AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಪಿರೈಟ್ ಉಲ್ಲಂಘನೆ ಕೇಸ್: 20 ಲಕ್ಷ ರೂ ಠೇವಣಿ ಇಡುವಂತೆ ರಕ್ಷಿತ್​ ಶೆಟ್ಟಿಗೆ ಕೋರ್ಟ್​ ಆದೇಶ

‘ಬ್ಯಾಚುಲರ್​ ಪಾರ್ಟಿ’ ಸಿನಿಮಾದಲ್ಲಿ ಎರಡು ಹಾಡುಗಳನ್ನು ಬಳಸಿದ್ದಕ್ಕೆ ನಿರ್ಮಾಪಕ ರಕ್ಷಿತ್​ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ರಕ್ಷಿತ್​ ಶೆಟ್ಟಿ ಅವರ ‘ಪರಂವಾ ಸ್ಟುಡಿಯೋಸ್​’ ವಿರುದ್ಧ ‘ಎಂಆರ್​ಟಿ ಮ್ಯೂಸಿಕ್​’ ಕಂಪನಿ ಕೇಸ್​ ದಾಖಲಿಸಿದ್ದು, ಕಾನೂನಿನ ಸಮರ ನಡೆಯುತ್ತಿದೆ. ದೆಹಲಿ ಹೈಕೋರ್ಟ್​ ನೀಡಿದ ಆದೇಶದ ಬಗ್ಗೆ ‘ಎಂಆರ್​ಟಿ ಮ್ಯೂಸಿಕ್​’ ಮಾಹಿತಿ ಹಂಚಿಕೊಂಡಿದೆ.

ಕಾಪಿರೈಟ್ ಉಲ್ಲಂಘನೆ ಕೇಸ್: 20 ಲಕ್ಷ ರೂ ಠೇವಣಿ ಇಡುವಂತೆ ರಕ್ಷಿತ್​ ಶೆಟ್ಟಿಗೆ ಕೋರ್ಟ್​ ಆದೇಶ
ರಕ್ಷಿತ್​ ಶೆಟ್ಟಿ
Malatesh Jaggin
| Edited By: |

Updated on: Aug 17, 2024 | 8:34 PM

Share

ನಟ, ನಿರ್ಮಾಪಕ ರಕ್ಷಿತ್​ ಶೆಟ್ಟಿ ಹಾಗೂ ‘ಎಂಆರ್​ಟಿ ಮ್ಯೂಸಿಕ್​’ ಕಂಪನಿ ನಡುವಿನ ಕಾನೂನು ಜಟಾಪಟಿ ಮುಂದುವರಿದಿದೆ. ರಕ್ಷಿತ್ ಶೆಟ್ಟಿ ಅವರು ‘ಪರಂವಾ ಸ್ಟುಡಿಯೋಸ್​’ ಮೂಲಕ ನಿರ್ಮಾಣ ಮಾಡಿದ ‘ಬ್ಯಾಚುಲರ್​ ಪಾರ್ಟಿ’ ಸಿನಿಮಾದಲ್ಲಿ ‘ಎಂಆರ್​ಟಿ ಮ್ಯೂಸಿಕ್​’ ಸಂಸ್ಥೆಗೆ ಸೇರಿದ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ಬಳಕೆ ಮಾಡಿಕೊಂಡಿದ್ದಕ್ಕೆ ಕೇಸ್​ ಹಾಕಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್​ ಆದೇಶ ನೀಡಿದೆ. ಕೋರ್ಟ್​ನಲ್ಲಿ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ರಕ್ಷಿತ್​ ಶೆಟ್ಟಿ ಹಾಗೂ ‘ಪರಂವಾ ಸ್ಟುಡಿಯೋಸ್​’ ಸಂಸ್ಥೆಗೆ ಸೂಚಿಸಲಾಗಿದೆ.

ದೆಹಲಿ ಹೈಕೋರ್ಟ್​ ನೀಡಿರುವ ಆದೇಶಕ್ಕೆ ಸಂಬಂಧಿಸಿದಂತೆ ‘ಎಂಆರ್​ಟಿ ಮ್ಯೂಸಿಕ್​’ ಕಂಪನಿಯು ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದೆ. ‘ಬ್ಯಾಚುಲರ್​ ಪಾರ್ಟಿ’ ಕನ್ನಡ ಸಿನಿಮಾ ಈ ವರ್ಷ ಜನವರಿಯಲ್ಲಿ ರಿಲೀಸ್ ಆಗಿತ್ತು. ಆ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ..’ ಹಾಗೂ ‘ಒಮ್ಮೆ ನಿನ್ನನ್ನು..’ ಹಾಡುಗಳನ್ನು ಬಳಕೆ ಮಾಡಿಕೊಂಡಿದ್ದಕ್ಕೆ ‘ಎಂಆರ್​ಟಿ ಮ್ಯೂಸಿಕ್​’ ಕೇಸ್​ ದಾಖಲಿಸಿತ್ತು.

