AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯರಾತ್ರಿ 12 ಗಂಟೆಗೆ ಹೊಸ ನ್ಯೂಸ್​ ಕೊಡ್ತಾರೆ ರಕ್ಷಿತ್​ ಶೆಟ್ಟಿ! ಅಭಿಮಾನಿಗಳ ನಿರೀಕ್ಷೆ ಏನು?

ನಟನೆ ಮಾತ್ರವಲ್ಲದೆ, ನಿರ್ದೇಶನ ಮತ್ತು ಸಿನಿಮಾ ನಿರ್ಮಾಣದಲ್ಲೂ ರಕ್ಷಿತ್​ ಶೆಟ್ಟಿ ತೊಡಗಿಕೊಂಡಿದ್ದಾರೆ. ಅವರು ನಿರ್ದೇಶನ ಮಾಡಲಿರುವ ಹೊಸ ಸಿನಿಮಾದ ಬಗ್ಗೆ ಅಪ್​ಡೇಟ್​ ಸಿಗಬಹುದಾ?

ಮಧ್ಯರಾತ್ರಿ 12 ಗಂಟೆಗೆ ಹೊಸ ನ್ಯೂಸ್​ ಕೊಡ್ತಾರೆ ರಕ್ಷಿತ್​ ಶೆಟ್ಟಿ! ಅಭಿಮಾನಿಗಳ ನಿರೀಕ್ಷೆ ಏನು?
ರಕ್ಷಿತ್​ ಶೆಟ್ಟಿ
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on: Mar 11, 2021 | 5:35 PM

Share

ನಟ ರಕ್ಷಿತ್​ ಶೆಟ್ಟಿ ಸದ್ಯ ‘777 ಚಾರ್ಲಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ಜೊತೆಗೆ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕೂಡ ನಿರೀಕ್ಷೆ ಹುಟ್ಟು ಹಾಕಿದೆ. ಅದರ ಜೊತೆಗೆ ಮತ್ತೊಂದು ಹೊಸ ಸುದ್ದಿ ನೀಡಲು ರಕ್ಷಿತ್​ ಶೆಟ್ಟಿ ಸಜ್ಜಾಗಿದ್ದಾರೆ. ಅವರು ಕೊಡಲಿರುವ ಸುದ್ದಿ ಏನು ಅಂತ ತಿಳಿದುಕೊಳ್ಳಲು ಎಲ್ಲ ಅಭಿಮಾನಿಗಳು ಕಾಯುತ್ತಿದ್ದಾರೆ.

‘ಈ ಶಿವರಾತ್ರಿ ಸಂದರ್ಭದಲ್ಲಿ ನಾವು ನಮ್ಮ ದಿಗಂತವನ್ನು ವಿಸ್ತರಿಸುತ್ತಿದ್ದೇವೆ. ಏನೋ ವಿಶೇಷವಾದದ್ದು ಕಾಯುತ್ತಿದೆ. ನಿರೀಕ್ಷಿಸಿ’ ಎಂದು ರಕ್ಷಿತ್ ಶೆಟ್ಟಿ ಟ್ವೀಟ್​ ಮಾಡಿದ್ದಾರೆ. ಅದು ಅಭಿಮಾನಿಗಳಲ್ಲಿ ಕೌತುಕ ಮೂಡಿಸಿದೆ. ರಕ್ಷಿತ್​ ಶೆಟ್ಟಿ ಒಡೆತನದ ‘ಪರಂವಾ ಸ್ಟುಡಿಯೋಸ್​’ ಮೂಲಕ ರಾತ್ರಿ 12 ಗಂಟೆಗೆ ಹೊಸ ಸುದ್ದಿ ಹೊರಬೀಳಲಿದೆ.

