AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡ ಚಿತ್ರರಂಗ ಅತಿ ಕಳಪೆ’ ಎಂದವರಿಗೆ ಚೇತನ್​ ಬೆಂಬಲ; ಖಡಕ್​ ಎಚ್ಚರಿಕೆ ಕೊಟ್ಟ ರಕ್ಷಿತ್​ ಶೆಟ್ಟಿ

ಆಕ್ಷೇಪಾರ್ಹ ಟ್ವೀಟ್​ಗೆ ನಟ ಚೇತನ್​ ಸಹಮತ ಸೂಚಿಸಿದ್ದಾರೆ. ಅದನ್ನು ಗಮನಿಸಿರುವ ರಕ್ಷಿತ್​ ಶೆಟ್ಟಿ ಅವರು ತುಂಬ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇದು ಈಗ ಚರ್ಚೆಗೆ ಕಾರಣ ಆಗಿದೆ.

‘ಕನ್ನಡ ಚಿತ್ರರಂಗ ಅತಿ ಕಳಪೆ’ ಎಂದವರಿಗೆ ಚೇತನ್​ ಬೆಂಬಲ; ಖಡಕ್​ ಎಚ್ಚರಿಕೆ ಕೊಟ್ಟ ರಕ್ಷಿತ್​ ಶೆಟ್ಟಿ
ರಕ್ಷಿತ್​ ಶೆಟ್ಟಿ, ಚೇತನ್​
Follow us
TV9 Web
| Updated By: ಮದನ್​ ಕುಮಾರ್​

Updated on: Jun 14, 2021 | 3:32 PM

ನಟ ‘ಆ ದಿನಗಳು’ ಚೇತನ್​ ಅವರು ಆಗಾಗ ವಿವಾದ ಮಾಡಿಕೊಳ್ಳುತ್ತಲೇ ಇರುತ್ತಾರೆ. ತಮ್ಮ ಸಿದ್ಧಾಂತಗಳ ಕಾರಣಕ್ಕಾಗಿ ಅವರು ಅನೇಕರ ವಿರೋಧ ಕಟ್ಟಿಕೊಂಡಿದ್ದಾರೆ. ಸಿನಿಮಾ ಮಾತ್ರವಲ್ಲದೆ ಕೆಲವು ಸಾಮಾಜಿಕ ಕೆಲಸಗಳ ಮೂಲಕವೂ ಗುರುತಿಸಿಕೊಂಡಿರುವ ಚೇತನ್​ ಈಗ ರಕ್ಷಿತ್​ ಶೆಟ್ಟಿಯ ಅಸಮಾಧಾನಕ್ಕೆ ಕಾರಣ ಆಗಿದ್ದಾರೆ. ಕನ್ನಡ ಚಿತ್ರರಂಗದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದನ್ನು ಬೆಂಬಲಿಸಿದ ಕಾರಣಕ್ಕೆ ಅನೇಕರು ಚೇತನ್​ ವಿರುದ್ಧ ಕಿಡಿಕಾರುತ್ತಿದ್ದಾರೆ.

‘ದಕ್ಷಿಣ ಭಾರತದಲ್ಲೇ ಅತಿ ಕೆಟ್ಟ ಚಿತ್ರರಂಗವಾದ ಕನ್ನಡ ಫಿಲ್ಮ್​ ಇಂಡಸ್ಟ್ರಿಯಲ್ಲಿ ಕೊನೆಗೂ ಭರವಸೆ ಮೂಡಿದೆ. ಕನ್ನಡ ಸಿನಿಮಾ ಎಂಬ ಮರುಭೂಮಿಯಲ್ಲಿ ಚೇತನ್​ ಅಹಿಂಸಾ ಅವರು ಮಳೆಯಂತೆ ಇದ್ದಾರೆ’ ಎಂದು ವ್ಯಕ್ತಿಯೊಬ್ಬರು ಮಾಡಿದ ಟ್ವೀಟ್​ಗೆ ಚೇತನ್​ ಸಹಮತ ಸೂಚಿಸಿದ್ದರು. ‘ನಿಮ್ಮ ಮಾತಿಗೆ ಧನ್ಯವಾದಗಳು. ನೀವು ಆಡಿದ ಮಾತು ಕಟುವಾಗಿದ್ದರೂ ಅದನ್ನು ರಚನಾತ್ಮಕ ಪ್ರತಿಕ್ರಿಯೆ ಎಂದು ಪರಿಗಣಿಸುತ್ತೇವೆ’ ಎಂದು ಚೇತನ್​ ಪ್ರತಿಕ್ರಿಯೆ ನೀಡಿದ್ದರು. ಅದೇ ಈಗ ಅಸಮಾಧಾನಕ್ಕೆ ಕಾರಣ ಆಗಿದೆ.

(ಚೇತನ್​ ಟ್ವೀಟ್​)

ಈ ಟ್ವೀಟ್​ ಗಮನಿಸಿರುವ ರಕ್ಷಿತ್​ ಶೆಟ್ಟಿ ಅವರು ತುಂಬ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ‘ಚೇತನ್​ ಅವರೇ, ನಿಮ್ಮ ಕೆಲಸಗಳಿಂದಾಗಿ ನಿಮ್ಮನ್ನು ನಾನು ಗೌರವಿಸುತ್ತೇನೆ. ಆದರೆ ನೀವು ನಿಮ್ಮ ಆಲೋಚನೆಯನ್ನು ಸರಿಮಾಡಿಕೊಳ್ಳಿ. ಕೆಟ್ಟದನ್ನು ಬಿತ್ತಿದ ಕಡೆಯೇ ಕೆಡುಕು ಬೆಳೆಯುತ್ತದೆ’ ಎಂದು ರಕ್ಷಿತ್​ ಶೆಟ್ಟಿ ತಿರುಗೇಟು ನೀಡಿದ್ದಾರೆ.

‘ನನಗೆ ಈ ಸಿನಿಮಾ ಇಂಡಸ್ಟ್ರೀ ವೇದಿಕೆ ಒದಗಿಸಿಕೊಟ್ಟಿದೆ. ನಮಗಿಂತ ಮೊದಲು ಎಷ್ಟೋ ದಿಗ್ಗಜರು ಕಟ್ಟಿದ ವೇದಿಕೆ ಇದು. ಅದರ ಬಗ್ಗೆ ನಿಮಗೆ ತಿಳಿದಿಲ್ಲ. ಏನೂ ಇಲ್ಲದ ನಮಗೆ ಇಂದು ಈ ಚಿತ್ರರಂಗ ಬದುಕು ಕೊಟ್ಟಿದೆ. ಇಲ್ಲಿ ಕೆಲಸ ಮಾಡುವ ಸಾವಿರಾರು ಜನರಿಗೆ ಇದೇ ಜೀವನ’ ಎಂದು ರಕ್ಷಿತ್ ಶೆಟ್ಟಿ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಟ್ವೀಟ್​ ಆರೋಪ; ನಟ ಚೇತನ್​ ಬಂಧನಕ್ಕೆ ಶಿವರಾಮ್​ ಹೆಬ್ಬಾರ್​ ಒತ್ತಾಯ

ನಟ ಚೇತನ್ ಹೇಳಿಕೆ ಬ್ರಾಹ್ಮಣ ಸಮುದಾಯಕ್ಕೆ ನೋವು ತಂದಿದೆ, ಅವರು ಕ್ಷಮೆ ಕೇಳಬೇಕು; ಪೊಲೀಸ್ ಆಯುಕ್ತರಿಗೆ ದೂರು

ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK