AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakshit Shetty: ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಬೆಂಬಲ; ‘ಪರಂವಃ’ ಮೂಲಕ ರಿಲೀಸ್

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ನಿತಿನ್ ಕೃಷ್ಣಮೂರ್ತಿ ನಿರ್ದೇಶನ ಮಾಡಿದ್ದಾರೆ. ಆರಂಭದಿಂದಲೂ ಈ ಸಿನಿಮಾ ವಿಶೇಷ ಪ್ರೋಮೋಗಳ ಮೂಲಕ ಗಮನ ಸೆಳೆದಿದೆ.

Rakshit Shetty: ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಬೆಂಬಲ; ‘ಪರಂವಃ’ ಮೂಲಕ ರಿಲೀಸ್
TV9 Web
| Edited By: |

Updated on: Jan 04, 2023 | 7:36 AM

Share

ರಕ್ಷಿತ್ ಶೆಟ್ಟಿ (Rakshit Shetty) ಒಡೆತನದ ‘ಪರಂವಃ’ ಸ್ಟುಡಿಯೋಸ್ ಮೂಲಕ ಹಲವು ಹೊಸ ಪ್ರತಿಭೆಗಳಿಗೆ ರಕ್ಷಿತ್ ಶೆಟ್ಟಿ ಅವಕಾಶ ನೀಡಿದ್ದಾರೆ. ಕಳೆದ ವರ್ಷ ಈ ಬ್ಯಾನರ್​ ಅಡಿಯಲ್ಲಿ ಮೂಡಿಬಂದ ‘777 ಚಾರ್ಲಿ’ (777 Charlie) ಚಿತ್ರ ಸೂಪರ್ ಹಿಟ್ ಆಯಿತು. ಈ ಸಿನಿಮಾ ನೋಡಿ ಸಿನಿಪ್ರಿಯರು ಇಷ್ಟಪಟ್ಟರು. ಈಗ ರಕ್ಷಿತ್ ಶೆಟ್ಟಿ ಅವರು ‘ಪರಂವಃ’ ಸ್ಟುಡಿಯೋಸ್ ಮೂಲಕ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರವನ್ನು ರಿಲೀಸ್ ಮಾಡಲು ಮುಂದಾಗಿದ್ದಾರೆ. ಹಾಗಂತ ಇದು ವದಂತಿ ಅಲ್ಲ. ಸ್ವತಃ ‘ಪರಂವಃ’ ಸ್ಟುಡಿಯೋಸ್ ಮೂಲಕ ಈ ವಿಚಾರ ಘೋಷಣೆ ಆಗಿದೆ.

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ನಿತಿನ್ ಕೃಷ್ಣಮೂರ್ತಿ ನಿರ್ದೇಶನ ಮಾಡಿದ್ದಾರೆ. ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ.ಪಿ. ಅವರ ಗುಲ್ ಮೋಹರ್ ಫಿಲಂಸ್ ಬ್ಯಾನರ್​​ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಆರಂಭದಿಂದಲೂ ಈ ಸಿನಿಮಾ ವಿಶೇಷ ಪ್ರೋಮೋಗಳ ಮೂಲಕ ಗಮನ ಸೆಳೆದಿದೆ. ಇವರ ಐಡಿಯಾಗಳನ್ನು ನೋಡಿ ಪುನೀತ್ ರಾಜ್​ಕುಮಾರ್, ಸುದೀಪ್, ರಕ್ಷಿತ್ ಶೆಟ್ಟಿ, ರಮ್ಯಾ, ಸಂಗೀತ ನಿರ್ದೇಶಕ ಅಜನೀಶ್​ ಲೋಕನಾಥ್ ಮೊದಲಾದವರು ಪ್ರಮೋಷನ್ ವಿಡಿಯೋಗಳಲ್ಲಿ ಭಾಗಿ ಆಗಿದ್ದರು. ಈಗ ರಕ್ಷಿತ್ ಅವರು ಈ ಚಿತ್ರವನ್ನು ರಿಲೀಸ್ ಮಾಡಲು ಮುಂದೆ ಬಂದಿದ್ದಾರೆ.

ಪರಂವಃ ಸ್ಟುಡಿಯೋಸ್ ಮೂಲಕ ರಿಲೀಸ್ ಆದ ಬಹುತೇಕ ಎಲ್ಲ ಚಿತ್ರಗಳು ಹೊಸತನವನ್ನು ಹೊಂದಿವೆ. ರಕ್ಷಿತ್ ಶೆಟ್ಟಿ ಅವರು ಈ ಚಿತ್ರವನ್ನು ಇಷ್ಟಪಟ್ಟು ರಿಲೀಸ್ ಮಾಡಲು ಮುಂದೆ ಬಂದಿದ್ದಾರೆ ಎಂದರೆ ಸಿನಿಮಾದಲ್ಲಿ ಏನೋ ವಿಶೇಷತೆ ಇದೆ ಎಂದು ಸಿನಿಪ್ರಿಯರು ಊಹಿಸುತ್ತಿದ್ದಾರೆ. ‘ನಮ್ಮ ತುಂಟಾಟವನ್ನು ಪ್ರಸ್ತುತಪಡಿಸುತ್ತಿರುವ ಪರಂವಃ ಸ್ಟುಡಿಯೋಸ್​ಗೆ ಧನ್ಯವಾದ’ ಎಂದು ‘ಹಾಸ್ಟೆಲ್ ಹುಡುಗರು’ ತಂಡದವರು ಪೋಸ್ಟ್ ಮಾಡಿದ್ದಾರೆ. ಚಿತ್ರದ ರಿಲೀಸ್ ದಿನಾಂಕ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ
Image
ಮದುವೆ ಅಲ್ಲ, ಸಿನಿಮಾ ಪ್ರಮೋಷನ್ ಗಿಮಿಕ್​? ಪವಿತ್ರಾ​-ನರೇಶ್ ಕಿಸ್ಸಿಂಗ್ ವಿಡಿಯೋ ಬಗ್ಗೆ ಅನುಮಾನ
Image
Ramya: ರಮ್ಯಾ ಬೇಕು ಅಂತ ಪ್ರತಿಭಟನೆ, ಗುಡಿ ಕಟ್ಟಿಸಿ ಪೂಜೆ; ‘ಹಾಸ್ಟೆಲ್​ ಹುಡುಗರು’ ಮಾಡಿದ್ದು ಒಂದೆರಡಲ್ಲ
Image
ಹೊಸ ಸಿನಿಮಾ ನಿರ್ಮಾಣಕ್ಕೆ ಮುಂದಾದ ರಕ್ಷಿತ್ ಶೆಟ್ಟಿ; ‘ಮಿಥ್ಯ’ ಚಿತ್ರಕ್ಕಿದೆ ಭಿನ್ನ ಕಥೆ

ಇದನ್ನೂ ಓದಿ: ಕನ್ನಡ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣ ಬ್ಯಾನ್? ಟಾಲಿವುಡ್​ ಅಂಗಳದಲ್ಲಿ ಹೀಗೊಂದು ಸುದ್ದಿ

ರಕ್ಷಿತ್ ಶೆಟ್ಟಿ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ‘ರಿಚರ್ಡ್​ ಆಂಟನಿ’ ಸಿನಿಮಾದ ಪ್ರೀ-ಪ್ರೊಡಕ್ಷನ್ ಕೆಲಸದಲ್ಲಿ ಅವರು ತೊಡಗಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