AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakshit Shetty: ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಬೆಂಬಲ; ‘ಪರಂವಃ’ ಮೂಲಕ ರಿಲೀಸ್

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ನಿತಿನ್ ಕೃಷ್ಣಮೂರ್ತಿ ನಿರ್ದೇಶನ ಮಾಡಿದ್ದಾರೆ. ಆರಂಭದಿಂದಲೂ ಈ ಸಿನಿಮಾ ವಿಶೇಷ ಪ್ರೋಮೋಗಳ ಮೂಲಕ ಗಮನ ಸೆಳೆದಿದೆ.

Rakshit Shetty: ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಬೆಂಬಲ; ‘ಪರಂವಃ’ ಮೂಲಕ ರಿಲೀಸ್
TV9 Web
| Edited By: |

Updated on: Jan 04, 2023 | 7:36 AM

Share

ರಕ್ಷಿತ್ ಶೆಟ್ಟಿ (Rakshit Shetty) ಒಡೆತನದ ‘ಪರಂವಃ’ ಸ್ಟುಡಿಯೋಸ್ ಮೂಲಕ ಹಲವು ಹೊಸ ಪ್ರತಿಭೆಗಳಿಗೆ ರಕ್ಷಿತ್ ಶೆಟ್ಟಿ ಅವಕಾಶ ನೀಡಿದ್ದಾರೆ. ಕಳೆದ ವರ್ಷ ಈ ಬ್ಯಾನರ್​ ಅಡಿಯಲ್ಲಿ ಮೂಡಿಬಂದ ‘777 ಚಾರ್ಲಿ’ (777 Charlie) ಚಿತ್ರ ಸೂಪರ್ ಹಿಟ್ ಆಯಿತು. ಈ ಸಿನಿಮಾ ನೋಡಿ ಸಿನಿಪ್ರಿಯರು ಇಷ್ಟಪಟ್ಟರು. ಈಗ ರಕ್ಷಿತ್ ಶೆಟ್ಟಿ ಅವರು ‘ಪರಂವಃ’ ಸ್ಟುಡಿಯೋಸ್ ಮೂಲಕ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರವನ್ನು ರಿಲೀಸ್ ಮಾಡಲು ಮುಂದಾಗಿದ್ದಾರೆ. ಹಾಗಂತ ಇದು ವದಂತಿ ಅಲ್ಲ. ಸ್ವತಃ ‘ಪರಂವಃ’ ಸ್ಟುಡಿಯೋಸ್ ಮೂಲಕ ಈ ವಿಚಾರ ಘೋಷಣೆ ಆಗಿದೆ.

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ನಿತಿನ್ ಕೃಷ್ಣಮೂರ್ತಿ ನಿರ್ದೇಶನ ಮಾಡಿದ್ದಾರೆ. ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ.ಪಿ. ಅವರ ಗುಲ್ ಮೋಹರ್ ಫಿಲಂಸ್ ಬ್ಯಾನರ್​​ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಆರಂಭದಿಂದಲೂ ಈ ಸಿನಿಮಾ ವಿಶೇಷ ಪ್ರೋಮೋಗಳ ಮೂಲಕ ಗಮನ ಸೆಳೆದಿದೆ. ಇವರ ಐಡಿಯಾಗಳನ್ನು ನೋಡಿ ಪುನೀತ್ ರಾಜ್​ಕುಮಾರ್, ಸುದೀಪ್, ರಕ್ಷಿತ್ ಶೆಟ್ಟಿ, ರಮ್ಯಾ, ಸಂಗೀತ ನಿರ್ದೇಶಕ ಅಜನೀಶ್​ ಲೋಕನಾಥ್ ಮೊದಲಾದವರು ಪ್ರಮೋಷನ್ ವಿಡಿಯೋಗಳಲ್ಲಿ ಭಾಗಿ ಆಗಿದ್ದರು. ಈಗ ರಕ್ಷಿತ್ ಅವರು ಈ ಚಿತ್ರವನ್ನು ರಿಲೀಸ್ ಮಾಡಲು ಮುಂದೆ ಬಂದಿದ್ದಾರೆ.

ಪರಂವಃ ಸ್ಟುಡಿಯೋಸ್ ಮೂಲಕ ರಿಲೀಸ್ ಆದ ಬಹುತೇಕ ಎಲ್ಲ ಚಿತ್ರಗಳು ಹೊಸತನವನ್ನು ಹೊಂದಿವೆ. ರಕ್ಷಿತ್ ಶೆಟ್ಟಿ ಅವರು ಈ ಚಿತ್ರವನ್ನು ಇಷ್ಟಪಟ್ಟು ರಿಲೀಸ್ ಮಾಡಲು ಮುಂದೆ ಬಂದಿದ್ದಾರೆ ಎಂದರೆ ಸಿನಿಮಾದಲ್ಲಿ ಏನೋ ವಿಶೇಷತೆ ಇದೆ ಎಂದು ಸಿನಿಪ್ರಿಯರು ಊಹಿಸುತ್ತಿದ್ದಾರೆ. ‘ನಮ್ಮ ತುಂಟಾಟವನ್ನು ಪ್ರಸ್ತುತಪಡಿಸುತ್ತಿರುವ ಪರಂವಃ ಸ್ಟುಡಿಯೋಸ್​ಗೆ ಧನ್ಯವಾದ’ ಎಂದು ‘ಹಾಸ್ಟೆಲ್ ಹುಡುಗರು’ ತಂಡದವರು ಪೋಸ್ಟ್ ಮಾಡಿದ್ದಾರೆ. ಚಿತ್ರದ ರಿಲೀಸ್ ದಿನಾಂಕ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ
Image
ಮದುವೆ ಅಲ್ಲ, ಸಿನಿಮಾ ಪ್ರಮೋಷನ್ ಗಿಮಿಕ್​? ಪವಿತ್ರಾ​-ನರೇಶ್ ಕಿಸ್ಸಿಂಗ್ ವಿಡಿಯೋ ಬಗ್ಗೆ ಅನುಮಾನ
Image
Ramya: ರಮ್ಯಾ ಬೇಕು ಅಂತ ಪ್ರತಿಭಟನೆ, ಗುಡಿ ಕಟ್ಟಿಸಿ ಪೂಜೆ; ‘ಹಾಸ್ಟೆಲ್​ ಹುಡುಗರು’ ಮಾಡಿದ್ದು ಒಂದೆರಡಲ್ಲ
Image
ಹೊಸ ಸಿನಿಮಾ ನಿರ್ಮಾಣಕ್ಕೆ ಮುಂದಾದ ರಕ್ಷಿತ್ ಶೆಟ್ಟಿ; ‘ಮಿಥ್ಯ’ ಚಿತ್ರಕ್ಕಿದೆ ಭಿನ್ನ ಕಥೆ

ಇದನ್ನೂ ಓದಿ: ಕನ್ನಡ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣ ಬ್ಯಾನ್? ಟಾಲಿವುಡ್​ ಅಂಗಳದಲ್ಲಿ ಹೀಗೊಂದು ಸುದ್ದಿ

ರಕ್ಷಿತ್ ಶೆಟ್ಟಿ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ‘ರಿಚರ್ಡ್​ ಆಂಟನಿ’ ಸಿನಿಮಾದ ಪ್ರೀ-ಪ್ರೊಡಕ್ಷನ್ ಕೆಲಸದಲ್ಲಿ ಅವರು ತೊಡಗಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್