AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯರಾತ್ರಿ 12 ಗಂಟೆಗೆ ಹೊಸ ನ್ಯೂಸ್​ ಕೊಡ್ತಾರೆ ರಕ್ಷಿತ್​ ಶೆಟ್ಟಿ! ಅಭಿಮಾನಿಗಳ ನಿರೀಕ್ಷೆ ಏನು?

ನಟನೆ ಮಾತ್ರವಲ್ಲದೆ, ನಿರ್ದೇಶನ ಮತ್ತು ಸಿನಿಮಾ ನಿರ್ಮಾಣದಲ್ಲೂ ರಕ್ಷಿತ್​ ಶೆಟ್ಟಿ ತೊಡಗಿಕೊಂಡಿದ್ದಾರೆ. ಅವರು ನಿರ್ದೇಶನ ಮಾಡಲಿರುವ ಹೊಸ ಸಿನಿಮಾದ ಬಗ್ಗೆ ಅಪ್​ಡೇಟ್​ ಸಿಗಬಹುದಾ?

ಮಧ್ಯರಾತ್ರಿ 12 ಗಂಟೆಗೆ ಹೊಸ ನ್ಯೂಸ್​ ಕೊಡ್ತಾರೆ ರಕ್ಷಿತ್​ ಶೆಟ್ಟಿ! ಅಭಿಮಾನಿಗಳ ನಿರೀಕ್ಷೆ ಏನು?
ರಕ್ಷಿತ್​ ಶೆಟ್ಟಿ
ಮದನ್​ ಕುಮಾರ್​
| Edited By: |

Updated on: Mar 11, 2021 | 5:35 PM

Share

ನಟ ರಕ್ಷಿತ್​ ಶೆಟ್ಟಿ ಸದ್ಯ ‘777 ಚಾರ್ಲಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ಜೊತೆಗೆ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕೂಡ ನಿರೀಕ್ಷೆ ಹುಟ್ಟು ಹಾಕಿದೆ. ಅದರ ಜೊತೆಗೆ ಮತ್ತೊಂದು ಹೊಸ ಸುದ್ದಿ ನೀಡಲು ರಕ್ಷಿತ್​ ಶೆಟ್ಟಿ ಸಜ್ಜಾಗಿದ್ದಾರೆ. ಅವರು ಕೊಡಲಿರುವ ಸುದ್ದಿ ಏನು ಅಂತ ತಿಳಿದುಕೊಳ್ಳಲು ಎಲ್ಲ ಅಭಿಮಾನಿಗಳು ಕಾಯುತ್ತಿದ್ದಾರೆ.

‘ಈ ಶಿವರಾತ್ರಿ ಸಂದರ್ಭದಲ್ಲಿ ನಾವು ನಮ್ಮ ದಿಗಂತವನ್ನು ವಿಸ್ತರಿಸುತ್ತಿದ್ದೇವೆ. ಏನೋ ವಿಶೇಷವಾದದ್ದು ಕಾಯುತ್ತಿದೆ. ನಿರೀಕ್ಷಿಸಿ’ ಎಂದು ರಕ್ಷಿತ್ ಶೆಟ್ಟಿ ಟ್ವೀಟ್​ ಮಾಡಿದ್ದಾರೆ. ಅದು ಅಭಿಮಾನಿಗಳಲ್ಲಿ ಕೌತುಕ ಮೂಡಿಸಿದೆ. ರಕ್ಷಿತ್​ ಶೆಟ್ಟಿ ಒಡೆತನದ ‘ಪರಂವಾ ಸ್ಟುಡಿಯೋಸ್​’ ಮೂಲಕ ರಾತ್ರಿ 12 ಗಂಟೆಗೆ ಹೊಸ ಸುದ್ದಿ ಹೊರಬೀಳಲಿದೆ.

