AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakshit Shetty: ರಕ್ಷಿತ್​ ಶೆಟ್ಟಿ ಜನ್ಮದಿನ: ಈಗ ‘ಸಿಂಪಲ್​ ಸ್ಟಾರ್​’ ಸಂಪೂರ್ಣ ಗಮನ ಇರೋದು ಯಾವ ಚಿತ್ರದ ಮೇಲೆ?

Rakshit Shetty Birthday: ರಕ್ಷಿತ್​ ಶೆಟ್ಟಿ ಅಭಿಮಾನಿಗಳು ಈ ಸಿನಿಮಾ ಮೇಲೆ ವಿಶೇಷವಾದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರವನ್ನು ಬಹಳ ಕಾಳಜಿ ವಹಿಸಿ ತೆರೆಗೆ ತರುವ ಪ್ರಯತ್ನ ಆಗುತ್ತಿದೆ.

Rakshit Shetty: ರಕ್ಷಿತ್​ ಶೆಟ್ಟಿ ಜನ್ಮದಿನ: ಈಗ ‘ಸಿಂಪಲ್​ ಸ್ಟಾರ್​’ ಸಂಪೂರ್ಣ ಗಮನ ಇರೋದು ಯಾವ ಚಿತ್ರದ ಮೇಲೆ?
ರಕ್ಷಿತ್​ ಶೆಟ್ಟಿ
ಮದನ್​ ಕುಮಾರ್​
|

Updated on: Jun 06, 2023 | 7:00 AM

Share

ಕನ್ನಡ ಚಿತ್ರರಂಗದಲ್ಲಿ ವಿಶೇಷವಾಗಿ ಗುರುತಿಸಿಕೊಂಡವರು ನಟ ರಕ್ಷಿತ್​ ಶೆಟ್ಟಿ (Rakshit Shetty). ತಮ್ಮದೇ ಶೈಲಿಯಲ್ಲಿ ಸಿನಿಮಾ ಮಾಡುವ ಮೂಲಕ ಅವರು ಛಾಪು ಮೂಡಿಸಿದ್ದಾರೆ. ಪ್ರತಿ ಸಿನಿಮಾದಲ್ಲೂ ಹೊಸದಾಗಿ ಏನನ್ನೋ ಪ್ರಯತ್ನಿಸುತ್ತಾರೆ. ಅವರ ನಿರ್ದೇಶನಕ್ಕೆ ಪ್ರತ್ಯೇಕ ಫ್ಯಾನ್​ ಬೇಸ್​ ಇದೆ. ಇಂದು (ಜೂನ್​ 6) ರಕ್ಷಿತ್​ ಶೆಟ್ಟಿ ಅವರಿಗೆ ಜನ್ಮದಿನದ (Rakshit Shetty Birthday) ಸಂಭ್ರಮ. ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ಸ್ಯಾಂಡಲ್​ವುಡ್​ನಲ್ಲಿ ಸಾಧನೆ ಮಾಡಿರುವ ಅವರ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ವಿಶ್​ ಮಾಡುತ್ತಿದ್ದಾರೆ. ಈಗ ರಕ್ಷಿತ್​ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಅದರ ನಡುವೆ ಅವರು ‘ರಿಚರ್ಡ್​ ಆಂಟನಿ’ (Richard Anthony Movie) ಚಿತ್ರದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ರಕ್ಷಿತ್​ ಶೆಟ್ಟಿ ಅಭಿಮಾನಿಗಳು ‘ರಿಚರ್ಡ್​ ಆಂಟನಿ’ ಸಿನಿಮಾ ಮೇಲೆ ವಿಶೇಷವಾದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾಗೆ ಬಂಡವಾಳ ಹೂಡಲಿರುವುದು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ. ಈ ಚಿತ್ರವನ್ನು ಬಹಳ ಕಾಳಜಿ ವಹಿಸಿ ತೆರೆಗೆ ತರುವ ಪ್ರಯತ್ನ ಆಗುತ್ತಿದೆ. ಸ್ಕ್ರಿಪ್ಟ್​ ಬಗ್ಗೆ ರಕ್ಷಿತ್​ ಶೆಟ್ಟಿ ಅವರು ತುಂಬ ಗಮನ ನೀಡುತ್ತಿದ್ದಾರೆ. ‘ರಿಚರ್ಡ್​ ಆಂಟನಿ’ ಚಿತ್ರದ ಸ್ಕ್ರಿಪ್ಟ್​ ಫೈನಲ್​ ಮಾಡಲು ಅವರು ಅಮೆರಿಕಕ್ಕೆ ತೆರಳುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಬೇರೆಲ್ಲ ಕೆಲಸಗಳನ್ನು ಬದಿಗಿಟ್ಟು ಶೇಕಡ ನೂರರಷ್ಟು ತಮ್ಮ ಗಮನವನ್ನು ಈ ಸಿನಿಮಾದ ಸ್ಕ್ರಿಪ್ಟ್​ ಮೇಲೆ ನೀಡುವುದಾಗಿ ಅವರು ತಿಳಿಸಿದ್ದರು.

