ರಕ್ಷಿತ್​ ಶೆಟ್ಟಿ ಜನ್ಮದಿನ; ‘777 ಚಾರ್ಲಿ’ ಟೀಸರ್​ ರಿಲೀಸ್​ ಮಾಡೋಕೆ ಬಂದ ಪರಭಾಷೆಯ ಸ್ಟಾರ್​ಗಳು

‘777 ಚಾರ್ಲಿ’ ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು, ಕನ್ನಡದ ಜತೆಗೆ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲೂ ತೆರೆಗೆ ಬರುತ್ತಿದೆ. ಹೀಗಾಗಿ, ಟೀಸರ್ ಕೂಡ ಐದು ಭಾಷೆಗಳಲ್ಲಿ ರಿಲೀಸ್​ ಆಗುತ್ತಿದೆ.

ರಕ್ಷಿತ್​ ಶೆಟ್ಟಿ ಜನ್ಮದಿನ; ‘777 ಚಾರ್ಲಿ’ ಟೀಸರ್​ ರಿಲೀಸ್​ ಮಾಡೋಕೆ ಬಂದ ಪರಭಾಷೆಯ ಸ್ಟಾರ್​ಗಳು
777 ಚಾರ್ಲಿ ಸಿನಿಮಾದಲ್ಲಿ ರಕ್ಷಿತ್
Follow us
|

Updated on:Jun 06, 2021 | 9:59 AM

ರಕ್ಷಿತ್​ ಶೆಟ್ಟಿ ಅವರ ಖ್ಯಾತಿ ಕೇವಲ ಕನ್ನಡಕ್ಕೆ ಮಾತ್ರ ಸೀಮಿತವಾಗಿಲ್ಲ. ಪರಭಾಷೆಯ ನಟರು ರಕ್ಷಿತ್​ ಶೆಟ್ಟಿಯ ಕೆಲಸವನ್ನು ಮೆಚ್ಚಿಕೊಂಡಿದ್ದಾರೆ. ರಕ್ಷಿತ್​ ನಟಿಸಿ, ನಿರ್ದೇಶಿಸಿದ್ದ ‘ಉಳಿದವರು ಕಂಡಂತೆ’ ಸಿನಿಮಾ ತಮಿಳಿಗೆ ರಿಮೇಕ್​ ಆಗಿತ್ತು. ಜೂನ್ 6ರಂದು ರಕ್ಷಿತ್​ ಜನ್ಮದಿನ. ಈ ವಿಶೇಷ ದಿನದಂದು ‘777 ಚಾರ್ಲಿ’ ಟೀಸರ್ ರಿಲೀಸ್​ ಆಗುತ್ತಿದೆ. ಪರ ಭಾಷೆಯ ಸ್ಟಾರ್​ ನಟರು ಟೀಸರ್​ ರಿಲೀಸ್​ ಮಾಡುತ್ತಿರುವುದು ವಿಶೇಷ.

‘777 ಚಾರ್ಲಿ’ ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು, ಕನ್ನಡದ ಜತೆಗೆ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲೂ ತೆರೆಗೆ ಬರುತ್ತಿದೆ. ಹೀಗಾಗಿ, ಟೀಸರ್ ಕೂಡ ಐದು ಭಾಷೆಗಳಲ್ಲಿ ರಿಲೀಸ್​ ಆಗುತ್ತಿದೆ. ತೆಲುಗಿನಲ್ಲಿ ನ್ಯಾಚುರಲ್​ ಸ್ಟಾರ್​ ನಾನಿ ಟೀಸರ್​ ರಿಲೀಸ್​ ಮಾಡುತ್ತಿದ್ದಾರೆ. ಖ್ಯಾತ ನಿರ್ದೇಶಕ ಕಾರ್ತಿಕ್​ ಸುಬ್ಬರಾಜ್​ ಅವರು ತಮಿಳಿನಲ್ಲಿ ಈ ಸಿನಿಮಾದ ಟೀಸರ್​ ಬಿಡುಗಡೆ ಮಾಡಲಿದ್ದಾರೆ. ಪೃಥ್ವಿರಾಜ್​ ಹಸ್ತದಿಂದ ಮಲಯಾಳಂನಲ್ಲಿ ಟೀಸರ್​ ಬಿಡುಗಡೆಗೊಳ್ಳಲಿದೆ. ಹಿಂದಿ ಮತ್ತು ಕನ್ನಡ ಟೀಸರ್​ಗಳು ಪರಮ್​ವಾ ಸ್ಟುಡಿಯೋ ಮೂಲಕ ರಿಲೀಸ್​ ಆಗುತ್ತಿದೆ.

