AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಪಿರೈಟ್ ಉಲ್ಲಂಘನೆ ಕೇಸ್: 20 ಲಕ್ಷ ರೂ ಠೇವಣಿ ಇಡುವಂತೆ ರಕ್ಷಿತ್​ ಶೆಟ್ಟಿಗೆ ಕೋರ್ಟ್​ ಆದೇಶ

‘ಬ್ಯಾಚುಲರ್​ ಪಾರ್ಟಿ’ ಸಿನಿಮಾದಲ್ಲಿ ಎರಡು ಹಾಡುಗಳನ್ನು ಬಳಸಿದ್ದಕ್ಕೆ ನಿರ್ಮಾಪಕ ರಕ್ಷಿತ್​ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ರಕ್ಷಿತ್​ ಶೆಟ್ಟಿ ಅವರ ‘ಪರಂವಾ ಸ್ಟುಡಿಯೋಸ್​’ ವಿರುದ್ಧ ‘ಎಂಆರ್​ಟಿ ಮ್ಯೂಸಿಕ್​’ ಕಂಪನಿ ಕೇಸ್​ ದಾಖಲಿಸಿದ್ದು, ಕಾನೂನಿನ ಸಮರ ನಡೆಯುತ್ತಿದೆ. ದೆಹಲಿ ಹೈಕೋರ್ಟ್​ ನೀಡಿದ ಆದೇಶದ ಬಗ್ಗೆ ‘ಎಂಆರ್​ಟಿ ಮ್ಯೂಸಿಕ್​’ ಮಾಹಿತಿ ಹಂಚಿಕೊಂಡಿದೆ.

ಕಾಪಿರೈಟ್ ಉಲ್ಲಂಘನೆ ಕೇಸ್: 20 ಲಕ್ಷ ರೂ ಠೇವಣಿ ಇಡುವಂತೆ ರಕ್ಷಿತ್​ ಶೆಟ್ಟಿಗೆ ಕೋರ್ಟ್​ ಆದೇಶ
ರಕ್ಷಿತ್​ ಶೆಟ್ಟಿ
ಮಾಲತೇಶ ಜಗ್ಗೀನ್
| Edited By: |

Updated on: Aug 17, 2024 | 8:34 PM

Share

ನಟ, ನಿರ್ಮಾಪಕ ರಕ್ಷಿತ್​ ಶೆಟ್ಟಿ ಹಾಗೂ ‘ಎಂಆರ್​ಟಿ ಮ್ಯೂಸಿಕ್​’ ಕಂಪನಿ ನಡುವಿನ ಕಾನೂನು ಜಟಾಪಟಿ ಮುಂದುವರಿದಿದೆ. ರಕ್ಷಿತ್ ಶೆಟ್ಟಿ ಅವರು ‘ಪರಂವಾ ಸ್ಟುಡಿಯೋಸ್​’ ಮೂಲಕ ನಿರ್ಮಾಣ ಮಾಡಿದ ‘ಬ್ಯಾಚುಲರ್​ ಪಾರ್ಟಿ’ ಸಿನಿಮಾದಲ್ಲಿ ‘ಎಂಆರ್​ಟಿ ಮ್ಯೂಸಿಕ್​’ ಸಂಸ್ಥೆಗೆ ಸೇರಿದ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ಬಳಕೆ ಮಾಡಿಕೊಂಡಿದ್ದಕ್ಕೆ ಕೇಸ್​ ಹಾಕಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್​ ಆದೇಶ ನೀಡಿದೆ. ಕೋರ್ಟ್​ನಲ್ಲಿ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ರಕ್ಷಿತ್​ ಶೆಟ್ಟಿ ಹಾಗೂ ‘ಪರಂವಾ ಸ್ಟುಡಿಯೋಸ್​’ ಸಂಸ್ಥೆಗೆ ಸೂಚಿಸಲಾಗಿದೆ.

ದೆಹಲಿ ಹೈಕೋರ್ಟ್​ ನೀಡಿರುವ ಆದೇಶಕ್ಕೆ ಸಂಬಂಧಿಸಿದಂತೆ ‘ಎಂಆರ್​ಟಿ ಮ್ಯೂಸಿಕ್​’ ಕಂಪನಿಯು ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದೆ. ‘ಬ್ಯಾಚುಲರ್​ ಪಾರ್ಟಿ’ ಕನ್ನಡ ಸಿನಿಮಾ ಈ ವರ್ಷ ಜನವರಿಯಲ್ಲಿ ರಿಲೀಸ್ ಆಗಿತ್ತು. ಆ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ..’ ಹಾಗೂ ‘ಒಮ್ಮೆ ನಿನ್ನನ್ನು..’ ಹಾಡುಗಳನ್ನು ಬಳಕೆ ಮಾಡಿಕೊಂಡಿದ್ದಕ್ಕೆ ‘ಎಂಆರ್​ಟಿ ಮ್ಯೂಸಿಕ್​’ ಕೇಸ್​ ದಾಖಲಿಸಿತ್ತು.

