AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಪಿರೈಟ್ ಉಲ್ಲಂಘನೆ ಕೇಸ್: 20 ಲಕ್ಷ ರೂ ಠೇವಣಿ ಇಡುವಂತೆ ರಕ್ಷಿತ್​ ಶೆಟ್ಟಿಗೆ ಕೋರ್ಟ್​ ಆದೇಶ

‘ಬ್ಯಾಚುಲರ್​ ಪಾರ್ಟಿ’ ಸಿನಿಮಾದಲ್ಲಿ ಎರಡು ಹಾಡುಗಳನ್ನು ಬಳಸಿದ್ದಕ್ಕೆ ನಿರ್ಮಾಪಕ ರಕ್ಷಿತ್​ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ರಕ್ಷಿತ್​ ಶೆಟ್ಟಿ ಅವರ ‘ಪರಂವಾ ಸ್ಟುಡಿಯೋಸ್​’ ವಿರುದ್ಧ ‘ಎಂಆರ್​ಟಿ ಮ್ಯೂಸಿಕ್​’ ಕಂಪನಿ ಕೇಸ್​ ದಾಖಲಿಸಿದ್ದು, ಕಾನೂನಿನ ಸಮರ ನಡೆಯುತ್ತಿದೆ. ದೆಹಲಿ ಹೈಕೋರ್ಟ್​ ನೀಡಿದ ಆದೇಶದ ಬಗ್ಗೆ ‘ಎಂಆರ್​ಟಿ ಮ್ಯೂಸಿಕ್​’ ಮಾಹಿತಿ ಹಂಚಿಕೊಂಡಿದೆ.

ಕಾಪಿರೈಟ್ ಉಲ್ಲಂಘನೆ ಕೇಸ್: 20 ಲಕ್ಷ ರೂ ಠೇವಣಿ ಇಡುವಂತೆ ರಕ್ಷಿತ್​ ಶೆಟ್ಟಿಗೆ ಕೋರ್ಟ್​ ಆದೇಶ
ರಕ್ಷಿತ್​ ಶೆಟ್ಟಿ
Malatesh Jaggin
| Updated By: ಮದನ್​ ಕುಮಾರ್​|

Updated on: Aug 17, 2024 | 8:34 PM

Share

ನಟ, ನಿರ್ಮಾಪಕ ರಕ್ಷಿತ್​ ಶೆಟ್ಟಿ ಹಾಗೂ ‘ಎಂಆರ್​ಟಿ ಮ್ಯೂಸಿಕ್​’ ಕಂಪನಿ ನಡುವಿನ ಕಾನೂನು ಜಟಾಪಟಿ ಮುಂದುವರಿದಿದೆ. ರಕ್ಷಿತ್ ಶೆಟ್ಟಿ ಅವರು ‘ಪರಂವಾ ಸ್ಟುಡಿಯೋಸ್​’ ಮೂಲಕ ನಿರ್ಮಾಣ ಮಾಡಿದ ‘ಬ್ಯಾಚುಲರ್​ ಪಾರ್ಟಿ’ ಸಿನಿಮಾದಲ್ಲಿ ‘ಎಂಆರ್​ಟಿ ಮ್ಯೂಸಿಕ್​’ ಸಂಸ್ಥೆಗೆ ಸೇರಿದ ಎರಡು ಹಾಡುಗಳನ್ನು ಅನುಮತಿ ಇಲ್ಲದೇ ಬಳಕೆ ಮಾಡಿಕೊಂಡಿದ್ದಕ್ಕೆ ಕೇಸ್​ ಹಾಕಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್​ ಆದೇಶ ನೀಡಿದೆ. ಕೋರ್ಟ್​ನಲ್ಲಿ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ರಕ್ಷಿತ್​ ಶೆಟ್ಟಿ ಹಾಗೂ ‘ಪರಂವಾ ಸ್ಟುಡಿಯೋಸ್​’ ಸಂಸ್ಥೆಗೆ ಸೂಚಿಸಲಾಗಿದೆ.

ದೆಹಲಿ ಹೈಕೋರ್ಟ್​ ನೀಡಿರುವ ಆದೇಶಕ್ಕೆ ಸಂಬಂಧಿಸಿದಂತೆ ‘ಎಂಆರ್​ಟಿ ಮ್ಯೂಸಿಕ್​’ ಕಂಪನಿಯು ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದೆ. ‘ಬ್ಯಾಚುಲರ್​ ಪಾರ್ಟಿ’ ಕನ್ನಡ ಸಿನಿಮಾ ಈ ವರ್ಷ ಜನವರಿಯಲ್ಲಿ ರಿಲೀಸ್ ಆಗಿತ್ತು. ಆ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ..’ ಹಾಗೂ ‘ಒಮ್ಮೆ ನಿನ್ನನ್ನು..’ ಹಾಡುಗಳನ್ನು ಬಳಕೆ ಮಾಡಿಕೊಂಡಿದ್ದಕ್ಕೆ ‘ಎಂಆರ್​ಟಿ ಮ್ಯೂಸಿಕ್​’ ಕೇಸ್​ ದಾಖಲಿಸಿತ್ತು.

