AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಿಚರ್ಡ್ ಆಂಟೊನಿ’ ಸಿನಿಮಾ ನಿಂತು ಹೋಯ್ತೆ? ರಕ್ಷಿತ್ ಹೇಳಿದ್ದೇನು?

Rakshit Shetty movie: ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ಸಿನಿಮಾಗಳ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್​​ಗಳಾಗಿದ್ದಾರೆ. ಆದರೆ ಅವರ ಗೆಳೆಯ ರಕ್ಷಿತ್ ಶೆಟ್ಟಿ ಮಾತ್ರ ಯಾಕೋ ಒಂದು ಸಿನಿಮಾ ಮಾಡಲು ವರ್ಷಾನುಗಟ್ಟಲೆ ಸಮಯ ತೆಗೆದುಕೊಳ್ಳುತ್ತಿದ್ದಾರೆ. ರಕ್ಷಿತ್ ಘೋಷಿಸಿದ್ದ ‘ರಿಚರ್ಡ್ ಆಂಟೊನಿ’ ಸಿನಿಮಾ ನಿಂತೇ ಹೋಯ್ತು ಎನ್ನಲಾಗುತ್ತಿರುವ ಸಮಯದಲ್ಲಿಯೇ ಸಿನಿಮಾ ಬಗ್ಗೆ ರಕ್ಷಿತ್ ಶೆಟ್ಟಿ ಮಾತನಾಡಿದ್ದಾರೆ.

‘ರಿಚರ್ಡ್ ಆಂಟೊನಿ’ ಸಿನಿಮಾ ನಿಂತು ಹೋಯ್ತೆ? ರಕ್ಷಿತ್ ಹೇಳಿದ್ದೇನು?
Rakshit Shetty
ಮಂಜುನಾಥ ಸಿ.
| Edited By: |

Updated on:Sep 05, 2025 | 3:28 PM

Share

ಕನ್ನಡ ಚಿತ್ರರಂಗಕ್ಕೆ ಶೆಟ್ಟಿ ಗ್ಯಾಂಗ್ ಹೊಸ ನೀರು ತಂದಿದೆ. ಹೊಸ ರೀತಿಯ ಪ್ರಯತ್ನಗಳನ್ನು ಮಾಡುತ್ತಾ ಕೆಲ ಒಳ್ಳೆಯ ಸಿನಿಮಾಗಳನ್ನು ಚಿತ್ರರಂಗಕ್ಕೆ ನೀಡುತ್ತಿದೆ. ಆದರೆ ಪ್ರಸ್ತುತ ಈ ಶೆಟ್ಟಿ ಗ್ಯಾಂಗ್​​ನಲ್ಲಿ ಹೆಚ್ಚು ಸಕ್ರಿಯರಾಗಿರುವುದು ರಿಷಬ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿ. ಆದರೆ ಈ ಶೆಟ್ಟಿ ಗ್ಯಾಂಗ್​​ನ ಮೂಲ ಪುರುಷ ರಕ್ಷಿತ್ ಶೆಟ್ಟಿ ಯಾಕೋ ತುಸು ಮಂಕಾಗಿದ್ದಾರೆ.

‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದಂಥಹಾ ಕಲ್ಟ್ ಸಿನಿಮಾನಲ್ಲಿ ನಟಿಸಿದ ರಕ್ಷಿತ್ ಶೆಟ್ಟಿ ಆ ನಂತರ ಕಾಣೆಯೇ ಆಗಿಬಿಟ್ಟಿದ್ದಾರೆ. ತಾವು ಇನ್ನು ಮುಂದೆ ಸಿನಿಮಾ ನಿರ್ದೇಶನದ ಮೇಲೆ ಹೆಚ್ಚು ಗಮನಹರಿಸುವುದಾಗಿ ರಕ್ಷಿತ್ ಹೇಳಿದ್ದರು. ಆದರೆ ಅವರು ತಮ್ಮ ಸಿನಿಮಾ ‘ರಿಚರ್ಡ್ ಆಂಟೊನಿ’ ಘೋಷಣೆ ಮಾಡಿ ವರ್ಷಗಳೇ ಕಳೆದು ಹೋಗಿವೆ. ಅದರ ಬಗ್ಗೆ ಸಣ್ಣ ಅಪ್​ಡೇಟ್ ಸಹ ಇಲ್ಲ.