ಕಾಪಿರೈಟ್​ ಉಲ್ಲಂಘನೆ ಆರೋಪಕ್ಕೆ ನ್ಯಾಯಾಲಯದಲ್ಲೇ ಉತ್ತರ ನೀಡುವುದಾಗಿ ರಕ್ಷಿತ್​ ಶೆಟ್ಟಿ ಅವರು ನಿರ್ಧರಿಸಿದ್ದರು. ಆ ಕುರಿತು ಜನರಿಗೆ ಮಾಹಿತಿ ನೀಡುವ ಸಲುವಾಗಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದರು. ಸಿನಿಮಾದಲ್ಲಿ ಆ ಎರಡು ಹಾಡುಗಳು ಹೀಗೆ ಬಳಕೆ ಆಗಿದ್ದವು ಎಂಬುದನ್ನು ತಿಳಿಸಲು ಅವರು ವಿಡಿಯೋ ತುಣುಕನ್ನು ಹಂಚಿಕೊಂಡಿದ್ದರು. ಅದನ್ನು ತೆಗೆಯುವಂತೆ ಕೋರ್ಟ್​ ಆದೇಶಿಸಿದೆ.

‘ಸಿನಿಮಾದಲ್ಲಿ ಹಾಡುಗಳನ್ನು ಅನುಮತಿ ಇಲ್ಲದೇ ಬಳಕೆ ಮಾಡಿದ್ದು ಮಾತ್ರವಲ್ಲದೇ ಆ ಹಾಡಿನ ತುಣುಕುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುವ ಮೂಲಕ ರಕ್ಷಿತ್​ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಸ್​ ಕಡೆಯಿಂದ ಮತ್ತೊಮ್ಮೆ ಕಾಪಿರೈಟ್​ ಉಲ್ಲಂಘನೆ ಆಗಿದೆ’ ಎಂದು ಎಂಆರ್​ಟಿ ಮ್ಯೂಸಿಕ್​ ಕಂಪನಿಯು ನ್ಯಾಯಾಲಯದಲ್ಲಿ ವಾದ ಮಂಡಿಸಿದೆ. ಮುಂಚಿತವಾಗಿ ನೋಟಿಸ್​ ನೀಡಿದ್ದರೂ ಕೂಡ ರಕ್ಷಿತ್​ ಶೆಟ್ಟಿ ಅಥವಾ ಪರಂವಾ ಸ್ಟುಡಿಯೋಸ್​ನವರು ವಿಚಾರಣೆಗಾಗಿ ಕೋರ್ಟ್​ಗೆ ಹಾಜರಾಗಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಕಾಪಿರೈಟ್​ ಕೇಸ್​; ಕೋರ್ಟ್​ನಲ್ಲೇ ಇತ್ಯರ್ಥ ಮಾಡಿಕೊಳ್ಳಲು ರಕ್ಷಿತ್​ ಶೆಟ್ಟಿ ನಿರ್ಧಾರ

ನಿರ್ಮಾಪಕನಾಗಿ ರಕ್ಷಿತ್​ ಶೆಟ್ಟಿ ಅವರು ಸಕ್ರಿಯರಾಗಿದ್ದಾರೆ. ಈ ಮೊದಲು ಕೂಡ ಹಾಡುಗಳಿಗೆ ಸಂಬಂಧಿಸಿದಂತೆ ಅವರು ಕೋರ್ಟ್​ ಮೆಟ್ಟಿಲು ಏರಿದ್ದರು. ಪದೇಪದೇ ಈ ರೀತಿ ಕೇಸ್​ ದಾಖಲಾಗುತ್ತಿರುವುದರಿಂದ ಕಾಪಿರೈಟ್​ ಬಗ್ಗೆ ಸ್ಪಷ್ಟತೆ ಸಿಗಲಿ ಎಂಬ ಉದ್ದೇಶ ರಕ್ಷಿತ್ ಶೆಟ್ಟಿ ಅವರದ್ದು. ಈಗ ದೆಹಲಿ ಕೋರ್ಟ್​ ಆದೇಶದ ಬಗ್ಗೆ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!