AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಪಿರೈಟ್ ಉಲ್ಲಂಘನೆ ಕೇಸ್: 20 ಲಕ್ಷ ರೂ ಠೇವಣಿ ಇಡುವಂತೆ ರಕ್ಷಿತ್​ ಶೆಟ್ಟಿಗೆ ಕೋರ್ಟ್​ ಆದೇಶ

‘ಬ್ಯಾಚುಲರ್​ ಪಾರ್ಟಿ’ ಸಿನಿಮಾದಲ್ಲಿ ಎರಡು ಹಾಡುಗಳನ್ನು ಬಳಸಿದ್ದಕ್ಕೆ ನಿರ್ಮಾಪಕ ರಕ್ಷಿತ್​ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ರಕ್ಷಿತ್​ ಶೆಟ್ಟಿ ಅವರ ‘ಪರಂವಾ ಸ್ಟುಡಿಯೋಸ್​’ ವಿರುದ್ಧ ‘ಎಂಆರ್​ಟಿ ಮ್ಯೂಸಿಕ್​’ ಕಂಪನಿ ಕೇಸ್​ ದಾಖಲಿಸಿದ್ದು, ಕಾನೂನಿನ ಸಮರ ನಡೆಯುತ್ತಿದೆ. ದೆಹಲಿ ಹೈಕೋರ್ಟ್​ ನೀಡಿದ ಆದೇಶದ ಬಗ್ಗೆ ‘ಎಂಆರ್​ಟಿ ಮ್ಯೂಸಿಕ್​’ ಮಾಹಿತಿ ಹಂಚಿಕೊಂಡಿದೆ.

ಕಾಪಿರೈಟ್ ಉಲ್ಲಂಘನೆ ಕೇಸ್: 20 ಲಕ್ಷ ರೂ ಠೇವಣಿ ಇಡುವಂತೆ ರಕ್ಷಿತ್​ ಶೆಟ್ಟಿಗೆ ಕೋರ್ಟ್​ ಆದೇಶ
ರಕ್ಷಿತ್​ ಶೆಟ್ಟಿ
ಮಾಲತೇಶ ಜಗ್ಗೀನ್
| Edited By: |

Updated on: Aug 17, 2024 | 8:34 PM

Share

ನಟ, ನಿರ್ಮಾಪಕ ರಕ್ಷಿತ್​ ಶೆಟ್ಟಿ ಹಾಗೂ ‘ಎಂಆರ್​ಟಿ ಮ್ಯೂಸಿಕ್​’ ಕಂಪನಿ ನಡುವಿನ ಕಾನೂನು ಜಟಾಪಟಿ ಮುಂದುವರಿದಿದೆ. ರಕ್ಷಿತ್ ಶೆಟ್ಟಿ ಅವರು ‘ಪರಂವಾ ಸ್ಟುಡಿಯೋಸ್​’ ಮೂಲಕ ನಿರ್ಮಾಣ ಮಾಡಿದ ‘ಬ್ಯಾಚುಲರ್​ ಪಾರ್ಟಿ’ ಸಿನಿಮಾದಲ್ಲಿ ‘ಎಂಆರ್​ಟಿ ಮ್ಯೂಸಿಕ್​’ ಸಂಸ್ಥೆಗೆ ಸೇರಿದ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ಬಳಕೆ ಮಾಡಿಕೊಂಡಿದ್ದಕ್ಕೆ ಕೇಸ್​ ಹಾಕಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್​ ಆದೇಶ ನೀಡಿದೆ. ಕೋರ್ಟ್​ನಲ್ಲಿ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ರಕ್ಷಿತ್​ ಶೆಟ್ಟಿ ಹಾಗೂ ‘ಪರಂವಾ ಸ್ಟುಡಿಯೋಸ್​’ ಸಂಸ್ಥೆಗೆ ಸೂಚಿಸಲಾಗಿದೆ.

ದೆಹಲಿ ಹೈಕೋರ್ಟ್​ ನೀಡಿರುವ ಆದೇಶಕ್ಕೆ ಸಂಬಂಧಿಸಿದಂತೆ ‘ಎಂಆರ್​ಟಿ ಮ್ಯೂಸಿಕ್​’ ಕಂಪನಿಯು ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದೆ. ‘ಬ್ಯಾಚುಲರ್​ ಪಾರ್ಟಿ’ ಕನ್ನಡ ಸಿನಿಮಾ ಈ ವರ್ಷ ಜನವರಿಯಲ್ಲಿ ರಿಲೀಸ್ ಆಗಿತ್ತು. ಆ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ..’ ಹಾಗೂ ‘ಒಮ್ಮೆ ನಿನ್ನನ್ನು..’ ಹಾಡುಗಳನ್ನು ಬಳಕೆ ಮಾಡಿಕೊಂಡಿದ್ದಕ್ಕೆ ‘ಎಂಆರ್​ಟಿ ಮ್ಯೂಸಿಕ್​’ ಕೇಸ್​ ದಾಖಲಿಸಿತ್ತು.

