AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಗಿಯಿತು ರಕ್ಷಿತ್​ Vs​ ಲಹರಿ ಕಿರಿಕ್​; ಮತ್ತೆ ಸ್ನೇಹ ಚಿಗುರಿದ್ದಕ್ಕೆ ಹೊಸ ಸೆಲ್ಫೀ ಸಾಕ್ಷಿ

Rakshit Shetty | Lahari Velu: ಅಚ್ಚರಿಯ ರೀತಿಯಲ್ಲಿ ರಕ್ಷಿತ್​ ಶೆಟ್ಟಿ, ಲಹರಿ ವೇಲು, ಸಂಗೀತ ನಿರ್ದೇಶಕ ಅಜನೀಶ್​ ಲೋಕನಾಥ್​ ಒಂದಾಗಿದ್ದಾರೆ. ತಮ್ಮ ನಡುವಿನ ಎಲ್ಲ ಕಿರಿಕ್​ಗಳನ್ನು ಬದಿಗಿಟ್ಟು ಸ್ನೇಹದ ಹಸ್ತ ಚಾಚಿದ್ದಾರೆ.

ಮುಗಿಯಿತು ರಕ್ಷಿತ್​ Vs​ ಲಹರಿ ಕಿರಿಕ್​; ಮತ್ತೆ ಸ್ನೇಹ ಚಿಗುರಿದ್ದಕ್ಕೆ ಹೊಸ ಸೆಲ್ಫೀ ಸಾಕ್ಷಿ
ರಕ್ಷಿತ್​ ಶೆಟ್ಟಿ, ಬಿ. ಅಜನೀಶ್​ ಲೋಕನಾಥ್​, ಲಹರಿ ವೇಲು,
ಮದನ್​ ಕುಮಾರ್​
|

Updated on: Jun 29, 2021 | 3:15 PM

Share

ಕನ್ನಡ ಚಿತ್ರರಂಗದಲ್ಲಿ ನಟ ರಕ್ಷಿತ್​ ಶೆಟ್ಟಿ ಮತ್ತು ಲಹರಿ ಮ್ಯೂಸಿಕ್​ ಸಂಸ್ಥೆ ನಡುವೆ ಉಂಟಾಗಿದ್ದ ಕಿರಿಕ್​ ಬಗ್ಗೆ ಎಲ್ಲರಿಗೂ ತಿಳಿದಿದೆ. ತಮ್ಮ ಸಂಸ್ಥೆಗೆ ಸೇರಿದ ಸಂಗೀತವನ್ನು ಕಿರಿಕ್​ ಪಾರ್ಟಿ ಚಿತ್ರತಂಡ ಕೃತಿಚೌರ್ಯ ಮಾಡಿದೆ ಎಂದು ಆರೋಪಿಸಿ ಲಹರಿ ಸಂಸ್ಥೆಯ ವೇಲು ಅವರು ಕೋರ್ಟ್​ ಮೆಟ್ಟಿಲೇರಿದ್ದರು. ಆ ಬಗ್ಗೆ ಹಲವು ಬಾರಿ ವಿಚಾರಣೆ ನಡೆದಿತ್ತು. ಲಹರಿ ವೇಲು ಮತ್ತು ರಕ್ಷಿತ್​ ಶೆಟ್ಟಿ ಸಾರ್ವಜನಿಕವಾಗಿಯೇ ಆರೋಪ ಮತ್ತು ಪ್ರತ್ಯಾರೋಪ ಮಾಡಿಕೊಂಡಿದ್ದರು. ಆದರೆ ಈಗ ಇಬ್ಬರ ನಡುವೆ ಸ್ನೇಹ ಚಿಗುರಿದೆ!

ಅಚ್ಚರಿಯ ರೀತಿಯಲ್ಲಿ ರಕ್ಷಿತ್​ ಶೆಟ್ಟಿ, ಲಹರಿ ವೇಲು, ಸಂಗೀತ ನಿರ್ದೇಶಕ ಅಜನೀಶ್​ ಲೋಕನಾಥ್​ ಒಂದಾಗಿದ್ದಾರೆ. ತಮ್ಮ ನಡುವಿನ ಎಲ್ಲ ಕಿರಿಕ್​ಗಳನ್ನು ಬದಿಗಿಟ್ಟು ಸ್ನೇಹದ ಹಸ್ತ ಚಾಚಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಈ ಮೂವರು ಹೊಸ ಸೆಲ್ಫೀಗೆ ಪೋಸ್​ ನೀಡಿದ್ದು, ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಒಂದು ಘಟನೆ, ಹಲವು ದೃಷ್ಟಿಕೋನಗಳು. ದೃಷ್ಟಿಕೋನಗಳನ್ನು ಹಂಚಿಕೊಂಡು, ಅರ್ಥ ಮಾಡಿಕೊಂಡಾಗ ನಾವು ಮನುಷ್ಯರಾಗಿ ಒಗ್ಗೂಡುತ್ತೇವೆ. ಪ್ರೀತಿ ಮತ್ತು ಪರಸ್ಪರ ಗೌರವಗಳಲ್ಲಿ ಎಲ್ಲವೂ ಸೇರಿಕೊಳ್ಳಲೇಬೇಕು. ಅದೇ ಬೆಳವಣಿಗೆಯ ನಿಜವಾದ ಲಕ್ಷಣ’ ಎಂದು ರಕ್ಷಿತ್​ ಶೆಟ್ಟಿ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಈ ಫೋಟೋ ಹಂಚಿಕೊಂಡಿದ್ದಾರೆ.

