AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್

ನಟ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ದಿನದಂದು ಗೆಳೆಯ ರಿಷಬ್ ಶೆಟ್ಟಿ ಮಾಡಿದ ವಿಭಿನ್ನ ವಿಶ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಬ್ಬರ ನಡುವೆ ಮನಸ್ತಾಪದ ವದಂತಿಗಳಿಗೆ ರಿಷಬ್ ಪೋಸ್ಟ್ ಪೂರ್ಣವಿರಾಮ ಇಟ್ಟಿದೆ. ಅಲ್ಲದೆ, ರಕ್ಷಿತ್ ಶೆಟ್ಟಿ ಮುಂದಿನ ಸಿನಿಮಾ ಅಪ್‌ಡೇಟ್ ಬಗ್ಗೆಯೂ ಸುಳಿವು ನೀಡಿದ್ದಾರೆ.

ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್
ರಿಷಬ್-ರಕ್ಷಿತಾ
ರಾಜೇಶ್ ದುಗ್ಗುಮನೆ
|

Updated on: Jun 06, 2026 | 11:25 AM

Share

ಸ್ಯಾಂಡಲ್‌ವುಡ್‌ನ ನಟ, ನಿರ್ದೇಶಕ ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ ಇಂದು (ಜೂನ್ 6) ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ದಿನದಂದು ಅವರ ಆತ್ಮೀಯ ಗೆಳೆಯ, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ವಿಭಿನ್ನವಾಗಿ ವಿಶ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲದೆ, ಕಳೆದ ಕೆಲವು ದಿನಗಳಿಂದ ಇವರಿಬ್ಬರ ನಡುವೆ ಮನಸ್ತಾಪ ಉಂಟಾಗಿದೆ ಎಂದು ಹರಿದಾಡುತ್ತಿದ್ದ ಎಲ್ಲಾ ವದಂತಿಗಳಿಗೂ ರಿಷಬ್ ತಮ್ಮ ಒಂದೇ ಒಂದು ಪೋಸ್ಟ್ ಮೂಲಕ ಪೂರ್ಣವಿರಾಮ ಇಟ್ಟಿದ್ದಾರೆ.

ಮನಸ್ತಾಪದ ಸುದ್ದಿ ಸುಳ್ಳು ಮಾಡಿದ ರಿಷಬ್:

ಚಿತ್ರರಂಗದಲ್ಲಿ ದಶಕಗಳಿಗೂ ಹೆಚ್ಚಿನ ಸ್ನೇಹ ಹೊಂದಿರುವ ಈ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ಮಾತುಗಳು ಗಾಂಧಿನಗರದ ತುಂಬೆಲ್ಲಾ ಕೇಳಿಬರುತ್ತಿದ್ದವು. ಆದರೆ ಇಂದು ರಕ್ಷಿತ್ ಹುಟ್ಟುಹಬ್ಬಕ್ಕೆ ಶುಭ ಕೋರಿರುವ ರಿಷಬ್ ಶೆಟ್ಟಿ, ಹಳೆಯ ಸುಂದರ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ.

‘ಕಿರಿಕ್ ಪಾರ್ಟಿ’ ಸೆಟ್​​ನನಲ್ಲಿ ತೆಗೆದ ಫೋಟೋ ಇದಾಗಿದೆ. ಇಬ್ಬರೂ ಮುಗುಳ್ನಗುತ್ತಾ ಇದ್ದಾರೆ. ‘ಬಂದು ಹೋಗುವ ಜನರ ಮಧ್ಯೆ ಈ ಗೆಳೆಯ ಶಾಶ್ವತ ಅಧ್ಯಾಯವಾಗಿದ್ದಾನೆ. ಹ್ಯಾಪಿ ಬರ್ತ್ಡೇ ಮಗ ರಕ್ಷಿತ್ ಶೆಟ್ಟಿ’ ಎಂದು ಬರೆಯುವ ಮೂಲಕ ತಮ್ಮ ನಡುವಿನ ಅಪೂರ್ವ ಸ್ನೇಹವನ್ನು ಜಗತ್ತಿಗೆ ಸಾರಿದ್ದಾರೆ. ಹೊಸ ಸಿನಿಮಾ ಅಪ್‌ಡೇಟ್

ರಕ್ಷಿತ್ ಶೆಟ್ಟಿ ಅವರ ಮುಂದಿನ ಹೊಸ ಸಿನಿಮಾ ಅನೌನ್ಸ್​​ಮೆಂಟ್ ಆಗಿ ಸಾಕಷ್ಟು ಸಮಯ ಕಳೆದಿದೆ. ಆದರೆ, ಈ ಬಗ್ಗೆ ನಂತರ ಅಪ್​​ಡೇಟ್ ಸಿಕ್ಕಿಲ್ಲ. ಅಭಿಮಾನಿಗಳ ಪ್ರಶ್ನೆಗಳಿಗೂ ಈಗ ರಿಷಬ್ ಶೆಟ್ಟಿ ಅವರೇ ಉತ್ತರ ನೀಡಿದ್ದಾರೆ. ‘ಮೊನ್ನೆ ತಾನೇ ಭೇಟಿ ಮಾಡಿ ಬಂದೆ. ಅವನು ಸದ್ಯದಲ್ಲೇ ಮರಳಿ ಬರಲಿದ್ದಾನೆ’ ಎಂದು ರಿಷಬ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಪೆದ್ದಿ’ ಸಿನಿಮಾ ಟ್ರೈಲರ್ ನೋಡಿ ರಿಷಬ್ ಶೆಟ್ಟಿ ಹೇಳಿದ್ದು ಹೀಗೆ

ರಿಷಬ್ ಅವರ ಈ ಲೇಟೆಸ್ಟ್ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಸಾಲುಗಳು ರಕ್ಷಿತ್ ಅಭಿಮಾನಿಗಳಲ್ಲಿ ಹೊಸ ಜೋಶ್ ತುಂಬಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