ನಟನೆ ಮಾತ್ರವಲ್ಲದೆ, ನಿರ್ದೇಶನ ಮತ್ತು ಸಿನಿಮಾ ನಿರ್ಮಾಣದಲ್ಲೂ ರಕ್ಷಿತ್​ ಶೆಟ್ಟಿ ತೊಡಗಿಕೊಂಡಿದ್ದಾರೆ. ಅವರು ನಿರ್ದೇಶನ ಮಾಡಲಿರುವ ಹೊಸ ಸಿನಿಮಾದ ಬಗ್ಗೆ ಅಪ್​ಡೇಟ್​ ಸಿಗಬಹುದಾ? ರಕ್ಷಿತ್​ ಅವರ ಹೊಸ ಚಿತ್ರ ಘೋಷಣೆ ಆಗಬಹುದಾ ಎಂಬಿತ್ಯಾದಿ ಪ್ರಶ್ನೆಗಳು ಅಭಿಮಾನಿಗಳ ಮನದಲ್ಲಿ ಕೊರೆಯುತ್ತಿದೆ. ರಕ್ಷಿತ್​ ಮಾಡಿರುವ ಪೋಸ್ಟ್​ಗೆ ಕಾಮೆಂಟ್​ ಮಾಡುತ್ತಿರುವ ನೆಟ್ಟಿಗರು ಹಲವು ಬಗೆಯಲ್ಲಿ ಊಹೆ ಮಾಡುತ್ತಿದ್ದಾರೆ. ರಕ್ಷಿತ್​ ಅವರು ವೆಬ್​ ಸಿರೀಸ್​ ಶುರು ಮಾಡಬಹುದು, ‘777 ಚಾರ್ಲಿ’ ಸಿನಿಮಾ ಪ್ಯಾನ್​ ಇಂಡಿಯಾ ರಿಲೀಸ್​ ಆಗಬಹುದು ಎಂದೆಲ್ಲ ಜನರು ಕಾಮೆಂಟ್​ ಮಾಡುತ್ತಿದ್ದಾರೆ.

‘ಕಿರಿಕ್​ ಪಾರ್ಟಿ 2’ ಸಿನಿಮಾ ಅನೌನ್ಸ್​ ಮಾಡಿ ಎಂದು ಕೆಲವರು ಬೇಡಿಕೆ ಇಡುತ್ತಿದ್ದಾರೆ. ಆ ಚಿತ್ರದ ಬಗ್ಗೆ ಸುದ್ದಿ ಕೇಳಲು ಅಭಿಮಾನಿಗಳಿಗೆ ಕಾತರ ಇದೆ. ’777 ಚಾರ್ಲಿ’ ಚಿತ್ರವನ್ನು ತೆಲುಗಿಗೂ ಡಬ್​ ಮಾಡಿ ಎಂದು ಟಾಲಿವುಡ್​ ಸಿನಿಪ್ರಿಯರಿಂದ ಕೋರಿಕೆ ಬರುತ್ತಿದೆ. ಅಂತಿಮವಾಗಿ ರಕ್ಷಿತ್​ ಕೊಡಲಿರುವ ಬ್ರೇಕಿಂಗ್​ ನ್ಯೂಸ್​ ಏನೆಂಬುದು ರಾತ್ರಿ 12 ಗಂಟೆಗೆ ಗೊತ್ತಾಗಬೇಕಿದೆ.

ಇನ್ನು, ರಕ್ಷಿತ್​ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತಂಡದಿಂದಲೂ ಶಿವರಾತ್ರಿ ಹಬ್ಬದ ಪ್ರಯುಕ್ತ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ತುಂಬ ಸಿಂಪಲ್​ ಆದ ಗೆಟಪ್​ನಲ್ಲಿ ರಕ್ಷಿತ್​ ಕಾಣಿಸಿಕೊಂಡಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಚಿತ್ರದ ನಾಯಕಿ ರುಕ್ಮಿಣಿ ವಸಂತ್​ ಅವರ ಲುಕ್​ ಬಹಿರಂಗಗೊಳಿಸಲಾಗಿತ್ತು. ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಹೇಮಂತ್ ಎಂ. ರಾವ್ ನಿರ್ದೇಶನ ಮಾಡುತ್ತಿದ್ದಾರೆ. ‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ಸಿನಿಮಾ ನಂತರ ರಕ್ಷಿತ್​ ಮತ್ತು ಹೇಮಂತ್​ ಒಂದಾಗಿರುವುದು ವಿಶೇಷ.

ಇದನ್ನೂ ಓದಿ: 8 ವರ್ಷಗಳ ಹಿಂದೆ ಶುರುವಾದ ಲವ್​ಸ್ಟೋರಿ ಬಗ್ಗೆ ರಕ್ಷಿತ್​ ಶೆಟ್ಟಿ ಮನದಾಳದ ಮಾತು!

ಇನ್ನೂ ಉತ್ತಂಗಕ್ಕೇರು: ರಶ್ಮಿಕಾಗೆ ಮನಃಪೂರ್ವಕವಾಗಿ ಹಾರೈಸಿದ ರಕ್ಷಿತ್​ ಶೆಟ್ಟಿ

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!