ಕಾಪಿರೈಟ್​ ಉಲ್ಲಂಘನೆ ಆರೋಪಕ್ಕೆ ನ್ಯಾಯಾಲಯದಲ್ಲೇ ಉತ್ತರ ನೀಡುವುದಾಗಿ ರಕ್ಷಿತ್​ ಶೆಟ್ಟಿ ಅವರು ನಿರ್ಧರಿಸಿದ್ದರು. ಆ ಕುರಿತು ಜನರಿಗೆ ಮಾಹಿತಿ ನೀಡುವ ಸಲುವಾಗಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದರು. ಸಿನಿಮಾದಲ್ಲಿ ಆ ಎರಡು ಹಾಡುಗಳು ಹೀಗೆ ಬಳಕೆ ಆಗಿದ್ದವು ಎಂಬುದನ್ನು ತಿಳಿಸಲು ಅವರು ವಿಡಿಯೋ ತುಣುಕನ್ನು ಹಂಚಿಕೊಂಡಿದ್ದರು. ಅದನ್ನು ತೆಗೆಯುವಂತೆ ಕೋರ್ಟ್​ ಆದೇಶಿಸಿದೆ.

‘ಸಿನಿಮಾದಲ್ಲಿ ಹಾಡುಗಳನ್ನು ಅನುಮತಿ ಇಲ್ಲದೇ ಬಳಕೆ ಮಾಡಿದ್ದು ಮಾತ್ರವಲ್ಲದೇ ಆ ಹಾಡಿನ ತುಣುಕುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುವ ಮೂಲಕ ರಕ್ಷಿತ್​ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಸ್​ ಕಡೆಯಿಂದ ಮತ್ತೊಮ್ಮೆ ಕಾಪಿರೈಟ್​ ಉಲ್ಲಂಘನೆ ಆಗಿದೆ’ ಎಂದು ಎಂಆರ್​ಟಿ ಮ್ಯೂಸಿಕ್​ ಕಂಪನಿಯು ನ್ಯಾಯಾಲಯದಲ್ಲಿ ವಾದ ಮಂಡಿಸಿದೆ. ಮುಂಚಿತವಾಗಿ ನೋಟಿಸ್​ ನೀಡಿದ್ದರೂ ಕೂಡ ರಕ್ಷಿತ್​ ಶೆಟ್ಟಿ ಅಥವಾ ಪರಂವಾ ಸ್ಟುಡಿಯೋಸ್​ನವರು ವಿಚಾರಣೆಗಾಗಿ ಕೋರ್ಟ್​ಗೆ ಹಾಜರಾಗಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಕಾಪಿರೈಟ್​ ಕೇಸ್​; ಕೋರ್ಟ್​ನಲ್ಲೇ ಇತ್ಯರ್ಥ ಮಾಡಿಕೊಳ್ಳಲು ರಕ್ಷಿತ್​ ಶೆಟ್ಟಿ ನಿರ್ಧಾರ

ನಿರ್ಮಾಪಕನಾಗಿ ರಕ್ಷಿತ್​ ಶೆಟ್ಟಿ ಅವರು ಸಕ್ರಿಯರಾಗಿದ್ದಾರೆ. ಈ ಮೊದಲು ಕೂಡ ಹಾಡುಗಳಿಗೆ ಸಂಬಂಧಿಸಿದಂತೆ ಅವರು ಕೋರ್ಟ್​ ಮೆಟ್ಟಿಲು ಏರಿದ್ದರು. ಪದೇಪದೇ ಈ ರೀತಿ ಕೇಸ್​ ದಾಖಲಾಗುತ್ತಿರುವುದರಿಂದ ಕಾಪಿರೈಟ್​ ಬಗ್ಗೆ ಸ್ಪಷ್ಟತೆ ಸಿಗಲಿ ಎಂಬ ಉದ್ದೇಶ ರಕ್ಷಿತ್ ಶೆಟ್ಟಿ ಅವರದ್ದು. ಈಗ ದೆಹಲಿ ಕೋರ್ಟ್​ ಆದೇಶದ ಬಗ್ಗೆ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್