದರು.

ರಕ್ಷಿತ್ ಶೆಟ್ಟಿ ಅವರನ್ನು ರಿಷಬ್ ಮೊದಲು ನೋಡಿದಾಗ ಬೇರೆಯದೇ ಅಭಿಪ್ರಾಯ ಹೊಂದಿದ್ದರು. ‘ಶ್ರೀಮಂತರ ಮನೆಯ ಮಕ್ಕಳು. ಇವರಿಗೆಲ್ಲ ಸಿನಿಮಾ ಮೇಲೆ ಪ್ರೀತಿ ಇರುವುದಿಲ್ಲ’ ಎಂದು ಭಾವಿಸಿದ್ದರು. ‘ತುಗ್ಲಕ್’ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಒಟ್ಟಾಗಿ ನಟಿಸಿದ್ದರು. ರಕ್ಷಿತ್ ಶೆಟ್ಟಿ ಅವರಿಗೆ ಸಿನಿಮಾ ಮೇಲೆ ನಿಜವಾದ ಪ್ರೀತಿ ಇದೆ ಎಂಬುದು ಆ ಸಿನಿಮಾ ಸೋತಾಗ ರಿಷಬ್​​ಗೆ ಗೊತ್ತಾಗಿತ್ತು.

‘ತ್ರಿಭುವನ್ ಥಿಯೇಟರ್​ ಮೆಟ್ಟಿಲ ಮೇಲೆ ರಕ್ಷಿತ್ ಕೂತಿದ್ದ. ಆತನಿಗೆ ಸಿನಿಮಾ ಸೋತ ನೋವಿತ್ತು. ಆಗ ನನಗೆ ಅನಿಸಿದ್ದು ಈತ ಏನೋ ಮಾಡ್ತಾನೆ ಎಂದು. ರಿಕ್ಕಿ ಸಿನಿಮಾಗೆ ಈತ ಸೂಕ್ತ ಎಂದು ಅನಿಸಿತು. ಇಬ್ಬರೂ ರಿಕ್ಕಿ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದೆವು’ ಎಂದು ರಿಷಬ್ ಅವರು ‘ಗೋಲ್ಡನ್ ಗ್ಯಾಂಗ್’ ವೇದಿಕೆ ಮೇಲೆ ಹೇಳಿಕೊಂಡಿದ್ದರು.

ಇದನ್ನೂ ಓದಿ: ರಕ್ಷಿತ್​ ಶೆಟ್ಟಿ ಜನ್ಮದಿನ: ಈಗ ‘ಸಿಂಪಲ್​ ಸ್ಟಾರ್​’ ಸಂಪೂರ್ಣ ಗಮನ ಇರೋದು ಯಾವ ಚಿತ್ರದ ಮೇಲೆ?

‘ರಿಕ್ಕಿ’ ರಿಷಬ್ ಶೆಟ್ಟಿ ನಿರ್ದೇಶನದ ಮೊದಲ ಸಿನಿಮಾ. ಇದಾದ ಬಳಿಕ ರಿಷಬ್ ನಿರ್ದೇಶನದ, ರಕ್ಷಿತ್ ನಟನೆಯ ‘ಕಿರಿಕ್ ಪಾರ್ಟಿ’ ಸಿನಿಮಾ ಸೂಪರ್ ಹಿಟ್ ಆಯಿತು. ಇವರ ಮಧ್ಯೆ ಈಗಲೂ ಒಳ್ಳೆಯ ಫ್ರೆಂಡ್​ಶಿಪ್ ಇದೆ.

ರಕ್ಷಿತ್ ಜನ್ಮದಿನ:

ರಕ್ಷಿತ್ ಶೆಟ್ಟಿ ಅವರಿಗೆ ಇಂದು (ಜೂನ್ 6) ಜನ್ಮದಿನದ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ರಕ್ಷಿತ್​ಗೆ ವಿಶ್ ಮಾಡುತ್ತಿದ್ದಾರೆ. ಅವರ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಕುರಿತು ಇಂದು ಹೊಸ ಅಪ್​ಡೇಟ್ ಸಿಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