ಕಾಪಿರೈಟ್​ ಉಲ್ಲಂಘನೆ ಆರೋಪಕ್ಕೆ ನ್ಯಾಯಾಲಯದಲ್ಲೇ ಉತ್ತರ ನೀಡುವುದಾಗಿ ರಕ್ಷಿತ್​ ಶೆಟ್ಟಿ ಅವರು ನಿರ್ಧರಿಸಿದ್ದರು. ಆ ಕುರಿತು ಜನರಿಗೆ ಮಾಹಿತಿ ನೀಡುವ ಸಲುವಾಗಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದರು. ಸಿನಿಮಾದಲ್ಲಿ ಆ ಎರಡು ಹಾಡುಗಳು ಹೀಗೆ ಬಳಕೆ ಆಗಿದ್ದವು ಎಂಬುದನ್ನು ತಿಳಿಸಲು ಅವರು ವಿಡಿಯೋ ತುಣುಕನ್ನು ಹಂಚಿಕೊಂಡಿದ್ದರು. ಅದನ್ನು ತೆಗೆಯುವಂತೆ ಕೋರ್ಟ್​ ಆದೇಶಿಸಿದೆ.

‘ಸಿನಿಮಾದಲ್ಲಿ ಹಾಡುಗಳನ್ನು ಅನುಮತಿ ಇಲ್ಲದೇ ಬಳಕೆ ಮಾಡಿದ್ದು ಮಾತ್ರವಲ್ಲದೇ ಆ ಹಾಡಿನ ತುಣುಕುಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡುವ ಮೂಲಕ ರಕ್ಷಿತ್​ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಸ್​ ಕಡೆಯಿಂದ ಮತ್ತೊಮ್ಮೆ ಕಾಪಿರೈಟ್​ ಉಲ್ಲಂಘನೆ ಆಗಿದೆ’ ಎಂದು ಎಂಆರ್​ಟಿ ಮ್ಯೂಸಿಕ್​ ಕಂಪನಿಯು ನ್ಯಾಯಾಲಯದಲ್ಲಿ ವಾದ ಮಂಡಿಸಿದೆ. ಮುಂಚಿತವಾಗಿ ನೋಟಿಸ್​ ನೀಡಿದ್ದರೂ ಕೂಡ ರಕ್ಷಿತ್​ ಶೆಟ್ಟಿ ಅಥವಾ ಪರಂವಾ ಸ್ಟುಡಿಯೋಸ್​ನವರು ವಿಚಾರಣೆಗಾಗಿ ಕೋರ್ಟ್​ಗೆ ಹಾಜರಾಗಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಕಾಪಿರೈಟ್​ ಕೇಸ್​; ಕೋರ್ಟ್​ನಲ್ಲೇ ಇತ್ಯರ್ಥ ಮಾಡಿಕೊಳ್ಳಲು ರಕ್ಷಿತ್​ ಶೆಟ್ಟಿ ನಿರ್ಧಾರ

ನಿರ್ಮಾಪಕನಾಗಿ ರಕ್ಷಿತ್​ ಶೆಟ್ಟಿ ಅವರು ಸಕ್ರಿಯರಾಗಿದ್ದಾರೆ. ಈ ಮೊದಲು ಕೂಡ ಹಾಡುಗಳಿಗೆ ಸಂಬಂಧಿಸಿದಂತೆ ಅವರು ಕೋರ್ಟ್​ ಮೆಟ್ಟಿಲು ಏರಿದ್ದರು. ಪದೇಪದೇ ಈ ರೀತಿ ಕೇಸ್​ ದಾಖಲಾಗುತ್ತಿರುವುದರಿಂದ ಕಾಪಿರೈಟ್​ ಬಗ್ಗೆ ಸ್ಪಷ್ಟತೆ ಸಿಗಲಿ ಎಂಬ ಉದ್ದೇಶ ರಕ್ಷಿತ್ ಶೆಟ್ಟಿ ಅವರದ್ದು. ಈಗ ದೆಹಲಿ ಕೋರ್ಟ್​ ಆದೇಶದ ಬಗ್ಗೆ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!