AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೊತ್ತಿಲ್ಲದ ವಿಚಾರದಲ್ಲಿ ಅಸಂಬದ್ಧ ಹೇಳಿಕೆ ಏಕೆ?’; ಕಾಂಗ್ರೆಸ್ ನಾಯಕ ಮಿಥುನ್ ರೈ ಹೇಳಿಕೆಗೆ ರಕ್ಷಿತ್ ಶೆಟ್ಟಿ ತಿರುಗೇಟು

‘ದೇವಾಲಯದ ಪಟ್ಟಣ ಉಡುಪಿಗೆ ಸಾವಿರ ವರ್ಷಗಳ ಇತಿಹಾಸ ಇದೆ. ನಿಮಗೆ ತಿಳಿದಿಲ್ಲದ ವಿಚಾರದಲ್ಲಿ ಸಾರ್ವಜನಿಕ ವೇದಿಕೆಯಲ್ಲಿ ಅಸಂಬದ್ಧವಾಗಿ ಮಾತನಾಡುವುದು ಏಕೆ?’ ಎಂದು ರಕ್ಷಿತ್ ಟ್ವೀಟ್ ಮಾಡಿದ್ದಾರೆ.

‘ಗೊತ್ತಿಲ್ಲದ ವಿಚಾರದಲ್ಲಿ ಅಸಂಬದ್ಧ ಹೇಳಿಕೆ ಏಕೆ?’; ಕಾಂಗ್ರೆಸ್ ನಾಯಕ ಮಿಥುನ್ ರೈ ಹೇಳಿಕೆಗೆ ರಕ್ಷಿತ್ ಶೆಟ್ಟಿ ತಿರುಗೇಟು
ರಕ್ಷಿತ್​-ಮಿಥುನ್ ರೈ
ರಾಜೇಶ್ ದುಗ್ಗುಮನೆ
|

Updated on:Mar 11, 2023 | 2:59 PM

Share

ಕಾಂಗ್ರೆಸ್ ನಾಯಕ ಮಿಥುನ್ ರೈ (Mithun Rai) ಅವರು ಉಡುಪಿ ಮಠದ ಜಾಗದ ವಿಚಾರದಲ್ಲಿ ನೀಡಿದ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿ ಮಾಡಿದೆ. ಈ ಹೇಳಿಕೆಯನ್ನು ಅನೇಕರು ಟೀಕೆ ಮಾಡಿದ್ದಾರೆ. ಈ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಈ ಬೆನ್ನಲ್ಲೇ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ (Rakshit Shetty) ಅವರು ಈ ವಿಚಾರದಲ್ಲಿ ಟ್ವೀಟ್ ಮಾಡಿದ್ದು, ಕಿಡಿಕಾರಿದ್ದಾರೆ. ‘ಗೊತ್ತಿಲ್ಲದ ವಿಚಾರದಲ್ಲಿ ಅಸಂಬದ್ಧ ಹೇಳಿಕೆ ಏಕೆ’ ಎಂದು ಮಿಥುನ್​ ರೈ ಹೆಸರು ಉಲ್ಲೇಖಿಸದೇ  ಪ್ರಶ್ನೆ ಮಾಡಿದ್ದಾರೆ. ರಕ್ಷಿತ್ ಅವರ ಹೇಳಿಕೆಯನ್ನು ಅನೇಕರು ಬೆಂಬಲಿಸಿದ್ದಾರೆ.

ಮಿಥುನ್ ರೈ ನೀಡಿದ ಹೇಳಿಕೆ ಏನು?

ಮೂಡಬಿದ್ರೆ ತಾಲೂಕಿನ ಪುತ್ತಿಗೆಯಲ್ಲಿ ‘ನಮ್ಮೂರ ಮಸೀದಿ ನೋಡ ಬನ್ನಿ’ ಕಾರ್ಯಕ್ರಮ ನಡೆದಿದೆ. ಇದಕ್ಕೆ ಮಿಥುನ್ ರೈ ಆಗಮಿಸಿದ್ದರು. ಈ ವೇಳೆ ಮಾತನಾಡಿದ್ದ ಅವರು, ‘ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು’ ಎಂದು ಹೇಳಿದ್ದಾರೆ. ಇದರಿಂದ ವಿವಾದ ಹುಟ್ಟಿಕೊಂಡಿದೆ.

ಇದನ್ನೂ ಓದಿ
Image
ಮದುವೆ ಅಲ್ಲ, ಸಿನಿಮಾ ಪ್ರಮೋಷನ್ ಗಿಮಿಕ್​? ಪವಿತ್ರಾ​-ನರೇಶ್ ಕಿಸ್ಸಿಂಗ್ ವಿಡಿಯೋ ಬಗ್ಗೆ ಅನುಮಾನ
Image
Ramya: ರಮ್ಯಾ ಬೇಕು ಅಂತ ಪ್ರತಿಭಟನೆ, ಗುಡಿ ಕಟ್ಟಿಸಿ ಪೂಜೆ; ‘ಹಾಸ್ಟೆಲ್​ ಹುಡುಗರು’ ಮಾಡಿದ್ದು ಒಂದೆರಡಲ್ಲ
Image
ಹೊಸ ಸಿನಿಮಾ ನಿರ್ಮಾಣಕ್ಕೆ ಮುಂದಾದ ರಕ್ಷಿತ್ ಶೆಟ್ಟಿ; ‘ಮಿಥ್ಯ’ ಚಿತ್ರಕ್ಕಿದೆ ಭಿನ್ನ ಕಥೆ

