AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬ್ಯಾಚುಲರ್ ಪಾರ್ಟಿ’ ಶುರು ಹಚ್ಚಿಕೊಂಡ ದಿಗಂತ್, ರಿಷಬ್, ಅಚ್ಯುತ್; ಎರಡು ಹೊಸ ಸಿನಿಮಾ ಘೋಷಿಸಿದ ರಕ್ಷಿತ್

ರಕ್ಷಿತ್ ಹಾಗೂ ರಿಷಬ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಇಬ್ಬರೂ ಒಟ್ಟಾಗಿ ಹಲವು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಇವರಿಗೆ ಮತ್ತೆ ಒಟ್ಟಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ.

‘ಬ್ಯಾಚುಲರ್ ಪಾರ್ಟಿ’ ಶುರು ಹಚ್ಚಿಕೊಂಡ ದಿಗಂತ್, ರಿಷಬ್, ಅಚ್ಯುತ್; ಎರಡು ಹೊಸ ಸಿನಿಮಾ ಘೋಷಿಸಿದ ರಕ್ಷಿತ್
ಎರಡು ಹೊಸ ಸಿನಿಮಾ ಘೋಷಿಸಿದ ರಕ್ಷಿತ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 01, 2022 | 4:30 PM

ರಕ್ಷಿತ್ ಶೆಟ್ಟಿ (Rakshit Shetty) ಅವರ ಅಭಿರುಚಿ ಏನು ಎಂಬುದು ಎಲ್ಲರಿಗೂ ಗೊತ್ತಾಗಿದೆ. ನಟನೆ ಮಾತ್ರವಲ್ಲದೆ, ನಿರ್ಮಾಪಕನಾಗಿಯೂ ಅವರು ಯಶಸ್ಸು ಕಂಡಿದ್ದಾರೆ. ಭಿನ್ನ ಸಿನಿಮಾಗಳು ಅವರ ನಿರ್ಮಾಣ ಸಂಸ್ಥೆಯಿಂದ ಹೊರ ಬರುತ್ತಿದೆ. ‘777 ಚಾರ್ಲಿ’ (777 Charlie) ಸಿನಿಮಾದಿಂದ ಸಾಕಷ್ಟು ಲಾಭ ಕಂಡಿರುವ ರಕ್ಷಿತ್ ಈ ಹಣವನ್ನು ಮತ್ತೆ ಸಿನಿಮಾ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ರಕ್ಷಿತ್ ಶೆಟ್ಟಿ ‘ಪರಂವಃ ಸ್ಟುಡಿಯೋಸ್’ ಮೂಲಕ ಎರಡು ಹೊಸ ಸಿನಿಮಾ ನಿರ್ಮಾಣ ಮಾಡುವ ಘೋಷಣೆ ಮಾಡಿದ್ದಾರೆ. ‘ಬ್ಯಾಚುಲರ್ ಪಾರ್ಟಿ’ ಹಾಗೂ ‘ಇಬ್ಬನಿ ತಬ್ಬಿದ ಇಳೆಯಲಿ’ ಹೆಸರಿನ ಎರಡು ಸಿನಿಮಾ ಅನೌನ್ಸ್ ಮಾಡಿದ್ದಾರೆ ಅವರು. ಗಣೇಶ ಹಬ್ಬದಂದು ಅಭಿಮಾನಿಗಳಿಗೆ ಈ ಸಿಹಿ ಸುದ್ದಿ ಸಿಕ್ಕಿದೆ.

ರಕ್ಷಿತ್ ಹಾಗೂ ರಿಷಬ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಇಬ್ಬರೂ ಒಟ್ಟಾಗಿ ಹಲವು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಇವರಿಗೆ ಮತ್ತೆ ಒಟ್ಟಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ರಕ್ಷಿತ್ ಬಂಡವಾಳ ಹೂಡುತ್ತಿರುವ ಈ ಸಿನಿಮಾದಲ್ಲಿ ರಿಷಬ್, ದಿಗಂತ್ ಮಂಚಾಲೆ ಹಾಗೂ ಅಚ್ಯುತ್​ ಕುಮಾರ್ ನಟಿಸುತ್ತಿದ್ದಾರೆ. ಇದೊಂದು ಅಡ್ವೆಂಚರ್ ಕಾಮಿಡಿ ಸಿನಿಮಾ ಎಂಬುದನ್ನು ಸಿನಿಮಾ ತಂಡ ಘೋಷಿಸಿದೆ. ರಕ್ಷಿತ್ ಜತೆ ಕೆಲಸ ಮಾಡಿದ್ದ ಅಭಿಜಿತ್ ಮಹೇಶ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನ. ಈ ಚಿತ್ರದ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ.