ಇದನ್ನೂ ಓದಿ: ನಟಿ ಮಯೂರಿ ನಟರಾಜ್​ಗೆ ಬಂಪರ್​ ಚಾನ್ಸ್​; ರಕ್ಷಿತ್​ ಶೆಟ್ಟಿ ನಿರ್ಮಾಣದ ಚಿತ್ರದಲ್ಲಿ ರಾಧೆ ಪಾತ್ರ

ಮೇ 10ರಂದು ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡುವಾಗ ರಕ್ಷಿತ್​ ಶೆಟ್ಟಿ ಅವರು ಈ ವಿಚಾರ ಹಂಚಿಕೊಂಡಿದ್ದರು. ‘ನಾನು ಅಮೆರಿಕಕ್ಕೆ ತೆರಳುತ್ತೇನೆ. ವೋಟ್​ ಮಾಡಬೇಕು ಎಂಬ ಕಾರಣದಿಂದ ಇಷ್ಟು ದಿನಗಳವರೆಗೆ ಕಾದಿದ್ದೆ. ಇಲ್ಲದಿದ್ದರೆ ಈಗಾಗಲೇ ಅಮೆರಿಕಕ್ಕೆ ಹೋಗಿರುತ್ತಿದ್ದೆ. ‘ರಿಚರ್ಡ್​ ಆಂಟನಿ’ ಚಿತ್ರದ ಫೈನಲ್​ ಡ್ರಾಫ್ಟ್​ ಬರೆಯಬೇಕಿದೆ. ಇಲ್ಲಿದ್ದರೆ ಸ್ಕ್ರಿಪ್ಟ್​ ಬರೆಯುವಾಗ ಅವರಿವರು ಫೋನ್​ ಮಾಡುತ್ತಾರೆ. ಅದರಿಂದ ಡಿಸ್ಟರ್ಬ್​ ಆಗತ್ತೆ. ಅಮೆರಿಕಕ್ಕೆ ಹೋದರೆ ಇಲ್ಲಿ ರಾತ್ರಿ ಆದಾಗ ಅಲ್ಲಿ ಬೆಳಗ್ಗೆ ಆಗಿರುತ್ತದೆ. ಯಾರೂ ಡಿಸ್ಟರ್ಬ್​ ಮಾಡಲ್ಲ. ಹಾಗಾಗಿ ಅಲ್ಲಿಗೆ ಹೋಗುತ್ತಿದ್ದೇನೆ’ ಎಂದು ರಕ್ಷಿತ್​ ಶೆಟ್ಟಿ ಹೇಳಿದ್ದರು.