ಖಡಕ್ ತಿರುಗೇಟು ಕೊಟ್ಟ ರಕ್ಷಿತ್ ಶೆಟ್ಟಿ

‘ದೇವಾಲಯದ ಪಟ್ಟಣ ಉಡುಪಿಗೆ ಸಾವಿರ ವರ್ಷಗಳ ಇತಿಹಾಸ ಇದೆ. ನಿಮಗೆ ತಿಳಿದಿಲ್ಲದ ವಿಚಾರದಲ್ಲಿ ಸಾರ್ವಜನಿಕ ವೇದಿಕೆಯಲ್ಲಿ ಅಸಂಬದ್ಧವಾಗಿ ಮಾತನಾಡುವುದು ಏಕೆ?’ ಎಂದು ರಕ್ಷಿತ್ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಕಮೆಂಟ್ ಮಾಡಿರುವ ವ್ಯಕ್ತಿಯೋರ್ವ, ‘ರಕ್ಷಿತ್ ಶೆಟ್ರೆ ಜಾಸ್ತಿ ಯಾರಿಗೂ ಬಕೆಟ್ ಹಿಡಿಯೋಕೆ ಹೋಗ್ಬೇಡಿ. ದೇವರು ಮೆಚ್ಚುವಂಥ ಕೆಲಸ ಮಾಡಿ ಅಷ್ಟೇ ಸಾಕು’ ಎಂದು ಬರೆದುಕೊಂಡಿದ್ದ. ಇದಕ್ಕೆ ರಕ್ಷಿತ್ ಉತ್ತರ ಕೊಟ್ಟಿದ್ದಾರೆ.

‘ಉಡುಪಿ ನನ್ನ ಜನ್ಮಸ್ಥಳ. ಬಕೆಟ್ ಅಲ್ಲಾ, ಟ್ಯಾಂಕರ್ ಹಿಡಿತೀನಿ. ಅಂದಹಾಗೆ ಅವರು (ಮಿಥುನ್ ರೈ) ಯಾವ ಭೂಮಿಯ ಬಗ್ಗೆ ಮಾತನಾಡಿದ್ದಾರೆಂಬುದು ಖಚಿತ ಆಗಿಲ್ಲ. ಆದರೆ ಕಾರ್ ಸ್ಟ್ರೀಟ್‌ನಲ್ಲಿರುವ ಜಮೀನು ಖಂಡಿತವಾಗಿಯೂ ಅಲ್ಲ. ಕೃಷ್ಣಮಠಕ್ಕಿಂತ ಅನಂತೇಶ್ವರ ದೇವಸ್ಥಾನ ಹಳೆಯದು. ಇವೆಲ್ಲಕ್ಕಿಂತ ಚಂದ್ರಮೌಳೀಶ್ವರ ದೇವಸ್ಥಾನ ಇನ್ನೂ ಹಳೆಯದು’ ಎಂದು ರಕ್ಷಿತ್ ಇತಿಹಾಸ ತಿಳಿಸಿದ್ದಾರೆ.

‘ನನಗೆ ಗೊತ್ತಿಲ್ಲದ ವಿಷಯದ ಬಗ್ಗೆ ನಾನು ಎಂದಿಗೂ ಮಾತನಾಡುವುದಿಲ್ಲ. ಇದು ನನ್ನ ಆಸಕ್ತಿಯ ಕ್ಷೇತ್ರ. ಹೀಗಾಗಿ ನಾನು ಏನು ಮಾತನಾಡುತ್ತಿದ್ದೇನೆಂದು ನನಗೆ ಗೊತ್ತಿದೆ’ ಎಂದಿದ್ದಾರೆ ರಕ್ಷಿತ್.

ರಕ್ಷಿತ್​ಗೆ ಊರಿನ ಬಗ್ಗೆ ಇದೆ ಪ್ರೀತಿ

ರಕ್ಷಿತ್ ಶೆಟ್ಟಿ ಅವರ ಊರು ಉಡುಪಿ. ಅವರು ಹುಟ್ಟಿ ಬೆಳೆದಿದ್ದು ಇಲ್ಲಿಯೇ. ಈ ಕಾರಣಕ್ಕೆ ಅವರಿಗೆ ಊರಿನ ಬಗ್ಗೆ ವಿಶೇಷ ಪ್ರೀತಿ ಇದೆ. ಅವರ ನಿರ್ದೇಶನದ ಮೊದಲ ಸಿನಿಮಾ ‘ಉಳಿದವರು ಕಂಡಂತೆ’ ಉಡುಪಿಯಲ್ಲೇ ಶೂಟ್​ ಮಾಡಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:55 pm, Sat, 11 March 23

Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್