ಕಾಪಿರೈಟ್​ ಉಲ್ಲಂಘನೆ ಆರೋಪಕ್ಕೆ ನ್ಯಾಯಾಲಯದಲ್ಲೇ ಉತ್ತರ ನೀಡುವುದಾಗಿ ರಕ್ಷಿತ್​ ಶೆಟ್ಟಿ ಅವರು ನಿರ್ಧರಿಸಿದ್ದರು. ಆ ಕುರಿತು ಜನರಿಗೆ ಮಾಹಿತಿ ನೀಡುವ ಸಲುವಾಗಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದರು. ಸಿನಿಮಾದಲ್ಲಿ ಆ ಎರಡು ಹಾಡುಗಳು ಹೀಗೆ ಬಳಕೆ ಆಗಿದ್ದವು ಎಂಬುದನ್ನು ತಿಳಿಸಲು ಅವರು ವಿಡಿಯೋ ತುಣುಕನ್ನು ಹಂಚಿಕೊಂಡಿದ್ದರು. ಅದನ್ನು ತೆಗೆಯುವಂತೆ ಕೋರ್ಟ್​ ಆದೇಶಿಸಿದೆ.

‘ಸಿನಿಮಾದಲ್ಲಿ ಹಾಡುಗಳನ್ನು ಅನುಮತಿ ಇಲ್ಲದೇ ಬಳಕೆ ಮಾಡಿದ್ದು ಮಾತ್ರವಲ್ಲದೇ ಆ ಹಾಡಿನ ತುಣುಕುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುವ ಮೂಲಕ ರಕ್ಷಿತ್​ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಸ್​ ಕಡೆಯಿಂದ ಮತ್ತೊಮ್ಮೆ ಕಾಪಿರೈಟ್​ ಉಲ್ಲಂಘನೆ ಆಗಿದೆ’ ಎಂದು ಎಂಆರ್​ಟಿ ಮ್ಯೂಸಿಕ್​ ಕಂಪನಿಯು ನ್ಯಾಯಾಲಯದಲ್ಲಿ ವಾದ ಮಂಡಿಸಿದೆ. ಮುಂಚಿತವಾಗಿ ನೋಟಿಸ್​ ನೀಡಿದ್ದರೂ ಕೂಡ ರಕ್ಷಿತ್​ ಶೆಟ್ಟಿ ಅಥವಾ ಪರಂವಾ ಸ್ಟುಡಿಯೋಸ್​ನವರು ವಿಚಾರಣೆಗಾಗಿ ಕೋರ್ಟ್​ಗೆ ಹಾಜರಾಗಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಕಾಪಿರೈಟ್​ ಕೇಸ್​; ಕೋರ್ಟ್​ನಲ್ಲೇ ಇತ್ಯರ್ಥ ಮಾಡಿಕೊಳ್ಳಲು ರಕ್ಷಿತ್​ ಶೆಟ್ಟಿ ನಿರ್ಧಾರ

ನಿರ್ಮಾಪಕನಾಗಿ ರಕ್ಷಿತ್​ ಶೆಟ್ಟಿ ಅವರು ಸಕ್ರಿಯರಾಗಿದ್ದಾರೆ. ಈ ಮೊದಲು ಕೂಡ ಹಾಡುಗಳಿಗೆ ಸಂಬಂಧಿಸಿದಂತೆ ಅವರು ಕೋರ್ಟ್​ ಮೆಟ್ಟಿಲು ಏರಿದ್ದರು. ಪದೇಪದೇ ಈ ರೀತಿ ಕೇಸ್​ ದಾಖಲಾಗುತ್ತಿರುವುದರಿಂದ ಕಾಪಿರೈಟ್​ ಬಗ್ಗೆ ಸ್ಪಷ್ಟತೆ ಸಿಗಲಿ ಎಂಬ ಉದ್ದೇಶ ರಕ್ಷಿತ್ ಶೆಟ್ಟಿ ಅವರದ್ದು. ಈಗ ದೆಹಲಿ ಕೋರ್ಟ್​ ಆದೇಶದ ಬಗ್ಗೆ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್