ಇದನ್ನೂ ಓದಿ
Image
‘777 ಚಾರ್ಲಿ’ ಗೆದ್ದ ಖುಷಿಯಲ್ಲಿ ರಕ್ಷಿತ್; ಥೈಲ್ಯಾಂಡ್​​ನಲ್ಲಿ ಟೀಂ ಜೊತೆ ಪಾರ್ಟಿ
Image
‘777 ಚಾರ್ಲಿ’ ಸಿನಿಮಾದಲ್ಲಿ ಡಿಲೀಟ್ ಮಾಡಿದ್ದ ದೃಶ್ಯವನ್ನು ರಿಲೀಸ್ ಮಾಡಿದ ಟೀಂ; ಇಲ್ಲಿದೆ ವಿಡಿಯೋ
Image
Rakshit Shetty: 150 ಕೋಟಿ ರೂ. ಗಳಿಸಿದ ‘777 ಚಾರ್ಲಿ’; ಪ್ರಾಣಿಗಳ ರಕ್ಷಣೆಗೆ ಶೇ.5ರಷ್ಟು ಹಣ ದೇಣಿಗೆ ನೀಡಿದ ರಕ್ಷಿತ್​ ಶೆಟ್ಟಿ
Image
Rakshit Shetty: ‘777 ಚಾರ್ಲಿ’ ಸಿನಿಮಾಗೆ ಸೀಕ್ವೆಲ್​; ಪ್ಲ್ಯಾನ್ ಬಗ್ಗೆ ಮಾಹಿತಿ ನೀಡಿದ ರಕ್ಷಿತ್ ಶೆಟ್ಟಿ

ಇದನ್ನೂ ಓದಿ: ಹೊಸ ಸಿನಿಮಾ ನಿರ್ಮಾಣಕ್ಕೆ ಮುಂದಾದ ರಕ್ಷಿತ್ ಶೆಟ್ಟಿ; ‘ಮಿಥ್ಯ’ ಚಿತ್ರಕ್ಕಿದೆ ಭಿನ್ನ ಕಥೆ

‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾ ಕೂಡ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರಕ್ಕೆ ಚಂದ್ರಜಿತ್ ಬೆಳ್ಳಿಯಪ್ಪ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ನಿರ್ದೇಶನದ ಮೊದಲ ಸಿನಿಮಾ. ವಿಹಾನ್ ಹಾಗೂ ಅಂಕಿತಾ ಅಮರ್ ಅವರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಫಸ್ಟ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ.

ರಕ್ಷಿತ್ ಶೆಟ್ಟಿ ಅವರು ನಟನೆ, ನಿರ್ದೇಶನದಲ್ಲಿ ಭೇಷ್ ಎನಿಸಿಕೊಂಡಿದ್ದಾರೆ. ಇದರ ಜತೆಗೆ ನಿರ್ಮಾಣದಲ್ಲೂ ಸಾಕಷ್ಟು ಯಶಸ್ಸು ಕಂಡಿದ್ದಾರೆ. ಹೊಸ ತಂಡಗಳಿಗೆ ಅವರು ಈ ಮೊದಲಿನಿಂದಲೂ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಈಗ ಅವರು ಮತ್ತೆ ಎರಡು ಹೊಸ ತಂಡಕ್ಕೆ ಬೆಂಬಲ ನೀಡಿದ್ದಾರೆ. ರಕ್ಷಿತ್​ಗೆ ಫ್ಯಾನ್ಸ್ ಕಡೆಯಿಂದ ಶುಭಾಶಯ ಬರುತ್ತಿದೆ. ರಕ್ಷಿತ್ ಜತೆಗೆ ಜಿ.ಎಸ್​.ಗುಪ್ತಾ ಕೂಡ ಹಣ ಹೂಡುತ್ತಿದ್ದಾರೆ.

ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​