ರಕ್ಷಿತ್ ಶೆಟ್ಟಿ ನಿರ್ದೇಶನ ಮಾಡಿದ್ದ ಕಲ್ಟ್ ಸಿನಿಮಾ ‘ಉಳಿದವರು ಕಂಡಂತೆ’ಯ ರಿಚ್ಚಿ ಪಾತ್ರವನ್ನೇ ಇರಿಸಿಕೊಂಡು ‘ರಿಚರ್ಡ್ ಆಂಟೊನಿ’ ಸಿನಿಮಾ ಮಾಡಲು ರಕ್ಷಿತ್ ಮುಂದಾಗಿದ್ದರು. ಸಿನಿಮಾದ ಘೋಷಣೆ ಆಗಿ ನಾಲ್ಕು ವರ್ಷಗಳಾಗಿವೆ. ಸಿನಿಮಾಕ್ಕೆ ಹೊಂಬಾಳೆ ಫಿಲಮ್ಸ್ ಬಂಡವಾಳ ತೊಡಗಿಸುತ್ತಿದ್ದಾರೆ. ಆದರೆ ಸಿನಿಮಾದ ಶೂಟಿಂಗ್ ಶುರುವಾಗಿರುವುದು ಸಹ ಅನುಮಾನವೇ. ಏಕೆಂದರೆ ಸಿನಿಮಾದ ಒಂದೇ ಒಂದು ಅಪ್​ಡೇಟ್ ಸಹ ಹೊರಬಿದ್ದಿಲ್ಲ. ಹಾಗಾಗಿ ಸಿನಿಮಾ ನಿಂತು ಹೋಗಿದೆ, ಹೊಂಬಾಳೆ ಫಿಲಮ್ಸ್ ಸಿನಿಮಾದಿಂದ ಹಿಂದೆ ಸರಿದಿದೆ ಎಂಬ ಸುದ್ದಿಗಳು ಹರಿದಾಡಲು ಆರಂಭವಾಗಿತ್ತು.

ಇದನ್ನೂ ಓದಿ:ರಕ್ಷಿತ್ ಶೆಟ್ಟಿ ಜನ್ಮದಿನ: ನಟನ ಎದುರು ಇರೋ ಪ್ರಶ್ನೆಗೆ ಸಿಗುತ್ತಾ ಉತ್ತರ?

ಆದರೆ ಇದೀಗ ರಕ್ಷಿತ್ ಶೆಟ್ಟಿ ಈ ಬಗ್ಗೆ ಉತ್ತರಿಸಿದ್ದಾರೆ. ಅಮೆರಿಕದಲ್ಲಿ ನಡೆದ ನಾವಿಕ ಕನ್ನಡಿಗ ಸಮ್ಮೇಳನದಲ್ಲಿ ಮಾತನಾಡಿದ ರಕ್ಷಿತ್ ಶೆಟ್ಟಿ, ‘ಕೆಲವೊಮ್ಮೆ ದೊಡ್ಡ ಕೆಲಸ ಮಾಡುವಾಗ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ’ ಎಂದಿದ್ದಾರೆ. ಅಸಲಿಗೆ ರಕ್ಷಿತ್ ವೇದಿಕೆ ಮೇಲೆ ಕನ್ನಡ ಭಾಷೆಯ ಮಹತ್ವ, ಪ್ರೀತಿ ಇನ್ನಿತರೆ ವಿಷಯಗಳ ಬಗ್ಗೆ ಮಾತನಾಡಿದರು. ಭಾಷಣ ಮುಗಿದ ಬಳಿಕ ನೆರೆದಿದ್ದ ಜನ ‘ರಿಚರ್ಡ್ ಆಂಟೊನಿ’ ಸಿನಿಮಾ ಬಗ್ಗೆ ಪ್ರಶ್ನೆ ಮಾಡಿದಾಗ ಮತ್ತೆ ಮೈಕ್ ಹಿಡಿದು ಮೇಲಿನಂತೆ ಹೇಳಿದರು.

ಈಗಾಗಲೇ ಸಿನಿಮಾ ಘೋಷಣೆ ಮಾಡಿ ನಾಲ್ಕು ವರ್ಷಗಳಾಗಿವೆ. ಆಗಲೇ ಅವರು ಹೇಳಿದ್ದಂತೆ ಕತೆ ರೆಡಿಯಿತ್ತು ಆದರೂ ಸಹ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿಲ್ಲ. ಸಿನಿಮಾದ ಕತೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ರಕ್ಷಿತ್ ಮಾಡಿದ್ದು, ಸಿನಿಮಾ ಅನ್ನು ಅಂತರಾಷ್ಟ್ರೀಯ ಗುಣಮಟ್ಟದಲ್ಲಿ ಕಟ್ಟಲು ರಕ್ಷಿತ್ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:09 am, Thu, 4 September 25

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