ಫೋಟೋ ನೋಡಿದ ಅನೇಕರು ಈ ಮೂವರಿಗೂ ಶುಭ ಹಾರೈಸಿದ್ದಾರೆ. ನೆಟ್ಟಿಗರು ಹಲವು ಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ. ತಮ್ಮ ನಡುವಿನ ಕಿರಿಕ್​ ಮರೆತು ಒಂದಾಗಿರುವ ಈ ಸೆಲೆಬ್ರಿಟಿಗಳನ್ನು ಕಂಡು ಸ್ಯಾಂಡಲ್​ವುಡ್​ ಮಂದಿ ಖುಷಿಪಟ್ಟಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ ಎಂಬ ಮಾತು ಆಗಾಗ ಕೇಳಿಬರುತ್ತದೆ. ಅದರ ಜೊತೆಗೆ ಇಲ್ಲಸಲ್ಲದ ವಿವಾದಗಳು ಹುಟ್ಟಿಕೊಂಡಾಗ ಚಿತ್ರರಂಗದ ಒಗ್ಗಟ್ಟಿಗೆ ಹೆಚ್ಚು ಧಕ್ಕೆ ಆಗುತ್ತದೆ. ಇಂಥದ್ದರ ನಡುವೆ ರಕ್ಷಿತ್​ ಶೆಟ್ಟಿ, ಲಹರಿ ವೇಲು ಅವರು ಕೋರ್ಟ್​ ಕೇಸ್​ಗಳನ್ನು ಬದಿಗಿಟ್ಟು ಮತ್ತೆ ಸ್ನೇಹಿತರಾಗಿರುವುದು ಒಳ್ಳೆಯ ಬೆಳವಣಿಗೆ.

ದಕ್ಷಿಣ ಭಾರತದಲ್ಲಿನ ಪ್ರಮುಖ ಆಡಿಯೋ ಸಂಸ್ಥೆಗಳಲ್ಲಿ ಲಹರಿ ಮ್ಯೂಸಿಕ್​ ಕೂಡ ಪ್ರಮುಖವಾದದ್ದು. ಸಾವಿರಾರು ಸೂಪರ್​ ಹಿಟ್​ ಹಾಡುಗಳು ಈ ಸಂಸ್ಥೆಯಿಂದ ಹೊರಬಂದಿವೆ. ಅದೇ ರೀತಿ ರಕ್ಷಿತ್​ ಶೆಟ್ಟಿ ಕೂಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದುಕೊಂಡಿದ್ದಾರೆ. ಆದರೆ ಸಣ್ಣ ಕಿರಿಕ್​ನಿಂದ ಇಬ್ಬರೂ ಕೋರ್ಟ್​ ಮೆಟ್ಟಿಲು ಹತ್ತುವಂತಾಗಿದ್ದು ಅವರ ಅಭಿಮಾನಿಗಳಿಗೆ ಬೇಸರ ಉಂಟು ಮಾಡಿತ್ತು. ಈಗ ಇಬ್ಬರ ನಡುವಿನ ವಿವಾದ ಬಗೆಹರಿದಿದ್ದು, ಸುಖಾಂತ್ಯ ಕಂಡಿದೆ. ಸದ್ಯ ‘777 ಚಾರ್ಲಿ’ ಚಿತ್ರದ ಕೆಲಸಗಳಲ್ಲಿ ರಕ್ಷಿತ್​ ಶೆಟ್ಟಿ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ:

‘ಕನ್ನಡ ಚಿತ್ರರಂಗ ಅತಿ ಕಳಪೆ’ ಎಂದವರಿಗೆ ಚೇತನ್​ ಬೆಂಬಲ; ಖಡಕ್​ ಎಚ್ಚರಿಕೆ ಕೊಟ್ಟ ರಕ್ಷಿತ್​ ಶೆಟ್ಟಿ

ರಶ್ಮಿಕಾ ಬಗ್ಗೆ ಕೆಟ್ಟ ಕಮೆಂಟ್​ಗಳ ಸುರಿಮಳೆ; ರಕ್ಷಿತ್​ ಶೆಟ್ಟಿ ಪ್ರತಿಕ್ರಿಯೆಗೆ ಭೇಷ್​ ಎನ್ನಲೇಬೇಕು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!