ಇನ್ನು, ಮಲಯಾಳಂ ವಲಯದಲ್ಲೂ ‘777 ಚಾರ್ಲಿ’ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈ ಕಾರಣಕ್ಕೆ, ಪೃಥ್ವಿರಾಜ್​, ಕುಂಜಾಕ್ಕೊ ಬೋಬನ್​, ನಿವೀನ್ ಪೌಲಿ, ಟೊವಿನೋ ಥಾಮಸ್​, ಉಣ್ಣಿ ಮುಕುಂದನ್​, ಅನ್ನಾ ಬೆನ್​, ನಿಖಿಲಾ ವಿಮಲ್​, ಆಂಟನಿ ವರ್ಗೀಸ್ ಟೀಸರ್​ ಹಂಚಿಕೊಂಡು, ಅದರ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಳ್ಳಲಿದ್ದಾರೆ. ಸದ್ಯ, ಈ ವಿಚಾರ ಕೇಳಿದ ಅಭಿಮಾನಿಗಳು ಸಾಕಷ್ಟು ಖುಷಿಯಾಗಿದ್ದಾರೆ. ಮಲಯಾಳಂ ಖ್ಯಾತ ಗಾಯಕ ವಿನೀಥ್​ ಶ್ರೀನಿವಾಸನ್​ ಅವರು ‘777 ಚಾರ್ಲಿ’ ಮಲಯಾಳಂ ಮತ್ತು ಕನ್ನಡ ಅವತರಣಿಕೆ ಹಾಡನ್ನು ಹಾಡಿದ್ದಾರೆ.

‘777 ಚಾರ್ಲಿ’ ಸಿನಿಮಾದಲ್ಲಿ ಶ್ವಾನ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈಗಾಗಲೇ ಸಿನಿಮಾ ತಂಡದಿಂದ ಸಾಕಷ್ಟು ಪೋಸ್ಟರ್​ ರಿಲೀಸ್​ ಆಗಿದ್ದು, ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ. ಚಿತ್ರದಲ್ಲಿ ರಕ್ಷಿತ್​ ಹಾಗೂ ಶ್ವಾನದ ಕಾಂಬಿನೇಷನ್​ ಪ್ರೇಕ್ಷಕರಿಗೆ ಇಷ್ಟವಾಗುವ ಎಲ್ಲಾ ಸಾಧ್ಯತೆ ಇದೆ. 777 ಚಾರ್ಲಿ ತಂಡ ಪೋಸ್ಟ್​ ಪ್ರೊಡಕ್ಷನ್​ ಪೂರ್ಣಗೊಳಿಸುವ ಹಂತದಲ್ಲಿದೆ. ಡಬ್ಬಿಂಗ್​ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಶೀಘ್ರವೇ ಸಿದ್ಧಗೊಳ್ಳಲಿದೆ. 777 ಚಾರ್ಲಿ ಸಿನಿಮಾಕ್ಕೆ ಸುಮಾರು 160 ದಿನಗಳ ಕಾಲ ಶೂಟಿಂಗ್​ ಮಾಡಲಾಗಿದೆ. ಶ್ವಾನದ ಮೂಡ್ ನೋಡಿಕೊಂಡು ಶೂಟ್​ ಮಾಡಬೇಕಾದ ಪರಿಸ್ಥಿತಿ ಇದ್ದಿದ್ದರಿಂದ ಶೂಟಿಂಗ್​ಗೆ ಹೆಚ್ಚು ದಿನ ಹಿಡಿದಿದೆ.

ಕಿರಣ್​ ರಾಜ್​ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಕ್ಷಿತ್​ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ. ಶೆಟ್ಟಿ, ದಾನಿಶ್​ ಸೇಟ್​ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ. ಪರಮ್​ವಾ ಸ್ಟುಡಿಯೋ ಬ್ಯಾನರ್​ ಅಡಿಯಲ್ಲಿ ಚಿತ್ರ ಮೂಡಿ ಬರುತ್ತಿದೆ.

ಇದನ್ನೂ ಓದಿ: Rakshit Shetty: ರಕ್ಷಿತ್​ ಶೆಟ್ಟಿ ಬರ್ತ್​ಡೇಗೆ ಸಿಗುತ್ತಿದೆ ವಿಶೇಷ ಗಿಫ್ಟ್​; ಐದು ಭಾಷೆಗಳಲ್ಲಿ 777 ಚಾರ್ಲಿ ಟೀಸರ್​

Published On - 3:56 pm, Sat, 5 June 21

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?