ಇದನ್ನೂ ಓದಿ: ‘ನಮ್ಮನೆ ಯುವರಾಣಿ’ ಮೀರಾ ಹೊಸ ಚಿತ್ರದ ಬಗ್ಗೆ ರಕ್ಷಿತ್​ ಶೆಟ್ಟಿ ನೀಡಿದ್ರು ಬ್ರೇಕಿಂಗ್​​ ನ್ಯೂಸ್​; ಇದಕ್ಕೆ ವಿಹಾನ್​ ಹೀರೋ

ಒಂದು ಸಿನಿಮಾದಲ್ಲಿ ಯಶಸ್ಸು ಸಿಕ್ಕಿತು ಎಂಬ ಕಾರಣಕ್ಕೆ ಅದೇ ರೀತಿಯ ಸಿನಿಮಾಗಳನ್ನೇ ಮುಂದುವರಿಸಿಕೊಂಡು ಹೋಗುವ ಅನೇಕ ಹೀರೋಗಳಿದ್ದಾರೆ. ಆದರೆ ರಕ್ಷಿತ್​ ಶೆಟ್ಟಿ ಅವರು ಆ ಸಾಲಿಗೆ ಸೇರುವವರಲ್ಲ. ‘ಸಿಂಪಲ್ಲಾಗ್​ ಒಂದ್​ ಲವ್​ ಸ್ಟೋರಿ’ ಚಿತ್ರದಿಂದ ಅವರಿಗೆ ಸಾಕಷ್ಟು ಖ್ಯಾತಿ ಸಿಕ್ಕಿತು. ಹಾಗಂತ ಅವರು ಅದೇ ರೀತಿಯ ಪಾತ್ರವನ್ನು ಮುಂದುವರಿಸಲಿಲ್ಲ. ‘ಉಳಿದವರು ಕಂಡಂತೆ’ ಸಿನಿಮಾದಲ್ಲಿ ಬೇರೆಯದೇ ರೀತಿ ಕಾಣಿಸಿಕೊಂಡರು. ‘ವಾಸ್ತು ಪ್ರಕಾರ’, ‘ರಿಕ್ಕಿ’, ‘ಕಿರಿಕ್​ ಪಾರ್ಟಿ’, ‘ಗೋಧಿಬಣ್ಣ ಸಾಧಾರಣ ಮೈಕಟ್ಟು’, ‘777 ಚಾರ್ಲಿ’.. ಹೀಗೆ ಎಲ್ಲ ಚಿತ್ರದಲ್ಲೂ ಅವರು ಡಿಫರೆಂಟ್​ ಪಾತ್ರವನ್ನೇ ಪ್ರಯತ್ನಿಸಿದ್ದಾರೆ. ಈಗ ‘ರಿಚರ್ಡ್​ ಆಂಟನಿ’ ಚಿತ್ರದಲ್ಲಿ ಅವರು ಯಾವ ರೀತಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಕೌತುಕ ಅಭಿಮಾನಿಗಳಿಗೆ ಇದೆ.

ಇನ್ನು, ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಬಗ್ಗೆ ಹೇಳೋದಾದರೆ ಈ ಚಿತ್ರದಲ್ಲಿ ರಕ್ಷಿತ್​ ಶೆಟ್ಟಿ ಅವರಿಗೆ ಎರಡು ಶೇಡ್​ನ ಪಾತ್ರ ಇರಲಿದೆ. ಅದಕ್ಕಾಗಿ ಅವರು ದೇಹದ ತೂಕ ಹೆಚ್ಚಿಸಿಕೊಂಡಿದ್ದರು. ಹೇಮಂತ್​ ರಾವ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದು, ರಕ್ಷಿತ್​ ಶೆಟ್ಟಿ ಜೊತೆ ರುಕ್ಮಿಣಿ ವಸಂತ್​, ಚೈತ್ರಾ ಆಚಾರ್​ ಮುಂತಾದವರು ನಟಿಸಿದ್ದಾರೆ. ಇದರ ಶೂಟಿಂಗ್​ ಮುಕ್ತಾಯ ಆಗಿದೆ. ಆ ಚಿತ್ರಕ್ಕೆ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