ನಟನೆ ಮಾತ್ರವಲ್ಲದೆ, ನಿರ್ದೇಶನ ಮತ್ತು ಸಿನಿಮಾ ನಿರ್ಮಾಣದಲ್ಲೂ ರಕ್ಷಿತ್​ ಶೆಟ್ಟಿ ತೊಡಗಿಕೊಂಡಿದ್ದಾರೆ. ಅವರು ನಿರ್ದೇಶನ ಮಾಡಲಿರುವ ಹೊಸ ಸಿನಿಮಾದ ಬಗ್ಗೆ ಅಪ್​ಡೇಟ್​ ಸಿಗಬಹುದಾ? ರಕ್ಷಿತ್​ ಅವರ ಹೊಸ ಚಿತ್ರ ಘೋಷಣೆ ಆಗಬಹುದಾ ಎಂಬಿತ್ಯಾದಿ ಪ್ರಶ್ನೆಗಳು ಅಭಿಮಾನಿಗಳ ಮನದಲ್ಲಿ ಕೊರೆಯುತ್ತಿದೆ. ರಕ್ಷಿತ್​ ಮಾಡಿರುವ ಪೋಸ್ಟ್​ಗೆ ಕಾಮೆಂಟ್​ ಮಾಡುತ್ತಿರುವ ನೆಟ್ಟಿಗರು ಹಲವು ಬಗೆಯಲ್ಲಿ ಊಹೆ ಮಾಡುತ್ತಿದ್ದಾರೆ. ರಕ್ಷಿತ್​ ಅವರು ವೆಬ್​ ಸಿರೀಸ್​ ಶುರು ಮಾಡಬಹುದು, ‘777 ಚಾರ್ಲಿ’ ಸಿನಿಮಾ ಪ್ಯಾನ್​ ಇಂಡಿಯಾ ರಿಲೀಸ್​ ಆಗಬಹುದು ಎಂದೆಲ್ಲ ಜನರು ಕಾಮೆಂಟ್​ ಮಾಡುತ್ತಿದ್ದಾರೆ.

‘ಕಿರಿಕ್​ ಪಾರ್ಟಿ 2’ ಸಿನಿಮಾ ಅನೌನ್ಸ್​ ಮಾಡಿ ಎಂದು ಕೆಲವರು ಬೇಡಿಕೆ ಇಡುತ್ತಿದ್ದಾರೆ. ಆ ಚಿತ್ರದ ಬಗ್ಗೆ ಸುದ್ದಿ ಕೇಳಲು ಅಭಿಮಾನಿಗಳಿಗೆ ಕಾತರ ಇದೆ. ’777 ಚಾರ್ಲಿ’ ಚಿತ್ರವನ್ನು ತೆಲುಗಿಗೂ ಡಬ್​ ಮಾಡಿ ಎಂದು ಟಾಲಿವುಡ್​ ಸಿನಿಪ್ರಿಯರಿಂದ ಕೋರಿಕೆ ಬರುತ್ತಿದೆ. ಅಂತಿಮವಾಗಿ ರಕ್ಷಿತ್​ ಕೊಡಲಿರುವ ಬ್ರೇಕಿಂಗ್​ ನ್ಯೂಸ್​ ಏನೆಂಬುದು ರಾತ್ರಿ 12 ಗಂಟೆಗೆ ಗೊತ್ತಾಗಬೇಕಿದೆ.

ಇನ್ನು, ರಕ್ಷಿತ್​ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತಂಡದಿಂದಲೂ ಶಿವರಾತ್ರಿ ಹಬ್ಬದ ಪ್ರಯುಕ್ತ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ತುಂಬ ಸಿಂಪಲ್​ ಆದ ಗೆಟಪ್​ನಲ್ಲಿ ರಕ್ಷಿತ್​ ಕಾಣಿಸಿಕೊಂಡಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಚಿತ್ರದ ನಾಯಕಿ ರುಕ್ಮಿಣಿ ವಸಂತ್​ ಅವರ ಲುಕ್​ ಬಹಿರಂಗಗೊಳಿಸಲಾಗಿತ್ತು. ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಹೇಮಂತ್ ಎಂ. ರಾವ್ ನಿರ್ದೇಶನ ಮಾಡುತ್ತಿದ್ದಾರೆ. ‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ಸಿನಿಮಾ ನಂತರ ರಕ್ಷಿತ್​ ಮತ್ತು ಹೇಮಂತ್​ ಒಂದಾಗಿರುವುದು ವಿಶೇಷ.

ಇದನ್ನೂ ಓದಿ: 8 ವರ್ಷಗಳ ಹಿಂದೆ ಶುರುವಾದ ಲವ್​ಸ್ಟೋರಿ ಬಗ್ಗೆ ರಕ್ಷಿತ್​ ಶೆಟ್ಟಿ ಮನದಾಳದ ಮಾತು!

ಇನ್ನೂ ಉತ್ತಂಗಕ್ಕೇರು: ರಶ್ಮಿಕಾಗೆ ಮನಃಪೂರ್ವಕವಾಗಿ ಹಾರೈಸಿದ ರಕ್ಷಿತ್​ ಶೆಟ್ಟಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